ಕವಿ ಕಣವಿ ರಾಷ್ಟ್ರ ಕವಿಯಾಗುವುದಕ್ಕೆ ನನ್ನ ಸಹಮತವೂ ಇದೆ: ಪ್ರಹ್ಲಾದ್ ಜೋಶಿ
Team Udayavani, Feb 15, 2022, 6:47 PM IST
ಧಾರವಾಡ: ನಾಡಿನ ಹೆಸರಾಂತ ಕವಿ ಡಾ.ಚೆನ್ನವೀರ ಕಣವಿ ಅವರು ರಾಷ್ಟ್ರಕವಿಯಾಗುವುದಕ್ಕೆ ನನ್ನ ಸಹಮತವೂ ಇದೆ. ಈ ಬಗ್ಗೆ ನಾನೂ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಿಂದ ಬಂದ ತಕ್ಷಣ ಕಣವಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಕಣವಿ ಅವರಿಗೆ ರಾಷ್ಟ್ರ ಕವಿ ಗೌರವ ನೀಡಬೇಕು ಎಂದು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಬಂದಿರುವ ಪತ್ರದ ಬಗ್ಗೆ ನನ್ನ ಗಮನಕ್ಕಿಲ್ಲ. ಕಣವಿ ಮೃದು ಸ್ವಭಾವದ ವ್ಯಕ್ತಿ. ರಾಷ್ಟ್ರ ಕವಿ ಗೌರವಕ್ಕೆ ಕಣವಿ ಅರ್ಹರು. ಈ ಬಗ್ಗೆ ನಾನೂ ಪ್ರಯತ್ನ ಮಾಡುತ್ತೇನೆ ಎಂದರು.
ಕಣವಿ ಅವರ ನಮಗೆಲ್ಲರಿಗೂ ಆತ್ಮೀಯರು. ಒಂದು ತಿಂಗಳಿನಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಿನ ಕಾರಣದಿಂದಾಗಿ ಅವರು ಶೀಘ್ರ ಗುಣಮುಖರಾಗುತ್ತಿಲ್ಲ. ಡಾ.ನಿರಂಜನಕುಮಾರ ಅವರ ತಂಡ ಕಣವಿ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದೆ. ಚಿಕಿತ್ಸೆಗೆ ಕಣವಿ ಅವರೂ ಸ್ಪಂದಿಸುತ್ತಿದ್ದು, ಅವರು ಶೀಘ್ರ ಗುಣಮುಖರಾಗಬೇಕಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈಯಕ್ತಿಕವಾಗಿ ನನಗೂ ಕಳವಳವಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್