ಸಂಚಾರ ದುಸ್ತರ


Team Udayavani, Jul 24, 2019, 10:26 AM IST

hubali-tdy-03

ಹುಬ್ಬಳ್ಳಿ: ಜಂಗ್ಲಿ ಪೇಟ 3ನೇ ಕ್ರಾಸ್‌ ರಸ್ತೆಯಲ್ಲಿ ಮಳೆ ನೀರಿನೊಂದಿಗೆ ಚರಂಡಿ ನೀರು.

ಹುಬ್ಬಳ್ಳಿ: ಮಹಾನಗರ ಪಾಲಿಕೆ ಹಳೇ ಹುಬ್ಬಳ್ಳಿಯನ್ನು ನಿರ್ಲಕ್ಷಿಸಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು. ಇಲ್ಲಿನ ರಸ್ತೆಗಳ ದುಸ್ಥಿತಿಯನ್ನು ಗಮನಿಸಿದರೆ ನಿವಾಸಿಗಳ ದೂರಿನಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲವೆಂಬುದು ಅರಿವಿಗೆ ಬರುತ್ತದೆ.

ಪಾಲಿಕೆ ವಲಯ ಸಂಖ್ಯೆ-10ರ ವ್ಯಾಪ್ತಿಗೆ ಬರುವ ಹಳೇ ಹುಬ್ಬಳ್ಳಿ ಮೂಲಕವೇ ನೇಕಾರ ನಗರ, ಈಶ್ವರ ನಗರ, ತಿಮ್ಮಸಾಗರ, ಗಿರಿಯಾಲಕ್ಕೆ ಹೋಗಬೇಕು. ಇಲ್ಲಿ ಜನಸಂದಣಿ ಹೆಚ್ಚಾಗಿರುವುದರಿಂದ ರಸ್ತೆ ಸಂಚಾರ ದುಸ್ತರವಾಗಿದೆ. ತೀರಾ ಇಕ್ಕಟ್ಟಾದ ರಸ್ತೆಗಳು ಇರುವುದರಿಂದ ಇಲ್ಲಿ ಬೆಳಗ್ಗೆ ಹಾಗೂ ಸಂಜೆ ಅವಧಿಯಲ್ಲಿ ವಾಹನಗಳು ಸಂಚರಿಸುವುದು ದುಸ್ತರವಾಗಿದೆ.

ವಾಹನ ನಿಲುಗಡೆಗೆ ಜಾಗ ಇಲ್ಲದ್ದರಿಂದ, ಇಕ್ಕಟ್ಟಾದ ರಸ್ತೆಗಳ ಪಕ್ಕದಲ್ಲೇ ವಾಹನಗಳ ನಿಲುಗಡೆ ಮಾಡುವುದರಿಂದ ವಾಹನಗಳು ಸಂಚರಿಸುವುದು ಕಷ್ಟವಾಗಿದೆ. ಇದಲ್ಲದೇ ರಸ್ತೆಗಳ ಮಧ್ಯೆಯೇ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಸರ್ಕಸ್‌ ಮಾಡುತ್ತಲೇ ರಸ್ತೆ ದಾಟಬೇಕಾದ ಅನಿವಾರ್ಯತೆ ಇದೆ.

ಇಲ್ಲಿನ ನಿವಾಸಿಗಳ ಆಗ್ರಹದಿಂದ ರಸ್ತೆಗಳ ಮಧ್ಯೆ ಬಿದ್ದಿರುವ ಗುಂಡಿಗಳಿಗೆ 2 ತಿಂಗಳ ಹಿಂದೆ ಖಡಿ ಹಾಕಲಾಗಿದೆ ಆದರೆ ಮಳೆ ಹಾಗೂ ನಿರಂತರ ವಾಹನ ಸಂಚಾರದಿಂದ ಖಡಿ ಕಿತ್ತೋಗಿ ಮತ್ತೆ ಗುಂಡಿ ಉಂಟಾಗಿವೆ. ಅಲ್ಲದೇ ಖಡಿ ರಸ್ತೆ ತುಂಬೆಲ್ಲ ಹರಡಿ ಸಂಚಾರಕ್ಕೆ ಇನ್ನಷ್ಟು ವ್ಯತ್ಯಯ ಉಂಟಾಗಿದೆ.

ಜಂಗ್ಲಿ ಪೇಟೆ ವೃತ್ತದಿಂದ ಮುಂದೆ ಬಾಣಂತಿಕಟ್ಟೆಗೆ ಸಂಪರ್ಕ ಕಲ್ಪಿಸುವ 3 ನೇ ಕ್ರಾಸ್‌ ರಸ್ತೆಯ ಸ್ಥಿತಿ ಅಧ್ವಾನವಾಗಿದೆ. ಅಕ್ಕ ಪಕ್ಕದ ಉಪ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದ್ದರೂ ಈ ರಸ್ತೆಯನ್ನು ನಿರ್ಲಕ್ಷಿಸಲಾಗಿದೆ. ನೇಕಾರ ನಗರ ಬಸ್‌ ಸಂಚರಿಸುವ ಮುಖ್ಯ ರಸ್ತೆ ಇದಾಗಿದ್ದು, ಇಲ್ಲಿನ ನಿವಾಸಿಗಳು ಹಲವು ಬಾರಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರೂ, ರಸ್ತೆ ತಡೆ ಮಾಡಿ ಪ್ರತಿಭಟಿಸಿದ್ದರೂ ರಸ್ತೆ ಅಭಿವೃದ್ಧಿ ಪಡಿಸದ್ದರಿಂದ ನಿವಾಸಿಗಳು ಬೇಸತ್ತಿದ್ದಾರೆ.

ಬಸ್‌ ಸಂಚಾರದಿಂದ ರಸ್ತೆ ಹದಗೆಡುತ್ತಿರುವುದರಿಂದ ಈ ರಸ್ತೆಯಲ್ಲಿ ಬಸ್‌ ಸಂಚಾರವನ್ನೇ ನಿಷೇಧಿಸಿದ್ದಾರೆ. ರಸ್ತೆ ದುರಸ್ತಿ ಬಗ್ಗೆ ಆಗ್ರಹಿಸಿದ ಸಂದರ್ಭದಲ್ಲಿ ಈ ವಾರ್ಡ್‌ನ ಪಾಲಿಕೆ ಸದಸ್ಯೆಯ ಪತಿ ಭರವಸೆ ನೀಡಿ ಹೋಗುತ್ತಾರೆಯೇ ಹೊರತು ಕಾಮಗಾರಿ ಮಾತ್ರ ಕೈಗೊಂಡಿಲ್ಲ. ಒಳಚರಂಡಿ ಒಡೆದು ಕೊಳಚೆ ರಸ್ತೆಯಲ್ಲಿಯೇ ಹರಿದು ಹೋಗುತ್ತಿದ್ದರೂ ಕೇಳುವವರೇ ಇಲ್ಲವಾಗಿದೆ.

ಗೌಳಿಗಲ್ಲಿ ಮುಖ್ಯ ರಸ್ತೆ, ಹಿರೇಪೇಟೆ ಮುಖ್ಯ ರಸ್ತೆ, ಬಾಗಾರ ಪೇಟ ರಸ್ತೆ ಸ್ಥಿತಿ ಕೂಡ ಇದಕ್ಕಿಂತ ಭಿನ್ನವಾಗಿಲ್ಲ. ಮಳೆಗಾಲಕ್ಕಿಂತ ಮುಂಚೆಯೇ ರಸ್ತೆಗಳ ದುರಸ್ತಿ ಮಾಡುವಂತೆ ಗುಂಡಿ ಮುಚ್ಚುವಂತೆ ಒತ್ತಾಯಿಸಿದರೂ ಪಾಲಿಕೆ ಅಧಿಕಾರಿಗಳು ಕಡೆಗಣಿಸಿದ್ದಲ್ಲದೇ ಮಾನ್ಸೂನ್‌ ಆರಂಭಗೊಂಡ ನಂತರ ಗುಂಡಿಗಳಿಗೆ ಖಡಿ ತುಂಬುವ ಕೆಲಸ ಕೈಗೊಳ್ಳಲಾಗಿದೆ. ಇದು ಸಮಸ್ಯೆ ಬಗೆಹರಿಸುವ ಬದಲು ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸುವಂತೆ ಮಾಡಿದೆ.

ಹಲವು ಕ್ರಾಸ್‌ಗಳಲ್ಲಿ ಕಾಂಕ್ರೀಟ್ ರಸ್ತೆ ಮಾಡಲಾಗಿದೆ. ಆದರೆ ಇಲ್ಲಿ ಮತ್ತೂಂದು ಸಮಸ್ಯೆ ಉದ್ಭವವಾಗಿದೆ. ಕಾಂಕ್ರೀಟ್ ರಸ್ತೆಗಳ ಅಕ್ಕಪಕ್ಕದಲ್ಲಿ ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಮಾಡದ್ದರಿಂದ ನೀರು ಮನೆಯೊಳಗೆ ನುಗ್ಗುತ್ತದೆ ಎಂಬುದು ಜನರ ಆರೋಪ.

ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಸಮರ್ಪಕ ಕ್ರಮ ಕೈಗೊಳ್ಳಬೇಕೆಂಬುದು ಇಲ್ಲಿನ ಜನರ ಆಗ್ರಹವಾಗಿದೆ. ಇನ್ನು ಕೆಲ ತಿಂಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಗಳು ನಡೆಯಲಿವೆ. ಹಳೇ ಹುಬ್ಬಳ್ಳಿ ಭಾಗದಲ್ಲಿ ಗುಂಡಿಗಳಿಂದ ತುಂಬಿದ ರಸ್ತೆಗಳು ಚುನಾವಣೆಯಲ್ಲಿ ಪ್ರಮುಖ ವಿಷಯವಾಗುವುದರಲ್ಲಿ ಸಂಶಯವೇ ಇಲ್ಲ.

ಸ್ಮಾರ್ಟ್‌ ಸಿಟಿ ಅನುಷ್ಠಾನ ಮಾಡುವ ಮೊದಲು ಹಳೇ ಹುಬ್ಬಳ್ಳಿ ಭಾಗದ ಬಡಾವಣೆಗಳಿಗೆ ಮೂಲಸೌಲಭ್ಯ ಕಲ್ಪಿಸಬೇಕು. ರಸ್ತೆಗಳ ದುರಸ್ತಿಗೆ ಮನವಿ ಮಾಡಿದ್ದರೂ ಪಾಲಿಕೆಯಿಂದ ಸ್ಪಂದನೆ ಸಿಗುತ್ತಿಲ್ಲ. ವೈಜ್ಞಾನಿಕವಾಗಿ ರಸ್ತೆಗಳ ದುರಸ್ತಿ ಮಾಡಬೇಕಿದೆ. ರಸ್ತೆ ಪಕ್ಕದಲ್ಲಿ ನೀರು ಹರಿಯಲು ಸಮರ್ಪಕವಾಗಿ ಚರಂಡಿಗಳನ್ನು ನಿರ್ಮಿಸಬೇಕಿದೆ. • ಅನಿಲ್ ಬದ್ದಿ, ಸ್ಥಳೀಯ ನಿವಾಸಿ
•ಇಕ್ಕಟ್ಟಾದ ರಸ್ತೆಗಳಲ್ಲಿ ವಾಹನಗಳು ಸಂಚರಿಸುವುದು ಕಷ್ಟ ಕಷ್ಟ•ಗುಂಡಿ ಮುಚ್ಚಲು ಖಡಿ ಹಾಕಲಾಗಿದೆಯಾದ್ರೂ ಕಿತ್ತೋಗಿದೆ
•ಬಾಣಂತಿಕಟ್ಟೆಗೆ ಸಂಪರ್ಕ ಕಲ್ಪಿಸುವ 3ನೇ ಕ್ರಾಸ್‌ ರಸ್ತೆ ಸ್ಥಿತಿ ಅಧ್ವಾನ
•ಒಳಚರಂಡಿ ಒಡೆದು ರಸ್ತೆಯಲ್ಲೇ ಹರಿಯುತ್ತಿದ್ದರೂ ಕೇಳ್ಳೋರೇ ಇಲ್ಲ
•ಗೌಳಿಗಲ್ಲಿ,ಹಿರೇಪೇಟೆ ಮುಖ್ಯ ರಸ್ತೆ, ಬಾಗಾರ ಪೇಟೆ ರಸ್ತೆ ಇದಕ್ಕೆ ಹೊರತಾಗಿಲ್ಲ
•ಮಳೆ ನೀರು ಹೋಗಲು ವ್ಯವಸ್ಥೆ ಮಾಡದ್ದರಿಂದ ಮನೆಯೊಳಗೆ ನುಗ್ಗುತ್ತೆ ನೀರು
•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.