Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ
Team Udayavani, Apr 14, 2024, 3:21 PM IST
ಹುಬ್ಬಳ್ಳಿ: ಪ್ರಧಾನಿ ಮೋದಿಯವರು ಯಾವ ಮುಖ ಇರಿಸಿಕೊಂಡು ರಾಜ್ಯಕ್ಕೆ ಬಂದಿದ್ದಾರೆಂದು ಕೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.
ಬಿಜೆಪಿ ರೈತ ಮೋರ್ಚ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನು ನಮ್ಮದೆಂದು ಹೇಳಿ ಪುಕ್ಕಟ್ಟೆ ಪ್ರಚಾರ ಪಡೆಯುವ ಸಿಎಂ ನೀವು. ರಾಜ್ಯಕ್ಕೆ ಶೇ.150-160ರಷ್ಟು ಗ್ರಾಂಟ್ ಇನ್ ಏಡ್ ಕೇಂದ್ರ ಸರಕಾರದಿಂದ ಪಡೆದರೂ, ಯಾವ ನೆರವು ಬಂದಿಲ್ಲವೆಂದು ಸುಳ್ಳು ಹೇಳಿ ಜನರ ದಾರಿತಪ್ಪಿಸುವ ಸಿಎಂ ನೀವೇ ಅಲ್ಲವೆ ಎಂದು ಛೇಡಿಸಿದರು.
ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡದೆ, ಕೇವಲ ಅವುಗಳ ಹೆಸರಲ್ಲಿ ಮತ ಗಳಿಕೆಗೆ ಮುಂದಾಗಿರುವ ಸಿಎಂ ಸಿದ್ಧರಾಮಯ್ಯನವರೇ ಪ್ರಧಾನಿಯವರನ್ನು ಪ್ರಶ್ನಿಸುವ ನೈತಿಕತೆ ನಿಮಗೇನಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ