ಸವಾಯಿ ಗಂಧರ್ವ ಕುಟುಂಬಸ್ಥರ ಸ್ವಂತ ವೆಚ್ಚದಲ್ಲಿ ಅಂಚೆ ಚೀಟಿ

5 ರೂ. ಮೌಲ್ಯದ ಅಂಚೆ ಚೀಟಿ ಬಿಡುಗಡೆಗೆ ಸಿದ್ಧತೆ ; 8 ವರ್ಷಗಳ ನಿರಂತರ ಪ್ರಯತ್ನ ; ಮೇರು ಕಲಾವಿದನನ್ನೇ ಮರೆತ ಸರ್ಕಾರ

Team Udayavani, Oct 9, 2022, 1:10 PM IST

13

ಹುಬ್ಬಳ್ಳಿ: ನಾಲ್ಕು ದಶಕಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅನಭಿಷಿಕ್ತ ದೊರೆಯಾಗಿ ಬಾಳಿದ ಪಂ| ಸವಾಯಿ ಗಂಧರ್ವರು ಸಂಗೀತ ಲೋಕಕ್ಕೆ ಮೇರು ಕಲಾವಿದರನ್ನು ಕೊಟ್ಟಿದ್ದಾರೆ. ಇವರ ಗರಡಿಯಲ್ಲಿ ಪಳಗಿದ ಶಿಷ್ಯರ ಹೆಸರಲ್ಲಿ ಈಗಾಗಲೇ ಅಂಚೆ ಚೀಟಿಗಳು ಬಂದು ದಶಕಗಳೇ ಕಳೆದಿವೆ. ದಿಗ್ಗಜ ಕಲಾವಿದರನ್ನು ನೀಡಿದ ಗುರುಗಳನ್ನೇ ಮರೆತಿರುವಾಗ ಕುಟುಂಬವೇ ಸ್ವಂತ ಖರ್ಚಿನಲ್ಲಿ ಅವರ ಹೆಸರಲ್ಲಿ ಒಂದು ಅಂಚೆ ಚೀಟಿ ಹೊರ ತರುತ್ತಿದ್ದು, ಈ ಭಾಗದಲ್ಲಿ ವಿಶೇಷ ಹಾಗೂ ಮೊದಲ ಸಮಾರಂಭವಾಗಿದೆ.

ಸವಾಯಿ ಗಂಧರ್ವರು ಡಾ|ಗಂಗೂಬಾಯಿ ಹಾನಗಲ್ಲ, ಪಂ| ಭೀಮಸೇನ ಜೋಶಿ, ಪಂ| ಬಸವರಾಜ ರಾಜಗುರು, ಪಂ| ಫಿರೋಜ್‌ ದಸ್ತೂರ್‌, ಮಾಸ್ಟರ್‌ ಕೃಷ್ಣರಾವ, ಇಂದಿರಾಬಾಯಿ ಖಾಡಿಲಕರ, ವಿ.ಎ.ಕಾಗಲಕರ, ನೀಲಕಂಠ ಬುವಾ ಗಾಡಿಗೋಳಿ, ವೆಂಕಟರಾವ ರಾಮದುರ್ಗ ಅವರಂತಹ ಹಲವು ದಿಗ್ಗಜ ಕಲಾವಿದರನ್ನು ಸಂಗೀತ ಲೋಕಕ್ಕೆ ನೀಡಿದ್ದಾರೆ. ಹಲವರಿಗೆ ರಾಷ್ಟ್ರಮಟ್ಟದ ಗೌರವ, ಸಮ್ಮಾನಗಳು ದೊರೆತಿವೆ. ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಚೀಟಿ, ಲಕೋಟೆಗಳನ್ನು ಬಿಡುಗೊಡೆಗೊಳಿಸಿ ಸ್ಮರಿಸುವ ಕಾರ್ಯ ಮಾಡಿದೆ. ಇವರ ಸಂಗೀತ ಹಾದಿಗೆ ದೀಪವಾಗಿದ್ದ ಸವಾಯಿ ಗಂಧರ್ವರನ್ನು ಸರ್ಕಾರ, ಸಮಾಜ ಮರೆತುಬಿಟ್ಟಿತ್ತು. ಆದರೆ ಕುಟುಂಬದವರ ಸತತ ಪರಿಶ್ರಮದ ಫಲವಾಗಿ 5 ರೂ. ಮೌಲ್ಯದ ಅಂಚೆ ಚೀಟಿ ಬಿಡುಗಡೆಗೆ ಸಿದ್ಧಗೊಂಡಿದೆ.

ಸ್ವಂತ ಖರ್ಚಿನಿಂದ ಬಿಡುಗಡೆ:

ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ತೋರಿದ ವ್ಯಕ್ತಿಗಳು, ಸ್ಥಳ ಹೀಗೆ ವಿವಿಧ ರೀತಿಯಲ್ಲಿ ವಿಶೇಷ ಅಂಚೆ ಚೀಟಿ, ಲಕೋಟೆಗಳನ್ನು ಬಿಡುಗಡೆಗೊಳಿಸಿ ಅಂಚೆ ಇಲಾಖೆ ಸ್ಮರಿಸುವ ಕೆಲಸ ಮಾಡುತ್ತದೆ. ಮಹಾನ್‌ ಸಾಧಕರನ್ನು ಮರೆತಾಗ ಸ್ಥಳೀಯ ಸಂಸದರು ಅಂಚೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಕೆಲಸ ಮಾಡುತ್ತಾರೆ. ಅಂತಹ ಕಾರ್ಯಗಳು ಇವರ ವಿಷಯದಲ್ಲಿ ಆಗಲಿಲ್ಲ. ಹೀಗಾಗಿ ಅವರ ಕುಟುಂಬದ ಸದಸ್ಯರೇ ಅಂಚೆ ಚೀಟಿ ತರಬೇಕೆನ್ನುವ ನಿರ್ಧಾರದ ಪರಿಣಾಮ ಎಂಟು ವರ್ಷಗಳ ನಿರಂತರ ಪತ್ರ ವ್ಯವಹಾರ ಮೂಲಕ ಅಂತಿಮ ಸ್ವರೂಪ ಪಡೆದಿದೆ. ಇಲಾಖೆಯ ನಿಯಮಾವಳಿ ಪ್ರಕಾರ 5 ಲಕ್ಷ ರೂ. ಪಾವತಿಸಬೇಕಿತ್ತು. ಆದರೆ ಇಷ್ಟೊಂದು ಹಣ ಪಾವತಿಸಲು ಅಸಾಧ್ಯ ಎನ್ನುವ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶಿಫಾರಸಿನ ಮೇರೆಗೆ ಕುಟುಂಬವೇ ಕಡಿಮೆ ಶುಲ್ಕ ಭರಿಸಿದೆ.

ಪ್ರೇರಣೆ ನೀಡಿದ ಕಾರ್ಯಕ್ರಮ:

ಮೇರು ಕಲಾವಿದರ ಅಂಚೆ ಚೀಟಿ ಕಾರ್ಯಕ್ರಮಕ್ಕೆ ಪಂ|ಸವಾಯಿ ಗಂಧರ್ವರ ಕುಟುಂಬದ ಸೋಮನಾಥ ಜೋಶಿ ಅವರಿಗೆ ಆಹ್ವಾನವಿತ್ತು. ಸವಾಯಿ ಗಂಧರ್ವರ ಶಿಷ್ಯರಾದ ಗಂಗೂಬಾಯಿ ಹಾನಗಲ್ಲ, ಪಂ| ಭೀಮಸೇನ ಜೋಶಿ ಇತರೆ 6 ಜನರ ಹೆಸರಲ್ಲಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಅಂಚೆ ಚೀಟಿ ಬಿಡುಗಡೆಗೊಳಿಸಿದ್ದರು. ಆ ಗೌರವ ಮನ ತುಂಬಿಕೊಂಡ ಸೋಮನಾಥ ಜೋಶಿ ಅವರಿಗೆ ತಮ್ಮ ಅಜ್ಜನ ಹೆಸರಿನಲ್ಲೂ ಒಂದು ಅಂಚೆ ಚೀಟಿ ಬರಬೇಕು ಎನ್ನುವ ಛಲ ಮೂಡಿತು. ಈ ಪ್ರೇರಣೆಯಿಂದ ಇಲಾಖೆಗೆ ಒಂದು ಪ್ರಸ್ತಾವನೆ ಸಲ್ಲಿಸಿದ್ದರು.

ಇದೇ ಮೊದಲೆಂಬ ಹೆಗ್ಗಳಿಕೆ:

ಓರ್ವ ವ್ಯಕ್ತಿ ಹೆಸರಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆಯಾಗುತ್ತಿರುವುದು ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲು. ಈಗಾಗಲೇ ಸಂಗೀತ ಕಲಾವಿದರ ಹೆಸರಲ್ಲಿ ಅಂಚೆ ಇಲಾಖೆಯೇ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದೆ. ಆದರೆ ಸ್ಥಳೀಯವಾಗಿ ಅದರಲ್ಲೂ ಸ್ವಂತ ಖರ್ಚಿನಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸುತ್ತಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಯಿದೆ. ಸವಾಯಿ ಗಂಧರ್ವರು ಬೆಳೆದ ಊರು ಕುಂದಗೋಳದಲ್ಲಿ ಸಮಾರಂಭ ಆಯೋಜಿಸಲು ಚರ್ಚೆ ನಡೆದಿದ್ದವಾದರೂ ಅ.11ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

“ಸವಾಯಿ ಗಂಧರ್ವ’ ಆಗಿದ್ದು ಹೇಗೆ?

1886, ಜ.19ರಂದು ಜನಿಸಿದ ಪಂ| ಸವಾಯಿ ಗಂಧರ್ವರ ಮೂಲ ಹೆಸರು ರಾಮಚಂದ್ರ ಕುಂದಗೋಳಕರ. ಮೈಸೂರು ದಸರಾದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬರುತ್ತಿದ್ದ ಅಬ್ದುಲ್‌ ಕರೀಂ ಖಾನ್‌ ಈ ರಾಮಚಂದ್ರರಲ್ಲಿದ್ದ ಸಂಗೀತಾಸಕ್ತಿ ಶಿಷ್ಯನನ್ನಾಗಿಸಿತು. ಮಿರಜ್‌ನಲ್ಲಿ ಗುರುಗಳಿಂದ ತೋಡಿ, ಮುಲ್ತಾನಿ, ಪೂರಿಯಾ ರಾಗಗಳಲ್ಲಿ ಅಡಿಪಾಯ ದೊರೆತ ನಂತರ ಸ್ವಯಂ ಪರಿಶ್ರಮದಿಂದ ಉಳಿದ ರಾಗಗಳನ್ನು ತಮ್ಮ ಕೈವಶ ಮಾಡಿಕೊಂಡರು. ಪ್ರಸಿದ್ಧಿ ಪಡೆಯುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ರಾಮಭಾವು ಕುಂದಗೋಳಕರ ಆದರು. ನಾಗಪುರದಲ್ಲಿ ಬೃಹತ್‌ ಸಂಗೀತ ಸಮ್ಮೇಳನದಲ್ಲಿ ರಾಮಭಾವು ಅವರ ಸಂಗೀತ ಕೇಳುಗರನ್ನು ಬೆಕ್ಕಸ ಬೆರಗಾಗಿಸಿತು. ಅಧ್ಯಕ್ಷತೆ ವಹಿಸಿದ್ದ ಖ್ಯಾತ ವಿದ್ವಾಂಸ ದಾದಾಸಾಹೇಬ ಖಾಪರಡೆ ಅವರು ಇವನು ಗಂಧರ್ವನಲ್ಲ ಸವಾಯ್‌ ಗಂಧರ್ವ(ಉಳಿದ ಗಂಧರ್ವರಿಗಿಂತ ಒಂದು ಕಾಲುಪಟ್ಟು ಹೆಚ್ಚು)ಎಂದು ಹೊಗಳಿದರು. ಅಲ್ಲಿಂದ ಇವರು ಸವಾಯಿ ಗಂಧರ್ವರಾಗಿ ಹಿಂದುಸ್ತಾನಿ ಸಂಗೀತ ಲೋಕದ ಅನಭಿಷಿಕ್ತ ದೊರೆಯಾಗಿ ಬಾಳಿದರು.

ಸವಾಯಿ ಗಂಧರ್ವರ ಶಿಷ್ಯರ ಹೆಸರಲ್ಲಿ ಅಂಚೆ ಚೀಟಿ ಹೊರ ಬಂದಿದ್ದನ್ನು ನೋಡಿ ಖುಷಿಯಾಯಿತು. ಗುರುಗಳಿಗೂ ಈ ಗೌರವ ದೊರೆಯಬೇಕು ಎನ್ನುವ ಕಾರಣಕ್ಕೆ 2014ರಿಂದ ಕೈಗೊಂಡ ಸತತ ಪ್ರಯತ್ನ ಇದೀಗ ಕೈಗೂಡಿದೆ. ಇಲಾಖೆ ಸೂಚಿಸಿದ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದಾಗ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪತ್ರ ಬರೆದು ಶುಲ್ಕ ಸಾಕಷ್ಟು ಕಡಿಮೆ ಮಾಡಿಸಿದರು.  –ಸೋಮನಾಥ ಜೋಶಿ, ಸವಾಯಿ ಗಂಧರ್ವರ ಮೊಮ್ಮಗ

ಸಂಗೀತ ದಿಗ್ಗಜರೊಬ್ಬರ ವಿಶೇಷ ಅಂಚೆ ಚೀಟಿ ಸ್ಥಳೀಯವಾಗಿ ಅದರಲ್ಲೂ ಸ್ವಂತ ಖರ್ಚಿನಲ್ಲಿ ಬಿಡುಗಡೆಗೊಳಿಸುತ್ತಿರುವುದು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲು. ಕಳೆದ ನಾಲ್ಕು ದಶಕಗಳಿಂದ ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಕಾರನಾಗಿ ಕೆಲಸ ಮಾಡುತ್ತಿದ್ದು, ಇಂತಹ ಕಾರ್ಯಕ್ರಮ ಎಲ್ಲಿಯೂ ಆಯೋಜಿಸಿಲ್ಲ.  –ಅಫ್ತಾಬ್‌ ಬೇಲೇರಿ, ಅಂಚೆ ಚೀಟಿ-ನಾಣ್ಯ ಸಂಗ್ರಹಕಾರರು

ಸವಾಯಿ ಗಂಧರ್ವರು ಸಂಗೀತ ಲೋಕಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಮೇರು ಕಲಾವಿದರನ್ನು ಸೃಷ್ಟಿಸಿದ್ದಾರೆ. ಅಂಚೆ ಇಲಾಖೆಯೇ ಸ್ವಂತ ಖರ್ಚಿನಲ್ಲಿ ಅಂಚೆ ಚೀಟಿ ಬಿಡುಗಡೆ ಮಾಡಬಹುದಿತ್ತು. ಇದೀಗ ಕುಟುಂಬವೇ ಶುಲ್ಕ ಭರಿಸಿ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ. ಹೀಗಾದರೂ ಅಂಚೆ ಚೀಟಿ ಹೊರ ಬರುತ್ತಿದೆ ಎನ್ನುವುದೇ ಸಂತಸ. –ಸತ್ಯಪ್ರಮೋದ ದೇಶಪಾಂಡೆ, ಅಂಚೆ ಚೀಟಿ-ನಾಣ್ಯ ಸಂಗ್ರಹಕಾರರು

„ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.