ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅವಕಾಶಕ್ಕೆ ಒತ್ತಾಯ


Team Udayavani, Aug 3, 2017, 12:56 PM IST

hub6.jpg

ಹುಬ್ಬಳ್ಳಿ: ಪ್ಲಾಸ್ಟರ್‌ ಆಫ್ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಒಮ್ಮೇಲೆ ರದ್ದು ಪಡಿಸುವ ಬದಲು ಹಂತ-ಹಂತವಾಗಿ ಕಾರ್ಯರೂಪಕ್ಕೆ ತನ್ನಿ. ಈ ವರ್ಷವೂ ಪಿಒಪಿನಿಂದ ನಿರ್ಮಿತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ಕೊಡಿ ಎಂದು ಹುಬ್ಬಳ್ಳಿ-ಧಾರವಾಡ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಮಿತಿಗಳ ಒಕ್ಕೂಟದವರು ಮಹಾಪೌರ ಹಾಗೂ ಪಾಲಿಕೆ ಆಯುಕ್ತರನ್ನು ಒತ್ತಾಯಿಸಿದರು. 

ಇಲ್ಲಿನ ದಾಜಿಬಾನಪೇಟೆಯ ದುರ್ಗಾದೇವಿ ದೇವಸ್ಥಾನದಲ್ಲಿ ಬುಧವಾರ ಸಭೆ ನಡೆಸಿದ ನಂತರ ಮೆರವಣಿಗೆ ಮುಖಾಂತರ ಪಾಲಿಕೆಗೆ ಆಗಮಿಸಿ ಮಹಾಪೌರರು ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿದ ಸದಸ್ಯರು, ಪುಣೆ ಮಹಾನಗರ ಪಾಲಿಕೆ, ಬೆಳಗಾವಿ, ಬಾಗಲಕೋಟೆ ಹಾಗೂ ಕೊಪ್ಪಳಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಹಾಗೆಯೇ ಅವಳಿನಗರದಲ್ಲಿ ಪರವಾನಗಿ ನೀಡಬೇಕೆಂದು ಒತ್ತಾಯಿಸಿದರು. 

ಮುಂಬಯಿ, ಮಹಾರಾಷ್ಟ್ರ ಹಾಗೂ ಬೆಳಗಾವಿ ಹೊರತು ಪಡಿಸಿದರೆ ಅವಳಿ ನಗರದಲ್ಲಿ ಐತಿಹಾಸಿಕವಾಗಿ ಅಂದಾಜು 1.50 ಲಕ್ಷದಷ್ಟು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಸಾರ್ವಜನಿಕವಾಗಿಯೇ ಎರಡು ಸಾವಿರ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅವಳಿ ನಗರದಲ್ಲಿ ಮಣ್ಣಿನ ಗಣಪ ನಿರ್ಮಿಸುವ ಕಲಾವಿದರ ಸಂಖ್ಯೆ ಅಂದಾಜು 30-40 ಇದೆ. ಅವರು 4-5 ಸಾವಿರ ಗಣೇಶ ಮೂರ್ತಿಗಳನ್ನು ನಿರ್ಮಿಸಬಹುದು.

ಇನ್ನು ಅಂದಾಜು 50 ಸಾವಿರ  ಗಣೇಶ ಮೂರ್ತಿಗಳ ಕೊರತೆಯಾಗುತ್ತದೆ. ಜೊತೆಗೆ ದೊಡ್ಡ-ದೊಡ್ಡ ಮಣ್ಣಿನ ಗಣಪ ಮೂರ್ತಿ ತಯಾರಿಕೆ ಕಷ್ಟಕರ. ಅಲ್ಲದೆ ಮಣ್ಣಿನ ಗಣೇಶ ಮೂರ್ತಿ ಮೇಲೆ ಹೆಲೋಜನ್‌ ದೀಪದ ಬೆಳಕು ಬಿದ್ದರೆ ಹಾಗೂ ಸಾಗಾಟ ಸಂದರ್ಭದಲ್ಲಿ ಮೂರ್ತಿಗಳಲ್ಲಿ ಬಿರುಕು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಭಾವೈಕ್ಯತೆಗೆ ಧಕ್ಕೆ ತರದೆ ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಇನ್ನು ಎರಡು ವರ್ಷ ಅವಕಾಶ ಕೊಡಬೇಕೆಂದು ಮನವಿ ಮಾಡಿದರು. 

ಸುಪ್ರೀಂಕೋರ್ಟ್‌ ಆದೇಶವನ್ನು ಎಲ್ಲದಕ್ಕೂ ಪಾಲನೆ ಮಾಡಬೇಕು. ಸಾರ್ವಜನಿಕ ಶಾಂತಿ ಸಭೆಗೆ ಎಲ್ಲ ಸಂಘಟನೆಯವರನ್ನು ಆಹ್ವಾನಿಸುವಂತೆ ಗಣೇಶೋತ್ಸವದ ಬಗ್ಗೆ ಸಭೆ ನಡೆಸುವಾಗ ಎಲ್ಲ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಮಂಡಳಗಳ ಸದಸ್ಯರನ್ನು ಆಹ್ವಾನಿಸಬೇಕು. ಸಭೆಯಲ್ಲಿ ಪಾಲ್ಗೊಂಡ ಎಲ್ಲ ಮಂಡಳದ ಮುಖಂಡರಿಗೂ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. 

ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ಕಳೆದ ಬಾರಿ ತಾವೇ ಈ ವರ್ಷ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲ್ಲವೆಂದು ಭರವಸೆ ನೀಡಿದ್ದೀರಿ. ಅದಕ್ಕಾಗಿ ಈ ವರ್ಷ ಪಿಒಪಿ ಮೂರ್ತಿ ಪ್ರತಿಷ್ಠಾಪನೆ ರದ್ದು ಪಡಿಸಲಾಗಿದೆ.

ಈಗ ನಿಮ್ಮ ಮನವಿ ಪರಿಗಣಿಸಿ ಜಿಲ್ಲಾಧಿಕಾರಿ ಅವರಿಗೆ ಮನವರಿಕೆ ಮಾಡಲಾಗುವುದು. ಈ ಕುರಿತು ಮತ್ತೂಮ್ಮೆ ಸಭೆ ನಡೆಸಲಾಗುವುದು ಎಂದರು. ಮನೋಜ ಹಾನಗಲ್ಲ, ಡಿ. ಗೋವಿಂದರಾವ್‌, ವೆಂಕಟೇಶ ಮೇಸ್ತ್ರಿ, ಪಾಂಡು ಮೆಹರವಾಡೆ, ವೆಂಕಟೇಶ ಪೂಜಾರಿ, ರಾಜು ಮಾನೆ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿದ್ದರು.  

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.