ಮನಸೂರಲ್ಲಿ ಬಾಲ್ಯವಿವಾಹಕ್ಕೆ ತಡೆ
Team Udayavani, May 8, 2019, 11:00 AM IST
ಧಾರವಾಡ: ಮನಸೂರ ಗ್ರಾಮದ ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಮೇ 8 ರಂದು ನಿಗದಿಯಾಗಿದ್ದ ಬಾಲ್ಯವಿವಾಹ ತಡೆಯುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಶಸ್ವಿಯಾಗಿದೆ.
ತಡಕೋಡ ಗ್ರಾಮದ ಕರೆಪ್ಪ ಮೇಲಿನಮನಿ ಅವರ ಮಗ ಬಸವರಾಜನಿಗೆ ಮನಸೂರಿನ ಅಪ್ರಾಪ್ತ ಯುವತಿಯೊಂದಿಗೆ ಮದುವೆ ಮಾಡಲು ಮೇ 8ರಂದು ನಿಶ್ಚಯ ಮಾಡಲಾಗಿತ್ತು. ಅದರಂತೆ ಎರಡೂ ಕುಟುಂಬದಲ್ಲಿ ಮದುವೆ ತಯಾರಿ ಕೂಡ ಜೋರಾಗಿಯೇ ನಡೆದಿತ್ತು. ಆದರೆ ವಧುವಿಗೆ ಇನ್ನೂ 18 ವರ್ಷ ತುಂಬಿಲ್ಲ ಎಂಬ ಮಾಹಿತಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತಲುಪಿದ ಕೂಡಲೇ ಕಾರ್ಯ ಪ್ರವೃತ್ತರಾದ ಘಟಕದ ಅಧಿಕಾರಿಗಳು ಮನಸೂರಿಗೆ ತೆರಳಿದ್ದರು. ಅಲ್ಲಿ ವಧುವಿನ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಮದುವೆ ಆಗದಂತೆ ತಡೆದಿದ್ದಾರೆ. ಈ ವೇಳೆ ಮಗಳಿಗೆ ಮದುವೆ ಮಾಡಲ್ಲ ಎಂದು ಪೋಷಕರಿಂದ ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡಿರುವ ಘಟಕದ ಅಧಿಕಾರಿಗಳು, ಪೋಷಕರಿಗೆ ನೋಟಿಸ್ ನೀಡಿ ಮೇ 10ರಂದು ಮಧ್ಯಾಹ್ನ 3 ಗಂಟೆಯೊಳಗೆ ಮಗಳೊಂದಿಗೆ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಾಗುವಂತೆ ಸೂಚಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಘಟಕದ ಸಿಬ್ಬಂದಿಗಳಾದ ಮಹ್ಮದಲಿ ತಹಶೀಲ್ದಾರ, ವಿಶಾಲಾ ಕಾನಪೇಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಸುಂಡಿ, ಅಂಗನವಾಡಿ ಕಾರ್ಯಕರ್ತೆ ಮಮತಾ ಮಲ್ಲಿಕಾರ್ಜುನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್