ಕಳಪೆ ಬಿತ್ತನೆ ಬೀಜ; ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ
Team Udayavani, Jun 7, 2020, 9:33 AM IST
ಕಲಘಟಗಿ: ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಿಂದ ನೀಡಲ್ಪಟ್ಟ ಸೋಯಾ ಬೀಜಗಳು ಕಳಪೆ ಮಟ್ಟದ್ದಾಗಿದ್ದು, ಬಿತ್ತನೆ ಮಾಡಿದ ಬೀಜಗಳು ಇದುವರೆಗೂ ಮೊಳಕೆ ಒಡೆದಿಲ್ಲ ಎಂದು ಆಪಾದಿಸಿ ಬೇಗೂರ ಗ್ರಾಮದ ರೈತರು ಪಟ್ಟಣದ ಕೃಷಿ ಇಲಾಖೆಗೆ ಶನಿವಾರ ತೆರಳಿ ಮನವಿ ಸಲ್ಲಿಸಿದರು.
ದುಮ್ಮವಾಡ ರೈತ ಸಂಪರ್ಕ ಕೇಂದ್ರದಿಂದ ಸರಕಾರ ಕೊಡಮಾಡಿದ ಗೌರಿಶಂಕರ ಸೋಯಾಬೀನ್ ಬೀಜಗಳನ್ನು ಮೇ 25ರಂದು ಖರೀದಿಸಲಾಗಿದ್ದು, ಮೇ 28ರಂದು ಬಿತ್ತನೆ ಮಾಡಲಾಗಿತ್ತು. ಆದರೆ ಇದುವರೆಗೂ ಸರಿಯಾದ ರೀತಿಯಲ್ಲಿ ಮೊಳಕೆ ಒಡೆಯದೆ ಶೇ.30 ಪ್ರಮಾಣದಲ್ಲಿ ಮೊಳಕೆ ಒಡೆದಿರುತ್ತದೆ. ಕೊರೊನಾ ಮಹಾಮಾರಿಯಿಂದ ಸಂಕಷ್ಟದಲ್ಲಿದ್ದ ರೈತ ಕುಲಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಬಿತ್ತನೆ ಮಾಡುವ ಸಮಯದಲ್ಲಿ ಬಳಸಿದ ಗೊಬ್ಬರ ಇನ್ನಿತರೆ ಪರಿಕರಗಳ ವೆಚ್ಚವನ್ನು ಸರಕಾರದಿಂದ ನೀಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕೃಷಿ ಇಲಾಖೆಯ ವಿಜಯಕುಮಾರ ಕುಂಕೂರ ಮನವಿ ಸ್ವೀಕರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಉಪಾಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ, ಗುರುನಾಥ ಬೆಂಗೇರಿ, ರೈತ ಪ್ರಮುಖರಾದ ಶಿವಲಿಂಗಪ್ಪ ಮೂಗಣ್ಣವರ, ಸಿದ್ದಪ್ಪ ಕಾಮದೇನು, ಕಲ್ಲಪ್ಪ ಕುಟ್ರಿ, ಬಸವರಾಜ ಕಟಗಿ, ಶಿವಪ್ಪ ಮೇಟಿ, ಮಲ್ಲಯ್ಯ ಚಿಕ್ಕಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!