ಕೌಶಲ ವೃದ್ಧಿಗೆ ಪ್ರತಿಭಾ ಕಾರಂಜಿ ಪೂರಕ
Team Udayavani, Jul 27, 2018, 4:19 PM IST
ಅಳ್ನಾವರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಪರಿಪೂರ್ಣತೆಯತ್ತ ಸಾಗುವಂತೆ ಮಾಡಲು ಹಾಗೂ ಅವರ ವ್ಯಕ್ತಿತ್ವ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಿಂಗಪ್ಪ ಘಾಟಿನ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ನಡೆದ ಅಳ್ನಾವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಲು ಇದು ಸೂಕ್ತ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಮಕ್ಕಳ ಸಂವೇದನಶೀಲತೆ, ಆತ್ಮವಿಶ್ವಾಸ, ಬುದ್ಧಿಶಕ್ತಿ ಅನಾವರಣಗೊಳ್ಳುತ್ತದೆ. ಇದರಿಂದ ಸಮಾಜದ ಪರಿವರ್ತನೆ ಮಾಡಲು ಯುವ ಮನಸ್ಸುಗಳಿಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ ಎಂದರು.
ಅಳ್ನಾವರ, ಕಾಶೇನಟ್ಟಿ, ಬೆಣಚಿ, ಕಡಬಗಟ್ಟಿ, ಹುಲಿಕೇರಿ ಶಾಲೆಗಳ ಸುಮಾರು 300 ಸ್ಪರ್ಧಾಳುಗಳು ಭಾಗಿಯಾಗಿದ್ದರು. 30ಕ್ಕೂ ಹೆಚ್ಚು ಸ್ಪರ್ಧೆಗಳು ನಡೆದವು. ಎಕ್ಸೆಲ್ ಲೈಫ್ ಇನ್ಸುರೆನ್ಸ್ ಕಂಪನಿಯ ಧಾರವಾಡ ಶಾಖೆ ಮುಖ್ಯಸ್ಥ ಆನಂದಸಿಂಗ್ ರಜಪೂತ ಸ್ಪರ್ಧಾ ವಿಜೇತರ ಬಹುಮಾನಗಳ ಪ್ರಾಯೋಜಕತ್ವ ವಹಿಸಿದ್ದರು. ಪಪಂ ಅಧ್ಯಕ್ಷೆ ಭಾಗ್ಯವತಿ ಕುರುಬರ, ಉಪಾಧ್ಯಕ್ಷ ಕಿರಣ ಗಡಕರ, ಎಸ್ ಡಿಎಂಸಿ ಅಧ್ಯಕ್ಷ ಉಸ್ಮಾನ ಬಾತಖಂಡಿ, ರೊಜಾರಿಯೊ ಫರ್ನಾಂಡಿಸ್, ಮಂಜುಳಾ ಮೇದಾರ, ಅನಪೂರ್ಣಾ ಹಿರೇಮಠ, ಬಿಆರ್ಸಿ ಎಸ್.ಸಿ. ಅಂಗಡಿ, ಚಿನ್ನಮ್ಮ ಬಾಗಲಕೋಟಿ, ಆರ್.ವಿ. ಪಂಚಾಳ, ಎಚ್.ಎಸ್. ಬಡಿಗೇರ, ಎಂ.ಐ. ದಿವಟಗಿ, ಪುಂಡಲೀಕ ಪಾರದಿ, ದೀಪಾ ಲಾಡ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!