ಮುಂದಿನ ವರ್ಷ ಪಿಒಪಿ ಮೂರ್ತಿ ಸಂಪೂರ್ಣ ನಿಷೇಧ


Team Udayavani, Aug 29, 2017, 12:39 PM IST

hub1.jpg

ಧಾರವಾಡ: ಪರಿಸರ ಹಾಗೂ ಜಲಮೂಲಗಳಿಗೆ ಹಾನಿ ಉಂಟು ಮಾಡುವ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಗಜಾನನ ಮಂಡಳಿಗಳು ಮುಂದಾಗದೇ ಪರಿಸರ ಸ್ನೇಹಿ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಕವಿಸಂನಲ್ಲಿ ಸೋಮವಾರ ಸಂಜೆ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ವತಿಯಿಂದ ಹಮ್ಮಿಕೊಂಡಿದ್ದ ಗಣೇಶ ಮಂಡಳಿಗಳಿಗೆ ಬಹುಮಾನ, ಶಾರದಾ-ಶಾಲ್ಮಲಾ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಲವೇ ಪಿಒಪಿ ಮೂರ್ತಿ ನಿಷೇಧ ಮಾಡಿದ್ದರೂ ಸಹ ಗಜಾನನ ಮಂಡಳಿಗಳ ಮನವಿ ಮೇರೆಗೆ ಸಡಲಿಕೆ ಮಾಡಿದ್ದು, ಆದರೆ ಇದು ಮುಂದಿನ ವರ್ಷಕ್ಕೆ ಮುಂದುವರೆಯದು. ಗಜಾನನ ಮಂಡಳಿಗಳು ತಾವೇ ಪರಿಸರ ಉಳಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಗಣಪ ಪ್ರತಿಷ್ಠಾಪನೆ ಮಾಡಬೇಕು.

ಈ ವರ್ಷದಿಂದಲೇ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತೆ ಜಿಲ್ಲಾಡಳಿತ ನಿರ್ಧರಿಸಿತ್ತು. ಆದರೆ, ಗಣೇಶ ಮೂರ್ತಿ ಮಾರಾಟಗಾರರು ಜಿಲ್ಲಾಡಳಿತದ ನಿರ್ಧಾರಕ್ಕೂ  ಮುನ್ನವೇ ಪಿಒಪಿ ಗಣೇಶನನ್ನು ಖರೀದಿಸಿದ್ದರಿಂದ ಅವರಿಗೆ ಆರ್ಥಿಕ ಹಾನಿಯಾಗಬಾರದು ಎಂದು ಕೆಲವೆಡೆ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡಲಾಗಿದೆ ಎಂದರು. 

ಪ್ರತಿ ವರ್ಷವೂ ಪರಿಸರ ಸ್ನೇಹಿ ಹಾಗೂ ಯಾವುದೇ ಅಬ್ಬರ ವಿಲ್ಲದ ಬೇಗನೆ ಗಣೇಶನನ್ನು ವಿಸರ್ಜನೆ ಮಾಡುವ ಉತ್ಸವ ಮಂಡಳಿಗೆ ಬಹುಮಾನ ವಿತರಿಸುವ ಕೆಲಸವನ್ನು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳಿ ಮಾಡಬೇಕು. ಯಾವುದೇ ಕೋಮು-ಗಲಭೆಗೆ ಅವಕಾಶ ನೀಡದೇ. ಹಿಂದೂ-ಮುಸ್ಲಿಂ-ಕ್ರೈಸ್ತ ಸೇರಿದಂತೆ ಎಲ್ಲ ಸಮುದಾಯದವರು ಒಟ್ಟಾಗಿ ಶಾಂತಿ ಹಾಗೂ ಸೌಹಾರ್ದದಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು.

ಪ್ರಶಸ್ತಿ ಪ್ರದಾನ: ಶಾರದಾ-ಶಾಲ್ಮಲಾ ಪ್ರಶಸ್ತಿಯನ್ನು  ಪಿ.ವಿ. ಹಿರೇಮಠ (ಪರಿಸರ), ಡಾ| ಪಿ.ಎಸ್‌. ಶಿವಕುಮಾರಗೌಡ (ತಾಂತ್ರಿಕ ಸಂಶೋಧನೆ), ರಜನಿದಾಸ್‌, ವೀಣಾ ಬಸನಗೌಡ, ಡಾ| ಎಂ.ಎನ್‌. ಹಂಚಿನಮನಿ (ಶಿಕ್ಷಣ), ಡಾ| ಷಡಕ್ಷರಯ್ಯ (ಇತಿಹಾಸ), ಡಾ| ಕಿರಣ ಸಾಣಿಕೊಪ್ಪ (ವೈದ್ಯಕೀಯ,) ಮನೋಹರ ಲಕ್ಕುಂಡಿ, ರವಿ ಹಂದಿಗೋಳ (ಸಮಾಜ ಸೇವೆ), ಪ್ರಭು ಹಂಚಿನಾಳ (ರಂಗಭೂಮಿ), 

ಎಸ್‌.ಜಿಸಣ್ಣಕ್ಕಿ (ಹೋರಾಟ), ಗೀತಾ ಕಟ್ಟಿಮನಿ (ಶಿಕ್ಷಣ), ರಜನಿ ಗುರ್ಲಹೊಸೂರ (ಸಂಗೀತ) ಅವರಿಗೆ ಪ್ರದಾನ ಮಾಡಲಾಯಿತು. ಇದೇ ವೇಳೆ ಉತ್ತಮ ಅಲಂಕಾರ ಮಾಡಿದ 10 ಗಣೇಶ ಮಂಡಳಿಗಳಿಗೆ, ಉತ್ತಮ ಮೂರ್ತಿಗಳಿಗೆ-10 ಹಾಗೂ 50 ಗಣೇಶ ಮಂಡಳಿಗಳಿಗೆ ವಿಶೇಷ ಪುರಸ್ಕಾರ ಬಹುಮಾನ ವಿತರಿಸಲಾಯಿತು.

ಪಾಲಿಕೆ ವಿರೋಧ ಪಕ್ಷದ ನಾಯಕ ಸುಭಾಸ ಶಿಂಧೆ, ಪಾಲಿಕೆ ಸದಸ್ಯರಾದ ದೀಪಕ ಚಿಂಚೋರೆ, ಯಾಸೀನ್‌ ಹಾವೇರಿಪೇಟ್‌, ಅಂಜುಮನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ, ಮಹೇಶ ಶೆಟ್ಟಿ, ದಾನಪ್ಪ ಕಬ್ಬೇರ, ರಾಬರ್ಟ್‌ ದದ್ದಾಪುರಿ, ಮುತ್ತುರಾಜ ಮಾಕಡವಾಲೆ, ಶಿವಶಂಕರ ಹಂಪಣ್ಣವರ, ಜಿಲ್ಲಾ ಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ, 

ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ಪ್ರಕಾಶ ಘಾಟಗೆ, ಕಾರ್ಯಾಧ್ಯಕ್ಷ ವಸಂತ ಅರ್ಕಾಚಾರ ಹಾಗೂ ಪ್ರಧಾನ ಕಾರ್ಯದರ್ಶಿ ಆನಂದ ಜಾಧವ ಇದ್ದರು. ಕೊನೆಗೆ ಹಾಸ್ಯ ಕಲಾವಿದರಾದ ಮಹಾದೇವ ಸತ್ತೀಗೇರಿ, ರûಾ ಜೋಶಿ, ರಮೇಶ ಗೋಕಾಕ, ಬಾಗೇಶ ಮುರಡಿ ಅವರಿಂದ ಹಾಸ್ಯ ಹಾಗೂ ಸಂಜು ಅವರಿಂದ ಜಾಧೂಗಾರ ಕಾರ್ಯಕ್ರಮ ನಡೆಯಿತು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.