ಜರ್ಮನಿಯಿಂದ ತಾಯ್ನಾಡಿಗೆ ಮರಳಿದ ಗರ್ಭಿಣಿ


Team Udayavani, May 31, 2020, 9:07 AM IST

ಜರ್ಮನಿಯಿಂದ ತಾಯ್ನಾಡಿಗೆ ಮರಳಿದ ಗರ್ಭಿಣಿ

ಅಳ್ನಾವರ: ಕೋವಿಡ್ ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಜರ್ಮನಿಯಲ್ಲಿ ಸಿಲುಕಿ ಹೆರಿಗೆಗಾಗಿ ಮರಳಿ ತವರಿಗೆ ಬರಲು ಹಾತೊರೆಯುತ್ತಿದ್ದ ಮಹಿಳೆಯನ್ನು ಸ್ವದೇಶಕ್ಕೆ ಕರೆತರುವಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೆರವಾಗಿದ್ದಾರೆ.

ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ, ಪಟ್ಟಣದ ನಿವಾಸಿ ಎಂ.ಸಿ. ಹಿರೇಮಠ ಅವರ ಪುತ್ರಿ ವಿಜೇತಾ ಶಶಾಂಕ ಅವರು ಮಗಳು ನವ್ಯಾ ಜೊತೆಗೆ ತಾಯ್ನಾಡಿಗೆ ಮರಳಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನದಲ್ಲಿ ದೆಹಲಿಗೆ ಬಂದಿದ್ದು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅದೇ ವಿಮಾನದಲ್ಲಿ ಬೆಂಗಳೂರು ತಲುಪಿದ್ದಾರೆ.

ಜೋಶಿ ನೆರವು: ವಿಜೇತಾ ಅವರು ತಮ್ಮ ಪುತ್ರಿಯೊಂದಿಗೆ ಭಾರತಕ್ಕೆ ಬರಲು ಮಾ. 20ರಂದು ವಿಮಾನ ಟಿಕೆಟ್‌ ಕಾಯ್ದಿರಿಸಿದ್ದರು. ಅಷ್ಟರಲ್ಲಿಯೇ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಾ ಎಲ್ಲೆಡೆ ಲಾಕ್‌ ಡೌನ್‌ ಆಗಿ ಹೊರರಾಷ್ಟ್ರದಿಂದ ಭಾರತಕ್ಕೆ ಬರುವ ವಿಮಾನ ಸಂಚಾರ ರದ್ದು ಮಾಡಲಾಯಿತು. ಇದರಿಂದ ಅವರು ಜರ್ಮನಿಯಲ್ಲಿಯೇ ತಂಗಬೇಕಾಗಿತ್ತು. ಗರ್ಭಿಣಿಯರಿಗೆ 32 ವಾರ ಮುಗಿದ ನಂತರ ವಿಮಾನಯಾನ ನಿಷೇಧ ಹೇರಿದ್ದರಿಂದ ಮಗಳ ಹೆರಿಗೆಗಾಗಿ ಹಿರೇಮಠ ಕುಟುಂಬ ಸಾಕಷ್ಟು ಚಿಂತೆಗೀಡಾಗಿತ್ತು. ಆದಷ್ಟು ಬೇಗ ವಿಜೇತಾರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದರು. ಸಕಾಲದಲ್ಲಿ ಅವರ ಸಹಾಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಬಂದಿದ್ದು, ಹಿರೇಮಠ ಅವರು ದೂರವಾಣಿ ಕರೆ ಮಾಡಿ ಅಳಲು ತೋಡಿಕೊಂಡ ತಕ್ಷಣವೇ ಸಹಾಯಕ್ಕೆ ಮುಂದಾದರು.

ಹಾರಿತು ವಿಮಾನ: ಕೇಂದ್ರ ಸರ್ಕಾರ ತಯಾರಿಸಿದ್ದ ಅನಿವಾಸಿ ಭಾರತೀಯರನ್ನು ತವರಿಗೆ ಕರೆತರುವ ದೇಶಗಳ ಪಟ್ಟಿಯಲ್ಲಿ ಜರ್ಮನಿ ಹೆಸರು ಇರಲಿಲ್ಲ. ಆದರೆ, ಪ್ರಹ್ಲಾದ ಜೋಶಿ ಅವರ ಸೂಚನೆ ಮೇರೆಗೆ ಹಿರೇಮಠ ಅವರು ನಿಗದಿತ ನಮೂನೆಯ ಅರ್ಜಿ ತುಂಬಿ ಭಾರತ ಸರ್ಕಾರಕ್ಕೆ ಸಲ್ಲಿಸಿದ್ದರು. ಇದಾದ ಮರುದಿನವೇ ನಿಗದಿತ ನಮೂನೆಯಲ್ಲಿ ಜರ್ಮನಿಯಲ್ಲಿರುವ ಭಾರತೀಯ ದೂತಾವಾಸ ಕಚೇರಿಯವರು ಕೂಡಾ ಅರ್ಜಿ ಸ್ವೀಕರಿಸಿದಾಗ ತವರಿನತ್ತ ಮುಖ ಮಾಡಲು ವಿಜೇತಾರಿಗೆ ಹೊಸ ಆಶಾಭಾವನೆ ಮೂಡಿತು.

ಭಾರತೀಯ ದೂತಾವಾಸ ಕಚೇರಿ ಬಿಡುಗಡೆ ಮಾಡಿದ ಜರ್ಮನಿಯಿಂದ ಭಾರತಕ್ಕೆ ಬರುವ ಪ್ರಥಮ ವಿಮಾನಯಾನಿಗರ ಪಟ್ಟಿಯಲ್ಲಿ ವಿಜೇತಾ ಮತ್ತು ಅವರ ಪುತ್ರಿ ನವ್ಯಾ ಅವರ ಹೆಸರು ಇತ್ತು. ಕೇಂದ್ರ ಸಚಿವ ಜೋಶಿ ಅವರ ಪ್ರಯತ್ನದ ಫಲವಾಗಿ ಲಾಕ್‌ಡೌನ್‌ ಬಳಿಕ ಜರ್ಮನಿಯಿಂದ ಭಾರತಕ್ಕೆ ಪ್ರಥಮ ವಿಮಾನ ಹಾರಾಟವೂ ಸಾಧ್ಯವಾಗಿದೆ. ವಿಜೇತಾರ ಜೊತೆ ಮತ್ತೆ ನಾಲ್ಕೈದು ಗರ್ಭಿಣಿಯರು ಕೂಡಾ ತವರಿಗೆ ಮರಳಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.