ಚಂದ್ರಗಿರಿಯಲ್ಲಿ ಬಾಲ್ಯವಿವಾಹಕ್ಕೆ ತಡೆ
Team Udayavani, May 24, 2019, 10:45 AM IST
ಧಾರವಾಡ: ತಾಲೂಕಿನ ಚಂದ್ರಗಿರಿ ಗ್ರಾಮದಲ್ಲಿ ಗುರುವಾರ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಡೆ ಹಿಡಿದಿದೆ.
ಚಂದ್ರಗಿರಿಯ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಗೊಡಚಿನಮಲಕ್ಕಿ ಗ್ರಾಮದ ಪರಶುರಾಮ ದಾಸನಟ್ಟಿ ಎಂಬ ಯುವಕನೊಂದಿಗೆ ಮದುವೆ ಮಾಡಲು ಪೋಷಕರು ನಿರ್ಧರಿಸಿ, ಮೇ 23ರಂದು ಮದುವೆ ಮಾಡಲು ತಯಾರಿ ಕೈಗೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ರಕ್ಷಣಾ ಘಟಕವು, ಬಾಲಕಿಯ ಮನೆಗೆ ಭೇಟಿ ನೀಡಿ ಪೋಷಕರಿಗೆ ತಿಳಿ ವಧು ಹಾಗೂ ವರನ ಪೋಷಕರಿಗೆ ನೋಟಿಸ್ ಜಾರಿ ಮಾಡಿ ಸಂಜೆ ವೇಳೆ ಘಟಕಕ್ಕೆ ಹಾಜರಾಗುವಂತೆ ಸೂಚಿಸಲಾಯಿತು.
ಈ ಸೂಚನೆ ಅನ್ವಯ ಘಟಕಕ್ಕೆ ಬಾಲಕಿಯೊಂದಿಗೆ ಭೇಟಿ ನೀಡಿ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದು, ಅಲ್ಲದೇ ಮೇ 28ರಂದು ನಡೆಯುವ ಮಕ್ಕಳ ಕಲ್ಯಾಣ ಸಮಿತಿ ಸಭೆಗೆ ಹಾಜರಾಗುವಂತೆ ಮರು ನೋಟಿಸ್ ಜಾರಿ ಮಾಡಲಾಯಿತು. ಅಷ್ಟೇ ಅಲ್ಲದೇ ಬಾಲಕಿಯನ್ನು ವಶಕ್ಕೆ ಪಡೆದು ನವನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ಪುನರ್ವಸತಿಗಾಗಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ