ಕಣದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ


Team Udayavani, May 4, 2019, 11:45 AM IST

hub-7

ಅಳ್ನಾವರ: ಕಳೆದ ಮಾರ್ಚ್‌ ತಿಂಗಳಲ್ಲಿ ಅವಧಿ ಮುಗಿದಿರುವ ಸ್ಥಳೀಯ ಪಟ್ಟಣ ಪಂಚಾಯತಿಗೆ ಇದೀಗ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಒಂದು ವರ್ಷದ ಹಿಂದೆ ನೂತನ ತಾಲೂಕು ಕೇಂದ್ರವಾಗಿ ಕಾರ್ಯರೂಪಕ್ಕೆ ಬಂದ ನಂತರ ಪಪಂಗೆ ನಡೆಯುತ್ತಿರುವ ಪ್ರಥಮ ಚುನಾವಣೆ ಇದಾಗಿರುವುದರಿಂದ ಸಹಜವಾಗಿಯೇ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಯ ಗುಂಗು ಜನರ ಮನಸ್ಸಿನಲ್ಲಿ ಇನ್ನೂ ಇರುವಾಗಲೇ ಮತ್ತೂಂದು ಚುನಾವಣೆಗೆ ಪಟ್ಟಣದ ಜನ ತಯಾರಾಗುತ್ತಿದ್ದಾರೆ.

ನತದೃಷ್ಟ ಕೈ: ಸ್ಥಳೀಯ ಪಪಂ ಹಿಂದಿನ ಅವಧಿಯಲ್ಲಿ ಒಟ್ಟು 15 ಸದಸ್ಯ ಬಲದಲ್ಲಿ 9 ಕಾಂಗ್ರೆಸ್‌, 3 ಜೆಡಿಎಸ್‌, 2 ಬಿಜೆಪಿ ಹಾಗೂ 1 ಪಕ್ಷೇತರ ಸದಸ್ಯರಿದ್ದರು. 9 ಸದಸ್ಯ ಬಲದೊಂದಿಗೆ ಕಾಂಗ್ರೆಸ್‌ ಬಹುಮತ ಹೊಂದಿದ್ದರೂ ಮೊದಲ ಎರಡೂವರೆ ವರ್ಷದ ಅವಧಿಯಲ್ಲಿ ಮೀಸಲಾತಿ ಕಾರಣ ಅಧಿಕಾರದಿಂದ ದೂರ ಉಳಿಯುವಂತಾಗಿತ್ತು. ಕೇವಲ ಮೂರು ಸದಸ್ಯರನ್ನು ಒಳಗೊಂಡಿದ್ದ ಜೆಡಿಎಸ್‌ ಪಕ್ಷವು ಅಧ್ಯಕ್ಷ ಸ್ಥಾನದ ಅಧಿಕಾರ ಅನುಭವಿಸುವಂತಾಗಿತ್ತು. ಬಹುಮತ ಹೊಂದಿದ್ದ ಕಾಂಗ್ರೆಸ್‌ ಸದಸ್ಯರು ಕೈ ಕೈ ಹಿಸುಕಿಕೊಂಡಿದ್ದರು.

ನಂತರದ ಎರಡುವರೆ ವರ್ಷದ ಅವಧಿಯಲ್ಲಿಯೂ ಸಹ ಒಳ ತಿಕ್ಕಾಟದಿಂದ ಸುಮಾರು ಒಂದುವರೆ ವರ್ಷ ಉಪಾಧ್ಯಕ್ಷರ ಮೇಲೆಯೇ ಕಾಲ ನೂಕಿ ಕೊನೆಗೆ ಬಿಜೆಪಿ ಸದಸ್ಯರೊಬ್ಬರನ್ನು ಕಾಂಗ್ರೆಸ್‌ಗೆ ಕರೆ ತಂದು ಅಧ್ಯಕ್ಷ ಗಾದಿಯನ್ನು ಅವರಿಗೊಪ್ಪಿಸಿದ ಕೀರ್ತಿ ಕಾಂಗ್ರೆಸ್‌ ಸದಸ್ಯರಿಗೆ ಸಲ್ಲುತ್ತದೆ.

ಚಟುವಟಿಕೆ ಚುರುಕು: ಮಾರ್ಚ್‌ ತಿಂಗಳಲ್ಲಿ ಹಿಂದಿನ ಆಡಳಿತ ಮಂಡಳಿಯ ಅಧಿಕಾರ ಮುಗಿದು ಇನ್ನೂ ಮುರ್‍ನಾಲ್ಕು ತಿಂಗಳು ಗತಿಸಿದ ನಂತರ ಚುನಾವಣೆ ಘೋಷಣೆಯಾಗಬಹುದೆಂದು ಬಹುತೇಕ ಆಕಾಂಕ್ಷಿಗಳ ಅನಿಸಿಕೆಯಾಗಿತ್ತು. ಆದರೆ ಏಕಾಏಕಿ ಚುನಾವಣೆ ಅಧಿಸೂಚನೆ ಹೊರಬೀಳುತ್ತಿದ್ದಂತೆ ಕಾರ್ಯ ಪ್ರವೃತ್ತರಾಗಿರುವ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಮುಖಂಡರನ್ನು ಭೇಟಿಯಾಗುತ್ತಿದ್ದಾರೆ.

ಕೆಲ ದಿನಗಳ ಹಿಂದೆ ನಡೆದಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಜಂಟಿಯಾಗಿ ಚುನವಣೆ ಪ್ರಚಾರ ಕೈಗೊಂಡಿದ್ದರು. ಆದರೆ ಈಗ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಅನಿವಾರ್ಯತೆ ಒದಗಿ ಬಂದಿದ್ದು, ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಒಂದು ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರು ಸಹ ಸ್ಥಳೀಯವಾಗಿ ಮೈತ್ರಿ ಅಸಾಧ್ಯ ಎನ್ನಲಾಗುತ್ತಿದೆ. ಆಕಾಂಕ್ಷಿಗಳು ಅಧಿಕವಾಗಿದ್ದು ಮೈತ್ರಿ ಏರ್ಪಟ್ಟರೆ ಬಹುತೇಕರು ಸ್ವತಂತ್ರ ಅಭ್ಯರ್ಥಿಗಳಾಗಿ ಕಣದಲ್ಲಿರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

15ರಿಂದ 18ಕ್ಕೆ ಏರಿಕೆ: ಪಟ್ಟಣದಲ್ಲಿನ ವಾರ್ಡ್‌ಗಳ ಪುನರ್‌ ವಿಂಗಡಣೆಯಾಗಿದ್ದು, ಸದಸ್ಯರ ಸಂಖ್ಯೆ 15ರಿಂದ 18ಕ್ಕೆ ಏರಿದೆ. ಬಹುತೇಕ ವಾರ್ಡ್‌ಗಳು ಬದಲಾವಣೆಯಾಗಿದ್ದು ಮೊದಲಿನ ಮೀಸಲಾತಿ ಅದಲು ಬದಲಾಗಿದೆ. ಹಾಗಾಗಿ ಕಳೆದ ಅವಧಿಯಲ್ಲಿ ಸದಸ್ಯರಾಗಿದ್ದವರು ಪುನರಾಯ್ಕೆ ಬಯಸುತ್ತಿರುವ ಬಹುತೇಕರು ಹೊಸ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಚುನಾವಣೆ ಇನ್ನೂ ಕೆಲವು ತಿಂಗಳು ಮುಂದೆ ಹೋಗಬಹುದು, ಅಲ್ಲಿವರೆಗೆ ಮೀಸಲಾತಿ ಬದಲಾವಣೆ ಮಾಡಿಕೊಂಡು ಬರಬಹುದೆಂದು ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆ ಮೂಡಿದೆ.

ಹಿಂದಿನ ಚುನಾವಣೆಯಲ್ಲಿ ಈ ಭಾಗವನ್ನು ಕಾಂಗ್ರೆಸ್‌ನ ಸಂತೊಷ ಲಾಡ್‌ ಪ್ರತಿನಿಧಿಸುತ್ತಿದ್ದರು. ಆದರೆ ಈ ಸಲ ಬಿಜೆಪಿಯ ಸಿ.ಎಂ. ನಿಂಬಣ್ಣವರ ಈ ಭಾಗದ ಶಾಸಕರಾಗಿರುವುದರಿಂದ ಅವರ ಪ್ರಭಾವ ಚುನಾವಣೆ ಮೇಲೆ ಬೀಳುವುದು ಸಹಜವೆನ್ನಬಹುದು. ಹೇಗಾದರೂ ಮಾಡಿ ಪಪಂ ಆಡಳಿತವನ್ನು ವಶಕ್ಕೆ ಪಡೆಯಬೇಕೆನ್ನುವುದು ಬಿಜೆಪಿ ಮುಖಂಡರಿಂದ ಮಾತುಗಳು ಕೇಳಿಬರುತ್ತಿವೆ. ಮತ್ತೂಂದೆಡೆ ಪಪಂ ಆಡಳಿತ ತಮ್ಮ ಕೈ ಬಿಡಬಾರದೆಂದು ಕಾಂಗ್ರೆಸ್‌ ಮುಖಂಡರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.