ಅಂಬೇಡ್ಕರ್ ಗೆ ಮೊದಲು ಭಾರತರತ್ನ ನೀಡದೆ ರಾಜೀವ್ ಗಾಂಧಿಗೆ ನೀಡಿದ್ಯಾಕೆ: ಪ್ರಹ್ಲಾದ್ ಜೋಶಿ
ದಾವೂದ್ ಇಬ್ರಾಹಿಂಗೂ ಕಾಂಗ್ರೆಸ್ ನವರು ಭಾರತ ರತ್ನ ನೀಡುತ್ತಾರೆ
Team Udayavani, Oct 19, 2019, 12:17 PM IST
ಹುಬ್ಬಳ್ಳಿ: ಸಿದ್ಧರಾಮಯ್ಯನವರು ವೀರಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಬದಲಾಗಿ ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಕೊಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶ ಕಂಡ ಅಪ್ರತಿಮ ವೀರ ಸಾವರ್ಕರ್ ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಸಿದ್ಧರಾಮಯ್ಯ ಅವರ ಈ ನಡೆಯನ್ನ ನಾನು ಖಂಡಿಸುತ್ತೇನೆ. ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನು ಸರಿಯಾಗಿ ಓದಿಕೊಂಡು ಮಾತನಾಡಲಿ. ಮುಂದೆ ದಾವೂದ್ ಇಬ್ರಾಹಿಂಗೂ ಕಾಂಗ್ರೆಸ್ ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ ಎಂದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆ ವಿಚಾರವಾಗಿ ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ನಾವು ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!