ಲಸಿಕೆ ಪಡೆಯಲು ಪ್ರದೀಪ ಶೆಟ್ಟರ ಸಲಹೆ
Team Udayavani, Jan 4, 2022, 8:12 PM IST
ಹುಬ್ಬಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ನಾಯಕತ್ವ ಗುಣ ರೂಢಿಸಿಕೊಳ್ಳಬೇಕೆಂದು ವಿಧಾನ ಪರಿಷತ್ತು ಸದಸ್ಯ ಪ್ರದೀಪ ಶೆಟ್ಟರ ಹೇಳಿದರು.
ಇಲ್ಲಿನ ಚೇತನ ವಾಣಿಜ್ಯ ಮತ್ತು ಬಿಸಿಎಂ ಕಾಲೇಜಿನಲ್ಲಿ 15-18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕಾಕರಣ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಆರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 15-18 ವರ್ಷದೊಳಗಿನ ಎಲ್ಲರಿಗೂ ಲಸಿಕೆ ನೀಡಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಪ್ರಯೋಜನ ಪಡೆಯಬೇಕೆಂದರು.
ಉಪನ್ಯಾಸಕಿ ಪ್ರೊ|ಶಿಲ್ಪಾ ಜಡಿಮಠ ಬಿಕಾಂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ರಚಿಸಿರುವ ಕಂಪ್ಯೂಟರೈಸ್ಡ್ ಅಂಕೌಂಟಿಂಗ್ ಪುಸ್ತಕ ಬಿಡುಗಡೆಗೊಳಿಸಿದರು. ಪಾಲಿಕೆ ಸದಸ್ಯ ರಾಜಣ್ಣಾ ಕೊರವಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಡಾ|ವಿಶ್ವನಾಥ ಕೊರವಿ ಪರಿಚಯಿಸಿದರು.
ಪ್ರೊ|ಜಗದೀಶ ದ್ಯಾವಪ್ಪನವರ ಕಾಲೇಜು ವಿದ್ಯಾರ್ಥಿ ಸಂಸತ್ತು ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಪ್ರದೀಪ ಶೆಟ್ಟರ ಹಾಗೂ ಪ್ರೊ|ಶಿಲ್ಪಾ ಜಡಿಮಠ ಅವರನ್ನು ಸನ್ಮಾನಿಸಲಾಯಿತು. ಪ್ರೊ|ಮಹೇಶ ದ್ಯಾವಪ್ಪನವರ, ಡಾ|ರಮಾಕಾಂತ ಕುಲಕರ್ಣಿ, ಪ್ರೊ|ಯಶೋಧ ನಾಯಕ್, ಪ್ರೊ|ಸುನೀತಾ ಸಾಲಿಮಠ, ಪ್ರೊ| ನಾಗರಾಜ ಬರದೆಲಿ, ಪ್ರೊ|ಸರಮರಿನ್, ಪ್ರೊ|ಶಿಲ್ಪಾ ವಗªರ್, ಪ್ರೊ| ಶ್ವೇತಾ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ