ರಾಜಕೀಯದಲ್ಲಿ ನಶೆ ಗಲಾಟೆ!


Team Udayavani, Oct 20, 2021, 6:30 AM IST

ರಾಜಕೀಯದಲ್ಲಿ ನಶೆ ಗಲಾಟೆ!

ಹುಬ್ಬಳ್ಳಿ: ಕಾಂಗ್ರೆಸ್‌ನ “ಮೋದಿ ಹೆಬ್ಬೆಟ್ಟು’ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮುಗಿಬಿದ್ದಿದೆ. ರಾಹುಲ್‌ಗೆ “ಮಾದಕ ಲೋಕದ ನಂಟು’ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿದ್ದು, ಕಾಂಗ್ರೆಸ್‌ ಕೆಂಡಾಮಂಡಲವಾಗಿದೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, “ರಾಹುಲ್‌ ಗಾಂಧಿ ಮಾದಕ ದ್ರವ್ಯ ವ್ಯಸನಿ. ಡ್ರಗ್‌ ಪೆಡ್ಲರ್‌ ಕೂಡ ಆಗಿದ್ದಾರೆ. ಇದು ನಾನು ಸೃಷ್ಟಿ ಮಾಡಿದ್ದಲ್ಲ. ಹಲವು ವರದಿಗಳು ಇದನ್ನು ಪುಷ್ಟೀಕರಿಸಿವೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಧ್ವನಿಗೂಡಿಸಿರುವ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, “ರಾಹುಲ್‌ ಗಾಂಧಿ  ಡ್ರಗ್‌ ಪೆಡ್ಲರ್‌ ಅಲ್ಲ ಎಂದರೆ ಕಾಂಗ್ರೆಸ್‌ ನಾಯಕರು ಸರ್ಟಿಫಿಕೆಟ್‌ ತೋರಿಸಲಿ. ಅವರು ಮಾತನಾಡುವಾಗ ತೊದಲುವುದು, ಜೋಲಿ ಹೊಡೆಯುವುದನ್ನು ನೋಡಿದರೆ ಸಂಶಯ ಮೂಡುತ್ತದೆ ಎನಿಸುತ್ತಿದೆ’ ಎಂದಿದ್ದಾರೆ.

ನಿಮ್ಹಾನ್ಸ್‌ಗೆ ಸೇರಿಸಬೇಕು
ಬಿಜೆಪಿ ನಾಯಕರ ಹೇಳಿಕೆ ವಿವಾದದ ಸ್ವರೂಪ ಪಡೆದಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿ. ಮತ್ತಿತರ ಕಾಂಗ್ರೆಸ್‌ ನಾಯಕರು ನಳಿನ್‌ ವಿರುದ್ಧ ಹರಿಹಾಯ್ದಿದ್ದಾರೆ.

ಸಿಂದಗಿ ಪ್ರಚಾರದ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, “ನಳಿನ್‌ಗೆ ಹುಚ್ಚುಹಿಡಿದಿದೆ. ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು’ ಎಂದು ಕಿಡಿಕಾರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಡಿಕೆಶಿ ವಿರುದ್ಧ ಬಿಜೆಪಿ ದೂರು
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಬಗ್ಗೆ ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ ಸಂಬಂಧ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕೆಪಿಸಿಸಿ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಪಶ್ಚಿಮ ವಿಭಾಗ ಸಿಇಎನ್‌ ಠಾಣೆಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಟ್ವಿಟರ್‌ ಖಾತೆಯಲ್ಲಿ ನಳಿನ್‌ರನ್ನು ಕೆಟ್ಟ ಪದಗಳಿಂದ ನಿಂದಿಸಿ, ಆಕ್ಷೇಪಾರ್ಹ ಪೋಸ್ಟ್‌ ಮಾಡಲಾಗಿದೆ ಎಂದು ದೂರಲಾಗಿದೆ.

ನಿನ್ನೆ ಮಾತನಾಡುವಾಗ ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆಯಿದೆ ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷರು ರಾಹುಲ್‌ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ.
– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

 

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.