ವಿದ್ಯುತ್‌ ಮಿತ ಬಳಕೆಗೆ ಆದ್ಯತೆ ನೀಡಿ

•ಹೆಸ್ಕಾಂ ಗ್ರಾಹಕರ ಜಾಗೃತಿ ಸಭೆ•ತಾಳ್ಮೆ ಕಳೆದುಕೊಳ್ಳದೆ ಸಿಬ್ಬಂದಿಗೆ ಸಹಕರಿಸಲು ಮನವಿ

Team Udayavani, Jul 27, 2019, 8:12 AM IST

hubali-tdy-3

ಹುಬ್ಬಳ್ಳಿ: ಅಂಚಟಗೇರಿಯಲ್ಲಿ ಹೆಸ್ಕಾಂ ಗ್ರಾಮೀಣ ವಿಭಾಗದಿಂದ ಆಯೋಜಿಸಿದ್ದ ಗ್ರಾಹಕರ ಜಾಗೃತಿ ಸಭೆಯನ್ನು ಗಣ್ಯರು ಉದ್ಘಾಟಿಸಿದರು.

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದಲೇ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯ ಎಂದು ಹೆಸ್ಕಾಂ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿರಣಕುಮಾರ ಬಿ. ಹೇಳಿದರು.

ಅಂಚಟಗೇರಿಯಲ್ಲಿ ಹೆಸ್ಕಾಂ ಗ್ರಾಹಕರ ಜಾಗೃತಿ ಸಭೆಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವಿದ್ಯುತ್‌ ಎಲ್ಲರಿಗೂ ಬೇಕು. ವಿದ್ಯುತ್‌ ಇಲ್ಲದೆ ಯಾವ ಕೆಲಸವೂ ಇಲ್ಲ ಎನ್ನುವ ಹಂತದಲ್ಲಿ ಇದ್ದೇವೆ. ವಿದ್ಯುತ್‌ ಮಿತಬಳಕೆ ಎಲ್ಲರ ಮೂಲ ಉದ್ದೇಶವಾಗಬೇಕು. ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ಆಗಬಾರದು, ವಿದ್ಯುತ್‌ ಅವಘಡಗಳು ಸಂಭವಿಸಬಾರದು ಎಂದು ಹೆಸ್ಕಾಂ ಸಿಬ್ಬಂದಿ ಹಗಲಿರುಳು ಸೇವೆಯಲ್ಲಿರುತ್ತಾರೆ. ಗ್ರಾಮದಲ್ಲಿ ಅಪಾಯಕಾರಿ ಸ್ಥಳಗಳಿದ್ದರೆ ಇಲಾಖೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತದೆ. ಇಲಾಖೆ ಕಣ್‌ತಪ್ಪಿನಿಂದ ಯಾವುದಾದರು ಸ್ಥಳ ಬಿಟ್ಟು ಹೋಗಿದ್ದರೆ ತಿಳಿಸಿದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಹೆಸ್ಕಾಂ ಗ್ರಾಹಕರು ತಮ್ಮ ಯಾವುದೇ ಸಮಸ್ಯೆಗಳಿದ್ದರೂ 1912ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು. ಅಲ್ಲಿ 24/7 ಕಾರ್ಯನಿರ್ವಹಣೆ ತಂಡ ಸದಾ ಸಿದ್ಧವಿರುತ್ತದೆ. ಮಳೆಗಾಲದಲ್ಲಿ ಲೈನ್‌ ಫಾಲ್rಗಳು ಕಂಡುಬಂದ ಸ್ಥಳಗಳನ್ನು ಗುರುತಿಸಿ ನಂತರ ಕೆಲಸ ಮಾಡಬೇಕಾಗುತ್ತದೆ. ಆದರೆ ಈ ಸಮಯದಲ್ಲಿ ತಾಳ್ಮೆ ಕಳೆದುಕೊಳ್ಳುವ ಗ್ರಾಹಕರು ಸಹಾಯವಾಣಿಗಳಿಗೆ ಸತತ ಕರೆ ಮಾಡಲು ಆರಂಭಿಸುತ್ತಾರೆ. ಇದರಿಂದ ಫಾಲ್r ಇರುವ ಲೈನ್‌ ಪರಿಶೀಲನೆ ನಡೆಸಲು ಸಿಬ್ಬಂದಿಗೆ ಸೂಚನೆ ನೀಡಲು ಅವಕಾಶ ನೀಡದಂತಹ ಸ್ಥಿತಿ ಅನುಭವಿಸುತ್ತೇವೆ. ಆದ್ದರಿಂದ ಗ್ರಾಹಕರು ಇಲಾಖೆಯೊಂದಿಗೆ ಸಹಕಾರ ನೀಡಬೇಕೆಂದರು.

ವಾಸುದೇವ ಮಾತನಾಡಿ, ಗ್ರಾಮದಲ್ಲಿ ಬರುವ ಕಾರವಾರ ಮುಖ್ಯ ರಸ್ತೆಯಲ್ಲಿ ರಸ್ತೆಗೆ ಅಡ್ಡವಾಗಿ ವಿದ್ಯುತ್‌ ತಂತಿಗಳು ಇವೆ. ರಸ್ತೆಯ ಪಕ್ಕದಲ್ಲಿಯೇ ವಿದ್ಯುತ್‌ ಪರಿವರ್ತಕ(ಟಿಸಿ) ಇದ್ದು, ಅದನ್ನು ಸರಿಪಡಿಸಿ ಎಂದು ಮನವಿ ಮಾಡಿದರು.

ಅಂಚಟಗೇರಿ ಗ್ರಾಪಂ ಅಧ್ಯಕ್ಷ ಬಸವರಾಜ ಬಿಡ್ನಾಳ ಮಾತನಾಡಿದರು. ಗ್ರಾಮದ ಸರಕಾರಿ ಶಾಲೆ ವಿದ್ಯಾರ್ಥಿಗಳಾದ ಉಮಾ ಬಣಕಾರ, ಚೈತ್ರಾ ಕುದರಿ ವಿದ್ಯುತ್‌ ಬಳಕೆ ಕುರಿತು ಭಾಷಣ ಮಾಡಿದರು. ಗ್ರಾಪಂ ಉಪಾಧ್ಯಕ್ಷೆ ನೀಲಮ್ಮ ಗಾಣಿಗೇರ, ಭೀಮಣ್ಣ ವಾಲಿಕಾರ, ತಾಜುದ್ದೀನ್‌ ಬರದೂರ, ಅಮೀರಖಾನ್‌ ಚಂದನಮಟ್ಟಿ, ನೀಲಮ್ಮ ಮತ್ತಿಹಳ್ಳಿ, ಮಲ್ಲಪ್ಪ ಮೊರಬದ, ಬಸಮ್ಮ, ಮಂಜುಳಾ ಮೊದಲಾದವರಿದ್ದರು. ಸರಕಾರಿ ಶಾಲೆ ವಿದ್ಯಾರ್ಥಿಗಳಾದ ಯಶೋಧಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಹೆಸ್ಕಾಂ ಗ್ರಾಮೀಣ ವಿಭಾಗದ ಡಿ.ಜಿ. ಪಾಟೀಲ ನಿರೂಪಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.