ಬಕ್ರೀದ್‌; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ

ಮುಸ್ಲಿಂ ಮುಖಂಡರ ಜತೆ ವಿಡಿಯೋ ಸಂವಾದ |ಕೋವಿಡ್‌ ಮುನ್ನೆಚ್ಚರಿಕಾ ಕ್ರಮ ಪಾಲನೆಗೆ ಸೂಚನೆ

Team Udayavani, Jul 18, 2021, 9:36 PM IST

17hub-13

ಹುಬ್ಬಳ್ಳಿ: ಕೋವಿಡ್‌ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು.

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್‌ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್‌ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರದಿಯಂತೆ ಪ್ರಾರ್ಥನೆ ಮಾಡಬಹುದಾಗಿದೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ.

60 ವಯಸ್ಸು ಮೇಲ್ಪಟ್ಟ ಹಾಗೂ 10 ವರ್ಷದ ಕೆಳಗಿನವರಿಗೆ ಮಸೀದಿಗಳಲ್ಲಿ ಪ್ರಾರ್ಥಿಸಲು ಅವಕಾಶವಿರುವುದಿಲ್ಲ. ಅವರು ಮನೆಯಲ್ಲಿಯೇ ಪ್ರಾರ್ಥಿಸಬೇಕು. ಮಸೀದಿಗೆ ಬರುವ ಮುನ್ನ ದೇಹದ ತಾಪಮಾನ ಪರೀಕ್ಷೆ ಮಾಡಿಸಿರಬೇಕು. ಹಸ್ತಲಾಘವ ಮತ್ತು ಆಲಿಂಗನ ನಿಷೇಧಿಸಲಾಗಿದೆ. ಆಸ್ಪತ್ರೆ, ಶಾಲೆ-ಕಾಲೇಜು ಆವರಣ, ಆಟದ ಮೈದಾನ, ಫುಟ್‌ಪಾತ್‌ ಹಾಗೂ ಉದ್ಯಾನವನದ ಒಳಗಡೆ ಮತ್ತು ಹೊರಗಡೆ ಬಲಿದಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು. ಕೋವಿಡ್‌ ನಿಯಮಗಳ ಪಾಲನೆ ಜೊತೆಗೆ ಈದ್ಗಾ ಮೈದಾನದಲ್ಲಿ 50 ಜನರಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕೆಂದು ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ, ಸಾಮೂಹಿಕವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸುತ್ತೇನೆ. ಸರ್ಕಾರದ ಆದೇಶ ಪ್ರಕಾರ ರಾಜ್ಯಾದ್ಯಂತ ಈದ್ಗಾ ಮೈದಾನದಲ್ಲಿ ಪಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಹೇಳಿದರು. ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಅಂಜುಮನ್‌ ಸಂಸ್ಥೆ ಅಧ್ಯಕ್ಷ ಯೂಸಫ್‌ ಸವಣೂರು, ಉಪಾಧ್ಯಕ್ಷ ಅಲ್ತಾಫ್‌ ಕಿತ್ತೂರು ಮೊದಲಾದವರಿದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.