ಧಾರವಾಡದಲ್ಲಿ ಮಹಿಳಾ ಬಯಲು ಬಂದೀಖಾನೆಗೆ ಸಿದ್ಧತೆ


Team Udayavani, Aug 16, 2018, 6:45 AM IST

ban16081806.jpg

ಧಾರವಾಡ: ರಾಜ್ಯದ ಮೊದಲ ಮಹಿಳಾ ಬಯಲು ಬಂದೀಖಾನೆ ಧಾರವಾಡದಲ್ಲಿ ಸ್ಥಾಪನೆಗೆ ಸಿದ್ಧತೆ ನಡೆದಿದ್ದು, ಈ ಬಗ್ಗೆ ಧಾರವಾಡ ಕೇಂದ್ರ ಕಾರಾಗೃಹ ಸಮಗ್ರ ಅಧ್ಯಯನ ನಡೆಸಿ ಶೀಘ್ರವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

ಸದ್ಯ ರಾಜ್ಯದಲ್ಲಿ ಬೆಂಗಳೂರು ಸಮೀಪದ ದೇವನಹಳ್ಳಿಯಲ್ಲಿ ಬಯಲು ಬಂದೀಖಾನೆ ಇದೆ. ಆದರೆ ಇದು ಪುರುಷರಿಗೆ ಮಾತ್ರ. ಸನ್ನಡತೆ ಆಧಾರಿತ ಮಹಿಳೆಯರಿಗಾಗಿಯೇ ಪ್ರತ್ಯೇಕ ಬಯಲು ಕಾರಾಗೃಹ ಅಗತ್ಯವಿದ್ದು, ಅದನ್ನು ಧಾರವಾಡದಲ್ಲಿ ಸ್ಥಾಪಿಸಬೇಕೆಂದು ಬಂದೀಖಾನೆ ಇಲಾಖೆ ಹೊಸ ಯೋಜನೆ ರೂಪಿಸುತ್ತಿದ್ದು, ಇದಕ್ಕೆ  ಹಿರಿಯ ಅಧಿಕಾರಿಗಳು ಸಹಮತ ಸೂಚಿಸಿದ್ದಾರೆ.

ಕೇರಳದಲ್ಲಿ ಈಗಾಗಲೇ ಮಹಿಳೆಯರಿಗೆ ಪ್ರತ್ಯೇಕ ಬಯಲು ಬಂದೀಖಾನೆ ಆರಂಭಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿತ್ತಲ್ಲದೇ ಮಹಿಳಾ ಕೈದಿಗಳ ಮನಃ ಪರಿವರ್ತನೆಗೆ ಹೆಚ್ಚು ಅನುಕೂಲವಾಗಿದೆ. ಉತ್ತರ ಪ್ರದೇಶದಲ್ಲಿ ಅಲ್ಲಿನ ಸರ್ಕಾರ ಮಹಿಳಾ ಕೈದಿಗಳನ್ನು ಬಂಧನದಲ್ಲಿಡದೆ ಅವರಿಗೆ ಉದ್ಯೋಗ, ಕುಟುಂಬ ನಿರ್ವಹಣೆಗೆ ಕೆಲಸ ಮಾಡಲು ಅವಕಾಶ ನೀಡಿದೆ. ಇದೆಲ್ಲವನ್ನೂ ಆಧಾರವಾಗಿಟ್ಟುಕೊಂಡು ದೇಶದಲ್ಲೇ ಮಾದರಿ ಮಹಿಳಾ ಬಯಲು ಬಂದೀಖಾನೆ ಸ್ಥಾಪಿಸುವುದಕ್ಕೆ ಚಿಂತನೆ ನಡೆದಿದೆ.

ಹೈಕೋರ್ಟ್‌ ಸಮೀಪ ಭೂಮಿ: ಬಂದೀಖಾನೆಗೆ ಕನಿಷ್ಠ 50ರಿಂದ 75 ಎಕರೆ ಜಮೀನು ಬೇಕು. ಸದ್ಯಕ್ಕೆ ಧಾರವಾಡ-ಬೆಳಗಾವಿ ರಸ್ತೆಯಲ್ಲಿನ ಹೈಕೋರ್ಟ್‌ ಬಳಿ ಅಥವಾ ಧಾರವಾಡ-ನವಲಗುಂದ ರಸ್ತೆಯ ಮಾರಡಗಿ ಸಮೀಪದಲ್ಲಿ ಸ್ಥಳ ಗುರುತಿಸಲಾಗಿದೆ. ಆದರೆ ನವಲಗುಂದ ರಸ್ತೆಯಲ್ಲಿ ಉತ್ತಮ ಕೃಷಿ ಭೂಮಿ ಇದ್ದು ಭೂ ಸ್ವಾಧೀನ ಕಷ್ಟವಾಗುವ ಸಾಧ್ಯತೆ ಇರುವುದನ್ನು ಮನಗಂಡಿರುವ ಅಧಿಕಾರಿಗಳು, ಧಾರವಾಡ-ಬೆಳಗಾವಿ ರಸ್ತೆಯಲ್ಲಿನ ಹೈಕೋರ್ಟ್‌ ಸಮೀಪ ಅಥವಾ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಪಕ್ಕದಲ್ಲಿ ಬಯಲು ಬಂದೀಖಾನೆ ಸ್ಥಾಪಿಸುವುದು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಏನಿದು ಬಯಲು ಬಂದೀಖಾನೆ?
ವಿವಿಧ ಬಗೆಯ ಅಪರಾಧಗಳನ್ನು ಮಾಡಿ ಜೈಲುಪಾಲಾದ ಕೈದಿಗಳನ್ನು ಬರೀ ಕೊಠಡಿಯಲ್ಲಿ ಅಥವಾ ಕಂಬಿಯ ಹಿಂದೆ ಕೂಡಿ ಹಾಕಿ ಶಿಕ್ಷಿಸುವ ಬದಲು ಅವರಲ್ಲಿ ಮನಃ ಪರಿವರ್ತನೆ ತರಲು ಬಳಕೆಯಾಗುತ್ತಿರುವ ಹೊಸ ವಿಧಾನ ಇದು. ಇಲ್ಲಿ ಕೈದಿಗಳನ್ನು ಸ್ವತಂತ್ರವಾಗಿ ಬಿಟ್ಟು, ಅವರಿಂದ ಕೃಷಿ, ತೋಟಗಾರಿಕೆ, ಕರಕುಶಲ ವಸ್ತುಗಳ ತಯಾರಿಕೆ, ಹೈನುಗಾರಿಕೆ ಮಾಡಿಸಲಾಗುತ್ತದೆ. ಆ ಮೂಲಕ ಅವರಲ್ಲಿ ಬದಲಾವಣೆ ಮೂಡಿಸಿ ಮತ್ತೆ ಅಪರಾಧ ಚಟುವಟಿಕೆಯತ್ತ ಸುಳಿಯದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

ಪ್ರಸ್ತಾವನೆಯಲ್ಲೇನಿದೆ?
ಬಯಲು ಬಂದೀಖಾನೆ ಸ್ಥಾಪಿಸಲು ಧಾರವಾಡದ ಹವಾಗುಣ, ಸಾಮಾಜಿಕ, ಸಾಂಸ್ಕೃತಿಕ ವಾತಾವರಣ ಉತ್ತಮವಾಗಿದೆ ಎಂಬ ಅಭಿಪ್ರಾಯ  ವ್ಯಕ್ತವಾಗಿದೆ. ಇಲ್ಲಿ ಮಹಿಳೆಯರಿಗೆ ಕೃಷಿ, ತೋಟಗಾರಿಕೆ, ಕೈಮಗ್ಗ, ಕರಕುಶಲ ತರಬೇತಿ ಸೇರಿ ಸ್ವಂತ ಉದ್ಯೋಗಕ್ಕೆ ಅಗತ್ಯ ತರಬೇತಿ ನೀಡಲು ಅನುಕೂಲವಿದೆ. ಸಾರಿಗೆ ವ್ಯವಸ್ಥೆ, ಮಹಿಳಾ ಸುರಕ್ಷತೆ, ಅಧಿಕಾರಿಗಳ ಭೇಟಿ ಮತ್ತು ನಿರ್ವಹಣೆಗೂ ಧಾರವಾಡ ಸೂಕ್ತವಾಗಿದೆ. ಹೀಗಾಗಿ ಇಲ್ಲಿಯೇ  ಸ್ಥಾಪಿಸಬೇಕೆಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ.

ಪ್ರಸ್ತಾವನೆ ಸಿದ್ಧಗೊಳಿಸಲಾಗಿದೆ. ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುತ್ತೇವೆ. ಅಗತ್ಯವಾದ ಭೂಮಿ ನೀಡುವಂತೆ ಧಾರವಾಡ ಜಿಲ್ಲಾಧಿಕಾರಿಗಳ ಜತೆಗೂ ಚರ್ಚಿಸಲಾಗುವುದು.
– ಡಾ.ಅನೀತಾ, ಧಾರವಾಡ ಕೇಂದ್ರ ಕಾರಾಗೃಹ ಅಧೀಕ್ಷಕಿ

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.