ಹಳ್ಳ ಹಿದ್ದೋಯ್ತು ರಸ್ತೆ ತೇಪೆ ಕಾಮಗಾರಿ


Team Udayavani, Nov 20, 2019, 12:02 PM IST

huballi-tdy-3

ಹುಬ್ಬಳ್ಳಿ: ಮಳೆಯಿಂದ ಹದಗೆಟ್ಟಿದ್ದ ನಗರದ ರಸ್ತೆಗಳ ಕಾಮಗಾರಿ ಆರಂಭಗೊಂಡಿದ್ದರಿಂದ ಧೂಳಿನ ರಸ್ತೆಗಳಿಗೆ ಮುಕ್ತಿ ಸಿಕ್ಕಿತು ಎಂದು ಸಮಾಧಾನ ಪಟ್ಟುಕೊಂಡಿದ್ದ ಜನರು ಕಳಪೆ ಕಾಮಗಾರಿಯಿಂದಾಗಿ ಮತ್ತೆ ಆತಂಕಕ್ಕೀಡಾಗಿದ್ದಾರೆ.

ಒಂದೆಡೆ ರಸ್ತೆಗೆ ಹಾಕಿದ ಡಾಂಬರ್‌ ಎರಡನೇ ದಿನಕ್ಕೆ ಕಿತ್ತುಕೊಂಡು ಹೋಗುತ್ತಿದ್ದರೆ, ಇನ್ನೊಂದೆಡೆ ರಸ್ತೆಗೆ ಹಾಕಲಾದ ಖಡಿ ರಸ್ತೆಯ ತುಂಬೆಲ್ಲ ಹರಡಿ ಸಂಚಾರವನ್ನು ದುಸ್ತರವಾಗಿಸಿದೆ.

ಒಟ್ಟಿನಲ್ಲಿ ಅವಳಿನಗರದ ರಸ್ತೆಗಳ ಸ್ಥಿತಿ ಅಧೋಗತಿ ಎಂಬಂತಾಗಿದೆ. ಎಲ್ಲಿ ನೋಡಿದರೂ ಧೂಳು-ತಗ್ಗುಗಳ ದರ್ಶನ ಎಂದು ಜನರು ಬೊಬ್ಬೆ ಹೊಡೆಯುತ್ತಿದ್ದಾಗ, ಮಳೆ ಸೇರಿದಂತೆ ಇನ್ನಿತರ ಕಾರಣಗಳನ್ನು ನೀಡಿ ಹು-ಧಾ ಮಹಾನಗರ ಪಾಲಿಕೆ ಸಮಯ ಕಳೆಯುತ್ತಾ, ಇದೀಗ ಅವಳಿನಗರದಲ್ಲಿ ಎಲ್ಲೆಡೆ ತಗ್ಗು ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಅದರಲ್ಲೂ ಕಳಪೆ ಕಾಮಗಾರಿ ಮಾಡುವ ಮೂಲಕ ಮತ್ತೆ ಜನರ ಅಕ್ರೋಶಕ್ಕೆ ತುತ್ತಾಗುತ್ತಿದೆ.

ಹು-ಧಾ ಮಹಾನಗರ ಪಾಲಿಕೆ ಕಚೇರಿಯ ಕೂಗಳತೆ ದೂರದಲ್ಲಿ ಸರ್‌ ಸಿದ್ದಪ್ಪ ಕಂಬಳಿ ಪ್ರತಿಮೆ ಮುಂಭಾಗದಲ್ಲಿ ಸಿಗ್ನಲ್‌ ಅಳವಡಿಕೆಗಾಗಿ ತೆಗೆಯಲಾಗಿದ್ದ ಗುಂಡಿಯನ್ನು ಕಳೆದ ಎರಡು ದಿನಗಳ ಕೆಳಗೆ ಡಾಂಬರ್‌ ಹಾಕಿ ಮುಚ್ಚಲಾಗಿತ್ತು. ಆದರೆ ಎರಡೇ ದಿನಕ್ಕೆ ಡಾಂಬರ್‌ ಕಿತ್ತುಕೊಂಡು ಹೋಗುತ್ತಿದೆ. ಇದು ಕಾಮಗಾರಿಯ ಸ್ಥಿತಿ-ಗತಿ ಬಿಂಬಿಸುತ್ತಿದೆ.

ಕಾಟಾಚಾರಕ್ಕೆ ತೇಪ : ಅವಳಿನಗರದಲ್ಲಿ ತಗ್ಗು-ಗುಂಡಿ ಮುಚ್ಚುವ ಕಾರ್ಯಕ್ಕೆ ಕೈ ಹಾಕಿರುವ ಹು-ಧಾ ಮಹಾನಗರ ಪಾಲಿಕೆ ಕಾಟಾಚಾರಕ್ಕೆಂಬಂತೆ ತೇಪೆ ಕಾರ್ಯ ಮಾಡಿಸುತ್ತಿದೆ. ಒಂದು ಗುಂಡಿ ಮುಚ್ಚಿದರೆ ಇನ್ನೊಂದು ಗುಂಡಿ ಹಾಗೇ ಬಿಟ್ಟು ಹೋಗುತ್ತಿದ್ದಾರೆ. ದೊಡ್ಡ ದೊಡ್ಡ ಗುಂಡಿಗಳ ಸನಿಹದಲ್ಲಿ ಗುಂಡಿಗಳನ್ನು ಮುಚ್ಚಿದರೆ ಪಕ್ಕದಲ್ಲಿರುವ ಗುಂಡಿಗಳನ್ನು ಮುಚ್ಚುತ್ತಿಲ್ಲ. ಇದೀಗ ಕೋರ್ಟ್‌ ವೃತ್ತದಲ್ಲಿ ಬಿದ್ದಿರುವ ದೊಡ್ಡ ಗುಂಡಿಯನ್ನು ಈಗಾಗಲೇ ಮುಚ್ಚಲಾಗಿದೆ.

ಆದರೆ ಅಲ್ಲಿಯೇ ಪಕ್ಕದಲ್ಲಿರುವ ಕಿತ್ತೂರು ಚನ್ನಮ್ಮ ವೃತ್ತದಿಂದ ಕೋರ್ಟ್‌ ವೃತ್ತಕ್ಕೆ ಬರುವ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿ ಹಾಗೆಯೇ ಬಿಡಲಾಗಿದೆ. ಇನ್ನು ಕೋರ್ಟ್‌ ವೃತ್ತದಿಂದ ಸಾಯಿಬಾಬಾ ಮಂದಿರದ ಮುಂಭಾಗದಲ್ಲಿ ಬಿದ್ದಿರುವ ತಗ್ಗುಗಳು ಇವರಿಗೇಕೆ ಕಾಣುವುದಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅವಳಿನಗರದಲ್ಲಿ ನಡೆಯುತ್ತಿರುವ ತೇಪೆ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿತ್ತು. ಎಲ್ಲೆಡೆ ಧೂಳು ಎನ್ನುತ್ತಿದ್ದ ಜನರು ತೇಪೆ ಕಾರ್ಯ ಮಾಡುತ್ತಿದ್ದಾರೆ ಎಂದು ಸಂತಸ ಪಡುವಷ್ಟರಲ್ಲಿಯೇ, ಹಾಕಿರುವ ತೇಪೆ ಕಿತ್ತು ಹೋಗುತ್ತಿದೆ.

ಜನಾಕ್ರೋಶದ ನಂತರ ಪಾಲಿಕೆ ಇದೀಗ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಕೈ ಹಾಕಿದೆ. ಇಲ್ಲಿ ನೋಡಿದರೆ ಹಾಕಿದ ಎರಡೇ ದಿನಕ್ಕೆ ಡಾಂಬರ್‌ ಕಿತ್ತುಕೊಂಡು ಹೋಗುತ್ತಿದೆ. ಕಳಪೆ ಕಾಮಗಾರಿ ನಡೆದಿರುವುದು ಎದ್ದು ಕಾಣುತ್ತಿದ್ದು, ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಸರಿಯಾಗಿ ಗುಂಡಿ ಮುಚ್ಚಿಸುವ ಕೆಲಸ ಮಾಡಬೇಕು. ಕಳಪೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು.  -ಶೇಖರಯ್ಯ ಮಠಪತಿ, ಹು-ಧಾ ಆಟೋ ರಿಕ್ಷಾ ಮಾಲೀಕರು-ಚಾಲಕರ ಸಂಘದ ಅಧ್ಯಕ್ಷ

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.