ಕರದಾತರ ಅಭಿಪ್ರಾಯಕ್ಕೆ ಪಾಲಿಕೆ ಮಣೆ


Team Udayavani, Jul 18, 2017, 12:50 PM IST

hub2.jpg

ಹುಬ್ಬಳ್ಳಿ: ಘನತ್ಯಾಜ್ಯ ನಿರ್ವಹಣೆ ಹೆಸರಲ್ಲಿ ಜನರ ಮೇಲೆ ಹೆಚ್ಚುವರಿ ಸೆಸ್‌ ಹಾಕುವುದಕ್ಕೆ ಪಾಲಿಕೆ ಸಾಮಾನ್ಯ ಸಭೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಹಾಪೌರ ಡಿ.ಕೆ. ಚವ್ಹಾಣ ಸೆಸ್‌ ಆಕರಣೆ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ ಮತ್ತೂಮ್ಮೆ ಸಭೆಯಲ್ಲಿ ಮಂಡಿಸುವಂತೆ ಆಯುಕ್ತರಿಗೆ ಆದೇಶಿಸಿದರು. 

ಸೋಮವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಘನತ್ಯಾಜ್ಯ ನಿರ್ವಹಣೆ ಸೆಸ್‌ ಆಕರಣೆ ವಿಷಯ ಮಂಡನೆ ಮಾಡಿದಾಗ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಡಾ| ಪಾಂಡುರಂಗ ಪಾಟೀಲ, ಒಂದೇ ಆಸ್ತಿ ಮೇಲೆ ಎಷ್ಟು ವಿಧವಾದ ಕರ ಹಾಕಬಹುದಾಗಿದೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. 

ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಆಧಾರದಲ್ಲಿ ಘನತ್ಯಾಜ್ಯ ನಿರ್ವಹಣೆ ಹೆಚ್ಚುವರಿ ಸೆಸ್‌ ಹಾಕುವುದು ಎಷ್ಟರ ಮಟ್ಟಿಗೆ ಸರಿ, ಕರ ಇಲ್ಲವೆ ಸೆಸ್‌ ಆಕರಣೆಗೆ ಕರದಾತರ ಒಪ್ಪಿಗೆ ಅವಶ್ಯವಾಗಿದೆ. ಈಗಾಗಲೇ ಆಸ್ತಿಕರದಲ್ಲಿಯೇ ಮೂಲ ಸೌಲಭ್ಯಗಳ  ನೀಡಿಕೆಗಾಗಿಯೇ ಕರ-ಸೆಸ್‌ ಹಾಕಲಾಗುತ್ತಿದೆ. ಇದೀಗಮತ್ತೂಂದು ಸೆಸ್‌ ಎಂಬುದು ಬಹುವಿಧವಾದ ಕರ ಹಾಕಿದಂತಾಗಲಿದೆ ಎಂದರು. 

ಕಾಂಗ್ರೆಸ್‌ನ ಗಣೇಶ ಟಗರಗುಂಟಿ, ಬಿಜೆಪಿಯ ಸುಧೀರ ಸರಾಫ್ ಸೇರಿದಂತೆ ಅನೇಕ ಸದಸ್ಯರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಮಹಾಪೌರರು ಈ ಬಗ್ಗೆ ವಲಯವಾರು ನಾಗರಿಕರು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಅನಂತರ ಸೆಸ್‌ ನಿರ್ಧಾರ ಕೈಗೊಳ್ಳಬೇಕು.

ಅಲ್ಲಿವರೆಗೆ ಈ ಪ್ರಸ್ತಾವನೆ ಜಾರಿ ಮಾಡುವುದು ಬೇಡ ಎಂದು ಆದೇಶಿಸಿದರು. ಘನತ್ಯಾಜ್ಯ ನಿರ್ವಹಣೆಗಾಗಿ ಮನೆ, ವಾಣಿಜ್ಯ, ಕೈಗಾರಿಕೆ ಇನ್ನಿತರ ಕಟ್ಟಡಗಳ ಮೇಲೆ 10ರಿಂದ 600 ರೂ.ವರೆಗೆ ಸೆಸ್‌ ಆಕರಣೆಗೆ ಯೋಜಿಸಿ ಪ್ರಸ್ತಾವನೆ ಮಂಡಿಸಲಾಗಿತ್ತು. 

ಹಣದ ಕೊರತೆಯಿಲ್ಲ: ಶೌಚಾಲಯ ನಿರ್ಮಾಣ ವಿಷಯವಾಗಿ ಸದಸ್ಯರಾದ ಶಿವಪ್ಪ ಬಡವಣ್ಣವರ, ಮೋಹನ ಹಿರೇಮನಿ, ಸತೀಶ ಹಾನಗಲ್ಲ, ಶಿವಾನಂದ ಮುತ್ತಣ್ಣವರ ಮಾತನಾಡಿ, ಶೌಚಾಲಯ ಕಟ್ಟಿಕೊಳ್ಳಲು ಮುಂದಾದವರಿಗೆ ಸಹಾಯಧನ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು. 

ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ, ಅವಳಿ ನಗರವನ್ನು ಬಹಿರ್ದೆಸೆ ಮುಕ್ತವಾಗಿಸುವ ನಿಟ್ಟಿನಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೆ ಯಾವುದೇ ಹಣದ ಕೊರತೆ ಇಲ್ಲ. ಶೌಚಾಲಯಗಳ ನಿರ್ಮಾಣದ ಕುರಿತಾಗಿ ಫೋಟೋ ತೆಗೆದು ಅಪ್‌ಲೋಡ್‌ ಮಾಡುವುದು ಬಿಲ್‌ ಕಲೆಕ್ಟರ್‌ಗಳ ಜವಾಬ್ದಾರಿ. 

ಕೆಲವರು ನಿರ್ಲಕ್ಷ್ಯ ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಸಮಸ್ಯೆ ಇರುವ ವಾರ್ಡ್‌ಗಳ ಸದಸ್ಯರು ಲಿಖೀತ ದೂರು ನೀಡಿದಲ್ಲಿ ಅಂತಹ ಬಿಲ್‌ ಕಲೆಕ್ಟರ್‌ ಗಳನ್ನು ಅಮಾನತು ಮಾಡುವುದಾಗಿ ಹೇಳಿದರು. ಅವಳಿ ನಗರದಲ್ಲಿ ಅನೇಕರು ಶುಲ್ಕ ಪಾವತಿಸಿ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸದಸ್ಯರಾದ ಮಂಜುನಾಥ ಚಿತಗಿಂಜಲ, ಗಣೇಶ ಟಗರಗುಂಟಿ ಇನ್ನಿತರ ಸದಸ್ಯರು ಆರೋಪಿಸಿದರು.

ಡಾ| ಪಾಂಡುರಂಗ ಪಾಟೀಲ ಮಾತನಾಡಿ, ಸರಕಾರದ ಪತ್ರವನ್ನೇ ಕಾಯ್ದೆ ಎಂದುಕೊಂಡು ಪಾಲಿಗೆ ಬರಬೇಕಾದ ಆದಾಯ ಪಡೆಯದಿರುವುದು ಸರಿಯಲ್ಲ ಎಂದರು. ಖಾತೆಗಳ ವರ್ಗಾವಣೆ ಕುರಿತಾಗಿ ಹಳೇ ಪದ್ಧತಿಯನ್ನು ಜಾರಿಗೊಳಿಸುವಂತೆ ಮಹಾಪೌರರು ಆದೇಶಿಸಿದರು.   

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.