ಸಾಧಕರಿಗೆ ಮಕ್ಕಳ ಶ್ರೇಷ್ಠ ಕವಿ ಪ್ರಶಸ್ತಿ ಪ್ರದಾನ


Team Udayavani, Apr 23, 2021, 7:24 PM IST

ಜಹಗಯಹಗ್

ಧಾರವಾಡ : ಮಕ್ಕಳ ವ್ಯಕ್ತಿತ್ವದ ಬಗ್ಗೆ ಅವರ ಬಾಲ್ಯದಲ್ಲಿಯೇ ಸಮಾಜ, ಶಿಕ್ಷಕರು ಮತ್ತು ಪಾಲಕರು ಗಮನಹರಿಸಿ ಮೌಲ್ಯಯುತ ಆರೋಗ್ಯಪೂರ್ಣ ಉತ್ತಮ ನಾಗರಿಕ ಪ್ರಜ್ಞೆಯ ಮಕ್ಕಳನ್ನು ರೂಪಿಸಬೇಕು ಎಂದು ಅಥಣಿಯ ಅಪ್ಪಾಸಾಹೇಬ ಅಲಿಬಾದಿ ಹೇಳಿದರು.

ಕವಿಸಂನಲ್ಲಿ ಕವಿ ಬಿ.ಕೆ. ಹೊಂಗಲ ದತ್ತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಮಕ್ಕಳ ಶ್ರೇಷ್ಠ ಕವಿ ಪ್ರಶಸ್ತಿ-2020 ಹಾಗೂ 2021 ಪ್ರದಾನ ಸಮಾರಂಭ ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ಸಾಹಿತ್ಯ ಎಂಬ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಬೆಳೆಯಬೇಕು. ಜಾತಿವಾದ, ಮೂಢನಂಬಿಕೆ ಹೊರತುಪಡಿಸಿ ಬೆಳೆಯಬೇಕು.

ಸಂಕೋಚಿತ ಮನೋಭಾವನೆಯಿಂದ ದೂರವಿರಬೇಕು. ಆ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸೃಷ್ಟಿಯಾಗಬೇಕು. ಮಕ್ಕಳ ವಯಸ್ಸಿಗೆ ಹಾಗೂ ಮುಂದಿನ ಭವಿಷ್ಯಕ್ಕನುಗುಣವಾಗಿ ಸಾಹಿತ್ಯ ಹುಟ್ಟಬೇಕು ಎಂದರು. ಪ್ರಶಸ್ತಿ ಪ್ರದಾನ ಮಾಡಿದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ಮಕ್ಕಳ ಸಾಹಿತ್ಯ ವಿಶಿಷ್ಟವಾದ ಸಾಹಿತ್ಯವಾಗಿದೆ.

ಮಕ್ಕಳನ್ನು ಬಾಲ್ಯದಲ್ಲಿಯೇ ಸಾಹಿತ್ಯ, ಸಂಸ್ಕೃತಿ, ಕಲೆ, ನಮ್ಮ ನಾಡು-ನುಡಿಯೆಡೆಗೆ ಆಕರ್ಷಣೆ ಮಾಡಿ, ಮಕ್ಕಳಲ್ಲಿ ಈ ಕುರಿತು ಕೆಚ್ಚನ್ನು ಹುಟ್ಟಿಸುವ ಸಾಮರ್ಥ್ಯ ಮಕ್ಕಳ ಸಾಹಿತ್ಯಕ್ಕಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಮಗು ಮೊದಲು ಸಮಾಜದ ಒಳ್ಳೆಯ ಮಾನವನಾಗಿ ಬೆಳೆಯಬೇಕು. ಅಂದಾಗ ಮಾತ್ರ ಆ ಮಗುವಿನ ಹುಟ್ಟಿಗೆ ಸಾರ್ಥಕತೆ ಬರುತ್ತದೆ. ಮಗು ದೇಶಪ್ರೇಮಿಯಾಗಬೇಕು. ಮಗು ದಯಾಗುಣವನ್ನು ಹೊಂದಿರಬೇಕು. ಮಗು ತಾಯಿಯ ಹೃದಯವಂತಿಕೆ ಹೊಂದಿರಬೇಕು. ಮಗು ಬಸವಣ್ಣನವರ ಕಾಯಕವೇ ಕೈಲಾಸ ನಾಣ್ಣುಡಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಗು ಸಮಾಜದಲ್ಲಿ ಎಲ್ಲರಿಗಿಂತ ಸಣ್ಣವ ಎನ್ನುವ ಮನೋಭಾವನೆಯಿಂದ ಬೆಳೆಯಬೇಕು.

ಅಂದಾಗ ಮಾತ್ರ ಆ ಮಗು ದೇಶದ ಸಂಪತ್ತಾಗಿ ಪರಿವರ್ತನೆಗೊಳ್ಳುತ್ತದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಮಾತನಾಡಿದರು. ಲಕ್ಷ್ಮೇಶ್ವರದ ಮಹಾದೇವಪ್ಪ ಕೊತ್ತಲ ಅವರಿಗೆ 2020ನೇ ಸಾಲಿನ ಮಕ್ಕಳ ಶ್ರೇಷ್ಠ ಕವಿ ಪ್ರಶಸ್ತಿ ಹಾಗೂ ತುರಮರಿಯ ಬಿ.ವಿ. ನೇಸರಗಿ ಅವರಿಗೆ 2021ನೇ ಸಾಲಿನ ಮಕ್ಕಳ ಶ್ರೇಷ್ಠ ಕವಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕವಿ ಬಿ.ಕೆ. ಹೊಂಗಲ ಇದ್ದರು. ಶಿ.ಮ. ರಾಚಯ್ಯನವರ ಸ್ವಾಗತಿಸಿದರು. ಸತೀಶ ತುರಮರಿ ಪರಿಚಯಿಸಿ, ನಿರೂಪಿಸಿದರು. ಪ್ರೊ| ಸೋಮು ದೊಡಮನಿ ವಂದಿಸಿದರು.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.