ಪ್ರಾಥಮಿಕ ಶಿಕ್ಷಕರ ಜವಾಬ್ದಾರಿ ಹಿರಿದು


Team Udayavani, Sep 6, 2018, 4:32 PM IST

6-september-21.jpg

ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮಗ್ರ ಹಾಗೂ ಮತ್ತಷ್ಟು ಉನ್ನತವಾಗಿ ಬೆಳೆಯುವಲ್ಲಿ ಶಿಕ್ಷಕರ ಪಾತ್ರ ಬಹು ದೊಡ್ಡದು. ಶಿಕ್ಷಣಕ್ಕೆ ಅಡಿಪಾಯ ಹಾಕುವ ಪ್ರಾಥಮಿಕ ಶಾಲೆ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಸಮ್ಮೇಳನಾಧ್ಯಕ್ಷ ಪ್ರೊ| ಬಿ.ಎಫ್. ದಂಡಿನ್‌ ಅಭಿಪ್ರಾಯಪಟ್ಟರು.

ಕನಕದಾಸ ಶಿಕ್ಷಣ ಸಮಿತಿ ಹಾಗೂ ಚುಟುಕು ಸಾಹಿತ್ಯ ಪರಿಷತ್‌ ವತಿಯಿದ ಬುಧವಾರ ಆಯೋಜಿಸಿದ್ದ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರ ಭಾಷಣ ಮಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿ ಪ್ರಾಥಮಿಕ ಶಿಕ್ಷಣ ಅತೀ ಅಮೂಲ್ಯವಾಗಿರುತ್ತದೆ. ಅಡಿಪಾಯ ಗಟ್ಟಿಯಾಗಿದ್ದಾರೆ ಮೇಲಿನ ಕಟ್ಟಡ ಸುಂದರವಾಗಿ ರೂಪಗೊಳ್ಳುತ್ತದೆ. ಹೀಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದ್ದು, ಇದನ್ನು ಅರಿತು ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ರೂಪಿಸಬೇಕು ಎಂದು ಸಲಹೆ ನೀಡಿದರು.

ಆಂಗ್ಲ ಹಾಗೂ ಹಿಂದಿ ಭಾಷೆ ಅನಿವಾರ್ಯವಾಗಿದ್ದು, ಅನ್ಯ ಭಾಷೆಗಳ ಭರಾಟೆಯಲ್ಲಿ ಕನ್ನಡ ಸೊರಗಬಾರದು, ಕೊರಗಬಾರದು. ಕನ್ನಡ ಸಮೃದ್ಧಿಯಾಗಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಪಾತ್ರ ಕೂಡ ದೊಡ್ಡದು. ಅಕಾಡೆಮಿ, ಸಾಹಿತ್ಯ ಪರಿಷತ್‌ನಿಂದ ಪ್ರಕಟಿಸಿದ ಪುಸ್ತಕಗಳನ್ನು ಮಾರಾಟಕ್ಕಾಗಿ ಗೋದಾಮುಗಳಲ್ಲಿ ಕೊಳೆಸುವ ಬದಲು ಪುಸ್ತಕಗಳ ಬೇಡಿಕೆಯಿರುವ ಗ್ರಂಥಾಲಯಗಳಿಗೆ ನೀಡುವುದು ಒಳಿತು. ಶಿಕ್ಷಕನಲ್ಲಿರುವ ಸಾಹಿತ್ಯವನ್ನು ಗುರುತಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಸಮ್ಮೇಳನ ನಿಜಕ್ಕೂ ಶ್ಲಾಘನೀಯವಾಗಿದೆ ಸಂತಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಮ್ಮೇಳನಕ್ಕೆ ಚಾಲನೆ ನೀಡಿ, ಎಲ್ಲಾ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹು ದೊಡ್ಡದಾಗಿದೆ. ಮಹಾನ್‌ ವ್ಯಕ್ತಿಗಳನ್ನಾಗಿ ರೂಪಿಸುವ ಮಹತ್ಕಾರ್ಯದಲ್ಲಿ ತೊಡಗಿರುವುದರಿಂದ ನಾವು ಯಾವು ಹುದ್ದೆಯಲ್ಲಿದ್ದರೂ ಶಿಕ್ಷಕರಿಗೆ ತಲೆ ಬಾಗಲೇಬೇಕು. ಇಂತಹ ಗೌರವ ಘನತೆ ಹೊಂದಿದ ವೃತ್ತಿಯಲ್ಲಿರುವ ಪ್ರತಿಯೊಬ್ಬರು ಸಮಾಜದ ಜವಾಬ್ದಾರಿ ಅರಿತುಕೊಂಡು ಉತ್ತಮ ಪ್ರಜೆಗಳನ್ನು ರೂಪಿಸಬೇಕು ಎಂದು ಹೇಳಿದರು.

ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಶಿಕ್ಷಕರಿಂದಲೇ ರಾಷ್ಟ್ರ ಬದುಕಿದಿಯೇ ಹೊರತು ಯಾವುದೇ ಸರಕಾರ, ರಾಜಕಾರಣಿಗಳಿಂದಲ್ಲ. ಶಿಕ್ಷಕ ಸಮೂಹ ಉತ್ತಮ ಪ್ರಜೆಗಳನ್ನು ರೂಪಿಸುತ್ತಿರುವುದರಿಂದ ನಮ್ಮ ದೇಶ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಪ್ರಾಮುಖ್ಯತೆ ಗಳಿಸಿದೆ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದ್ದು, ಮಾನವನಾಗಿ ಬಾಳಬೇಕಾದರೆ ಸಂಸ್ಕಾರ ಅತಿ ಮುಖ್ಯ ಎಂದರು. ಇದಕ್ಕೂ ಮೊದಲು ಸಮ್ಮೇಳನದ ಸರ್ವಾಧ್ಯಕ್ಷ ಡಾ| ಬಿ.ಎಫ್.ದಂಡಿನ ದಂಪತಿಯನ್ನು ಕಿಮ್ಸ್‌ ಮುಂಭಾಗದ ಮಹಾತ್ಮಗಾಂಧಿ ಪ್ರತಿಮೆಯಿಂದ ಕನಕದಾಸ ಮಹಾವಿದ್ಯಾಲಯದವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು.

ಉದ್ಘಾಟನಾ ಕಾರ್ಯಕ್ರಮದ ನಂತರ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿಗಳು ಜರುಗಿದವು. ಪ್ರೊ| ಎಸ್‌.ವೈ. ಚಿಕ್ಕಟ್ಟಿ, ಎಚ್‌.ಬಿ. ಕೊರವರ, ಶಿವಮೂರ್ತಿ ದ್ಯಾವನೂರ ಅವರನ್ನು ಸನ್ಮಾನಿಸಲಾಯಿತು. ಕನಕದಾಸ ಶಿಕ್ಷಣ ಸಮಿತಿ ಉಪಾಧ್ಯಕ್ಷ ಶಾಂತಣ್ಣ ಕಡಿವಾಳ, ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರೊ|ಡಿ.ಡಿ.ಮುತಾಲಿಕ ದೇಸಾಯಿ, ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ನಿರ್ದೇಶಕ ಚನ್ನಬಸಪ್ಪ ಧಾರವಾಡಶಟ್ರಾ, ಡಾ| ಎಚ್‌.ಬಿ. ಬೆಳಗಲಿ, ಸಂದೀಪ ಬೂದಿಹಾಳ ಇನ್ನಿತರರಿದ್ದರು.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.