ಪಠ್ಯಪುಸ್ತಕ ರಗಳೆಗೆ ಪೂರ್ವಸಿದ್ಧತೆ ಮದ್ದು


Team Udayavani, May 21, 2018, 5:17 PM IST

21-may-23.jpg

ಹುಬ್ಬಳ್ಳಿ: ಸರಕಾರಿ ಶಾಲೆ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಪುಸ್ತಕ ವಿತರಣೆಯಲ್ಲಿ ಹಿಂದೆ ಆಗಿದ್ದ ಗೊಂದಲದಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಬಾರಿ ವ್ಯವಸ್ಥಿತವಾಗಿ ಪುಸ್ತಕ ವಿತರಣೆಗೆ ಸಜ್ಜುಗೊಂಡಿದ್ದು, ಶೇ. 80ರಷ್ಟು ಪಠ್ಯಪುಸ್ತಕ ಬಂದಿದ್ದು, ಸಮವಸ್ತ್ರ ಇನ್ನು ಬರಬೇಕಿದೆ.

ಕಳೆದ ವರ್ಷ ಶಾಲಾ ಮಕ್ಕಳು ಪಠ್ಯ ಪುಸ್ತಕವಿಲ್ಲದೇ ಸುಮಾರು 4-5 ತಿಂಗಳು ಕಳೆದಿದ್ದರು. ಈ ಬಾರಿ ಅಂತಹ ಸ್ಥಿತಿ ತಪ್ಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಶಾಲೆ ಆರಂಭಕ್ಕೆ ಮುನ್ನವೇ ಬಹುತೇಕ ಪಠ್ಯಪುಸ್ತಕಗಳನ್ನು ರವಾನಿಸುವ ಕಾರ್ಯ ಮಾಡಿದೆ.

ಈಗಾಗಲೇ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ವಿಭಾಗದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಹರ ವಿಭಾಗದಿಂದ ಪಠ್ಯಪುಸ್ತಕ ವಿತರಣೆ ಆರಂಭಗೊಂಡಿದ್ದು, ಗ್ರಾಮೀಣ ವಿಭಾಗದಲ್ಲಿ ಮೇ 21ರಿಂದ ಪಠ್ಯಪುಸ್ತಕ ವಿತರಣೆ ಶುರುವಾಗಲಿದೆ.

ಶಹರ ವಿಭಾಗ: ಒಟ್ಟು 12 ಕ್ಲಸ್ಟರ್‌ಗಳಲ್ಲಿ 29 ಪ್ರಾಥಮಿಕ ಶಾಲೆ, 98 ಸರಕಾರಿ ಪ್ರೌಢಶಾಲೆ, 47 ಅನುದಾನಿತ ಸರಕಾರಿ ಪ್ರೌಢಶಾಲೆ, 135 ಅನುದಾನ ರಹಿತ ಸೇರಿ ಒಟ್ಟು 309 ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕಿದೆ. ಇದರಲ್ಲಿ ಸರಕಾರಿ, ಅನುದಾನಿತ ಶಾಲೆಗಳಿಗೆ ಉಚಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಮಾರಾಟ ಪ್ರಕ್ರಿಯೆ ನಡೆಯಲಿದೆ.

ಪ್ರಾಥಮಿಕ ಶಾಲೆಗೆ ಒಂದು ಚಾಕ್‌ ಬಾಕ್ಸ್‌ ಹಾಗೂ ಪ್ರೌಢಶಾಲೆಗೆ 2 ಚಾಕ್‌ ಬಾಕ್ಸ್‌ ಸೇರಿದಂತೆ ಎಲ್ಲ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ. ಈಗಾಗಲೇ ಎಸ್‌ಎಟಿಎಸ್‌ (ಸ್ಟುಡೆಂಟ್‌ ಅಚೀವ್‌ಮೆಂಟ್‌ ಟ್ರ್ಯಾಕಿಂಗ್‌ ಸಿಸ್ಟಮ್‌) ಮೂಲಕ ಆಯಾ ಶಾಲೆಗೆ ಬೇಕಾಗುವ ಪುಸ್ತಕದ ಮಾಹಿತಿ ಕಲೆ ಹಾಕಿದ್ದು ಅದರಂತೆ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಗುವುದು. ಎಲ್ಲ ವಿಷಯಗಳ ಸುಮಾರು 5,65,305 ಪಠ್ಯಪುಸ್ತಕಗಳ ಬೇಡಿಕೆ ಇದ್ದು, ಅದರಲ್ಲಿ ಸರಕಾರಿ ಶಾಲೆಗಳಿಗೆ ಉಚಿತವಾಗಿ ಪೂರೈಸಲು 3,00,448 ಹಾಗೂ ಮಾರಾಟಕ್ಕೆ 2,64,857 ಪಠ್ಯಪುಸ್ತಕಗಳ ಬೇಡಿಕೆ ಇದೆ. 

ಸದ್ಯ ಸರಕಾರಿ ಶಾಲೆಗಳಿಗೆ ಉಚಿತವಾಗಿ ಪೂರೈಸಲು 1,79,045 ಹಾಗೂ ಮಾರಾಟಕ್ಕೆ 1,88,578 ಪಠ್ಯಪುಸ್ತಕಗಳು ಸೇರಿ ಒಟ್ಟು 3,67,623 ಪಠ್ಯಪುಸ್ತಕಗಳು ಬಂದಿವೆ. ಉಚಿತ ವಿತರಣೆಗೆ 1,21,403 ಹಾಗೂ ಮಾರಾಟಕ್ಕೆ 76,279 ಸೇರಿ ಒಟ್ಟು 1,97,682 ಪಠ್ಯಪುಸ್ತಕಗಳು ಬರಬೇಕಾಗಿದೆ. ಇವು ಕೂಡಾ ಈ ತಿಂಗಳ ಕೊನೆಯವರೆಗೆ ಆಗಮಿಸಲಿದ್ದು, ಜೂನ್‌ ಮೊದಲ ವಾರದಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪುಸ್ತಕ ವಿತರಣೆ
ಮಾಡಲಾಗುವುದು. ಸದ್ಯ ಶೇ.80 ರಷ್ಟು ಪಠ್ಯಪುಸ್ತಕಗಳು ಬಂದಿದ್ದು, ಇನ್ನುಳಿದ ಶೇ. 20 ಪಠ್ಯಪುಸ್ತಕ ಶೀಘ್ರವೇ ಬರಲಿವೆ. ಶಹರ ವಿಭಾಗದಿಂದ ಈಗಾಗಲೇ 4 ಕ್ಲಸ್ಟರ್‌ಗಳಿಗೆ ಪುಸ್ತಕ ವಿತರಣೆ ಮಾಡಲಾಗಿದ್ದು, 8 ಕ್ಲಸ್ಟರ್‌ ಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕಿದೆ. ಇದರಲ್ಲಿ 3 ಕ್ಲಸ್ಟರ್‌ಗಳು ಉರ್ದು ಮಾಧ್ಯಮದ ಕ್ಲಸ್ಟರ್‌ಗಳಾಗಿವೆ.

ಗ್ರಾಮೀಣ ವಿಭಾಗ
12 ಕ್ಲಸ್ಟರ್‌ಗಳಲ್ಲಿ 115 ಸರಕಾರಿ ಪ್ರಾಥಮಿಕ ಶಾಲೆ, 22 ಉರ್ದು ಶಾಲೆ, 13+2 ಸರಕಾರಿ ಪ್ರೌಢಶಾಲೆ, 7 ಪ್ರಾಥಮಿಕ ಹಾಗೂ 15 ಅನುದಾನಿತ ಪ್ರೌಢಶಾಲೆ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಕನ್ನಡ ಮಾಧ್ಯಮ 36 ಹಾಗೂ ಆಂಗ್ಲ ಮಾಧ್ಯಮ 35 ಶಾಲೆಗಳಿವೆ. ಸದ್ಯ ಗ್ರಾಮೀಣ ವಿಭಾಗದ ಶಾಲೆಗಳಿಗೆ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಉಚಿತ ವಿತರಣೆಗೆ 1,81,566 ಹಾಗೂ ಮಾರಾಟ ಪ್ರತಿಗಳಿಗೆ 69,089 ಪ್ರತಿಗಳು ಬೇಡಿಕೆ ಇದೆ. ಉಚಿತ ವಿತರಣೆಗೆ 1,39,650 ಪಠ್ಯಪುಸ್ತಕಗಳು ಹಾಗೂ ಮಾರಾಟಕ್ಕೆ 55,867 ಪಠ್ಯಪುಸ್ತಕಗಳು ಬಂದಿವೆ. ಇನ್ನುಳಿದ ಪಠ್ಯಪುಸ್ತಕಗಳು ಶೀಘ್ರದಲ್ಲಿಯೇ ಬರಲಿದ್ದು ಈ ಬಾರಿ ಪಠ್ಯಪುಸ್ತಕದ ಸಮಸ್ಯೆ ಆಗಲಿಕ್ಕಿಲ್ಲ ಎಂಬ ನಿರೀಕ್ಷೆಯಿದೆ.

ಈಗಾಗಲೇ ಹುಬ್ಬಳ್ಳಿ ಶಹರ ವಿಭಾಗದ 12 ಕ್ಲಸ್ಟರ್‌ಗಳಿಗೆ ಪಠ್ಯಪುಸ್ತಕಗಳು ಆಗಮಿಸಿದ್ದು, ಅದರಲ್ಲಿ ಎಲ್ಲ ಕ್ಲಸ್ಟರ್‌ಗಳಿಗೆ ಅಂಕಿ-ಅಂಶಗಳ ಆಧಾರದ ಮೇಲೆ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಉರ್ದು, ತಮಿಳು, ತೆಲುಗು ಹಾಗೂ ಮರಾಠಿ ಭಾಷೆಯ ಪಠ್ಯಪುಸ್ತಕಗಳು ಶೀಘ್ರದಲ್ಲಿಯೇ ಬರಲಿವೆ. ಈ ಬಾರಿ ಪಠ್ಯಪುಸ್ತಕದ ಯಾವುದೇ ಸಮಸ್ಯೆ ಇಲ್ಲ. ಶಾಲೆಯ ಆರಂಭಕ್ಕೂ ಮುನ್ನ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತದೆ.
ಪಿ.ಡಿ. ಬಸನಾಳ,
ಶಹರ ವಿಭಾಗದ ಶಿಕ್ಷಣ ಸಂಯೋಜಕ

ಕಳೆದ ಬಾರಿ ಸರಿಯಾದ ಸಮಯಕ್ಕೆ ಪಠ್ಯಪುಸ್ತಕಗಳು ವಿತರಣೆಯಾಗದೆ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರಿಗೂ ಆತಂಕವಾಗಿತ್ತು. ಈ ವರ್ಷ ಈಗಾಗಲೇ ಎಲ್ಲ ತರಗತಿಯ ಪಠ್ಯಪುಸ್ತಕಗಳು ಬಂದಿದ್ದು ಮೇ 21ರಿಂದ ಎಲ್ಲ ಗ್ರಾಮೀಣ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುವುದು. ಉರ್ದು ಮಾಧ್ಯಮಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳು ಶೀಘ್ರ ಬರಲಿವೆ.
ಎಸ್‌.ಎನ್‌. ಬಶೆಟ್ಟಿಯವರ,
ಗ್ರಾಮೀಣ ಶಿಕ್ಷಣ ಸಂಯೋಜಕ 

ಬಸವರಾಜ ಹೂಗಾರ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.