ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Team Udayavani, Mar 19, 2024, 3:59 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ಹಾಗೂ ದೇಶ ವಿರೋಧಿ ಕೃತ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಹೀಗೆ ಹಿಂದೂ ವಿರೋಧಿ ಕೃತ್ಯಗಳು ಘಟಿಸುತ್ತಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದು ಆರೋಪಿಸಿದರು.
ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಎಫ್ ಎಸ್ ಎಲ್ ವರದಿ ಬಂದರೂ ಯಾವುದೇ ಕ್ರಮವಿಲ್ಲ. ರಾಮೇಶ್ವರ ಕೆಫೇ ಬಾಂಬ್ ಸ್ಪೋಟ ಪ್ರಕರಣ ನಡೆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ಅಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ! ಎಂದು ಸಚಿವ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಸ್ಪೋಟ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದರು.
ನಾವೇನೇ ಮಾಡಿದರೂ ರಕ್ಷಣೆಗೆ ಸರ್ಕಾರವೇ ಇದೆ ಎಂಬ ಭಾವನೆ ಆರೋಪಿಗಳಲ್ಲಿದೆ. ಹೀಗಾಗಿ ಈಗ ಹನುಮಾನ್ ಚಾಲೀಸ್ ಹಾಕುವವರ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹಿಂದೂ ವಿರೋಧಿಗಳು ಬಲಿಷ್ಠ ಮನಸ್ಥಿತಿ ತಲುಪಿದ್ದಾರೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಪ್ರಮುಖ ಕಾರಣ ಎಂದರು.
ಹಿಂದೂ ವಿರೋಧಿ ನಡೆ ಅನುಸರಿಸುತ್ತಿರುವ ಕಿಡಿಗೇಡಿಗಳಿಗೆ ಕಾಂಗ್ರೆಸ್ ಸರ್ಕಾರ ಆಶ್ರಯ ಕೊಡುತ್ತಿದೆ. ಇದೇ ರೀತಿ ತುಷ್ಟಿಕರಣದ ರಾಜಕಾರಣ ಮಾಡಿದರೆ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಎಚ್ಚರಿಸಿದರು.
ಇದನ್ನೂ ಓದಿ: CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ