ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು
Team Udayavani, Dec 1, 2022, 10:20 PM IST
ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.
ಮೊಬೈಲ್ ನಂಬರ್ನಿಂದ ವಾಟ್ಸಪ್ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ.
ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಫೋನ್ ನಂಬರ್ ಮೇಲೆ ತನಿಖೆ ನಡೆಸುವಂತೆ ಮುತಾಲಿಕ್ ಅವರು ಗುರುವಾರ ದೂರು ದಾಖಲು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ