ಕೈ ದುರಹಂಕಾರಕ್ಕೆ ಹಿರಿಯರು ಪಕ್ಷ ತೊರೆದಿದ್ದಾರೆ : ಸಚಿವ ಜೋಶಿ ವ್ಯಂಗ್ಯ
Team Udayavani, Aug 28, 2022, 4:15 PM IST
ಧಾರವಾಡ : ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವದ ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದಿಂದಲೇ ಹಿರಿಯರು ಪಕ್ಷ ತೊರೆಯುವಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ತಾಲೂಕಿನ ಮುಗದ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಗುಲಾಬ್ ನಬೀ ಅಜಾದ್ ಈಗ ಪಕ್ಷ ತೊರೆದಿದ್ದಾರೆ. ಈ ಹಿಂದೆಯೂ ಸಾಕಷ್ಟು ಹಿರಿಯ ನಾಯಕರು ಪಕ್ಷದ ದುರಾಡಳಿತದಿಂದ ಮನನೊಂದು ಹೊರ ಬಂದಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಅನುಭವಿಸಿ ಈಗ ತೊರೆದಿದ್ದಾರೆ ಎಂಬಂತೆ ಸಾಕಷ್ಟು ಪ್ರತಿಕ್ರಿಯೆ ಬಂದಿವೆ. ಪಕ್ಷದಲ್ಲಿ ಸ್ಥಾನಮಾನ ಕೊಟ್ಟಿದ್ದೀರಾ ಅಂದರೆ ಆ ಸ್ಥಾನಮಾನ ಅವಧಿ ಮುಗಿದ ಬಳಿಕವೂ ಯಾವುದೇ ವ್ಯಕ್ತಿಯಾದರೂ ಸರಿಯೇ ಅವರ ಘನತೆ, ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅಲ್ಲಿನ ನಾಯಕರು, ಅಧ್ಯಕ್ಷರು ಆ ರೀತಿ ನಡೆದುಕೊಳ್ಳಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ದುರಹಂಕಾರ ನಡೆಯಿಂದ ಮನನೊಂದು ಪಕ್ಷ ತೊರೆದಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಮಾಧ್ಯಮಗಳು ಹೇಳುತ್ತಿವೆ ಹೊರತು ನಾವಂತೂ ಅಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಅವಽಯು ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಮೂರು ವರ್ಷವಾದ ಬಳಿಕ ಬದಲಾವಣೆ ಮಾಡಲೇಬೇಕು ಅಂತ ಏನಿಲ್ಲ. ಆದರೆ ಮಾಧ್ಯಮಗಳೇ ನಾಳೆ, ನಾಡಿದ್ದು ಬದಲಾವಣೆ ಆಗುತ್ತಾರೆ ಎಂಬುದಾಗಿ ಹೇಳುತ್ತಿವೆ ಅಷ್ಟೇ ಹೊರತು ನಾವಂತೂ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿ ಪಕ್ಷದ ಹಿರಿಯರು ಆಗಿರುವ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕರಾಗಿದ್ದಾರೆ. ಹೀಗಾಗಿ ಸಹಜವಾಗಿ ದೆಹಲಿಗೆ ತೆರಳಿ ಪ್ರದಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದು, ಈ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಮಾರ್ಕೋಪೋಲೋ ಹಾಗೂ ಕಾರ್ಮಿಕರ ಮಧ್ಯೆ ಉಂಟಾಗಿರುವ ಸಮಸ್ಯೆಯ ಬಗ್ಗೆ ಈಗಾಗಲೇ ರಾಜ್ಯದ ಸಚಿವರೊಂದಿಗೆ ಮಾತನಾಡಿದ್ದು, ಇನ್ನೊಂದು ಸಲ ಕುಳಿತು ಬಗೆಹರಿಸಲು ಹೇಳಿದ್ದೇನೆ. ಇದು ರಾಜ್ಯ ಸರಕಾರದ ವ್ಯಾಪ್ತಿಗೆ ಬರುವ ಕಾರಣ ಸಂಬಂಧಪಟ್ಟವರಿಗೆ ಎಲ್ಲರಿಗೂ ಮಾತನಾಡಿದ್ದು, ಈ ಸಮಸ್ಯೆ ಇತ್ಯರ್ಥಪಡಿಸಲು ಸೂಚಿಸಿದ್ದೇನೆ. ಆದರೆ ಈ ಸಮಸ್ಯೆ ಬಗೆಹರಿಸಲು ಎರಡೂ ಬಣದಿಂದ ಒಂದು ಹಜ್ಜೆ ಮುಂದೆ ಬರಬೇಕು. ಎರಡೂ ಕೈ ಜೋಡಿಸಿದಾಗಲೇ ಚಪ್ಪಾಳೆ. ಹೀಗಾಗಿ ಕೈಗಾರಿಕಾ ವಾತಾವರಣ ಹದಗೆಡದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದರು.
ಚಿತ್ರದುರ್ಗದ ಮುರುಘಾ ಶರಣರ ವಿರುದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ದಾಖಲಿಸಿದ್ದು, ಈ ಬಗ್ಗೆ ಈಗಾಗಲೇ ತನಿಖೆ ಕೂಡ ಆರಂಭಗೊಂಡಿದೆ. ಹೀಗಾಗಿ ಹೆಚ್ಚು ಮಾತನಾಡುವ ಅಗತ್ಯವಿಲ್ಲ. ನಾಡಿನ ಪ್ರತಿಷ್ಠಿತ ಶ್ರೀಗಳಾಗಿದ್ದು, ಹೀಗಾಗಿ ಸೂಕ್ತವಾದ ನ್ಯಾಯಯುತ ತನಿಖೆ ಆಗಲಿ. ಅಲ್ಲಿಯವರೆಗೂ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂತಲೇ ಇಲ್ಲ.
– ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ