ಪ್ರಧಾನಿ ನರೇಂದ್ರ ಮೋದಿ ದಕ್ಷ  ಆಡಳಿತಗಾರ: ಗದ್ದಿಗೌಡರ 


Team Udayavani, May 7, 2018, 4:50 PM IST

7-May-18.jpg

ಜಮಖಂಡಿ: ಬಿಜೆಪಿ ಪಕ್ಷದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ದಕ್ಷ ಆಡಳಿತಗಾರರಾಗಿ ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು. ತಾಲೂಕಿನ ಜಂಬಗಿ ಸೇತುವೆ ಹತ್ತಿರ ರವಿವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ಸಾರ್ವಜನಿಕ ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ದೇಶದ 23 ರಾಜ್ಯಗಳಲ್ಲಿ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿ ಸಿದಲ್ಲಿ 24ನೇ ರಾಜ್ಯವಾಗಲಿದೆ. ಬಿಜೆಪಿ ಪಕ್ಷದ ಅಸ್ವಿತ್ವ ಇಲ್ಲದ ತ್ರಿಪುರಾ, ಕಾಶ್ಮೀರ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ, ಆಡಳಿತ ಸಂಪೂರ್ಣ ಭ್ರಷ್ಟತೆಯಿಂದ ಕೂಡಿದ್ದು, ಜನರು ರೋಸಿ ಹೋಗಿದ್ದಾರೆ. ಬದಲಾವಣೆಗಾಗಿ ಜನರು ಕಾಯುತ್ತಿದ್ದು, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸದಲ್ಲಿ ತೊಡಗಿಕೊಂಡಲ್ಲಿ ಬಿಜೆಪಿ ಗೆಲವು ಸಾಧಿ ಸಲಿದೆ. ಕಾಂಗ್ರೆಸ್‌ ಹಗರಣಗಳ ಸರಕಾರವಾಗಿದ್ದು, ತಮ್ಮ ಪಕ್ಷದ ಕಾರ್ಯಕರ್ತರ, ಶಾಸಕ, ಸಚಿವರಿಗೆ ಕ್ಲೀನ್‌ ಚೀಟ್‌ ಮೂಲಕ ಭ್ರಷ್ಟತೆಯಲ್ಲಿ ತೊಡಗಿಕೊಂಡಿದೆ ಎಂದರು.

ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ನಿಷ್ಕ್ರಿಯಗೊಂಡಿದೆ. ಲೋಕಾಯಯಕ್ತ ಸ್ಥಗಿತಗೊಳಿಸಿ ಹಲ್ಲಿಲ್ಲದ ಎಸಿಬಿ ಸಂಸ್ಥೆ ರಚಿಸಿ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ರಾಜ್ಯದಲ್ಲಿ ಮರಳು ಲೂಟಿ ದಂಧೆ ವ್ಯವಸ್ಥಿತ ರೀತಿಯಲ್ಲಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಕಿತ್ತೂಗೆಯಲು  ಧೀಮಂತ ನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಬೇಕೆಂದು ಹೇಳಿದರು.

ಶಾಸಕ ಗೋವಿಂದ ಕಾರಜೋಳ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ವೀರಣ್ಣ ಚರಂತಿಮಠ, ಮುರಗೇ‌ ನಿರಾಣಿ, ಸಿದ್ದು ಸವದಿ, ನಾರಾಯಣಸಾ ಬಾಂಡೆಗೆ ಸಹಿತ ಹಲವರು ಇದ್ದರು.

ನೆಲಕ್ಕುರುಳಿದ ಸೌಂಡ ಸಿಸ್ಟಮ್‌: ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಜಂಬಗಿ ರಸ್ತೆ ಪಕ್ಕದಲ್ಲಿ ಬೃಹತ್‌ ಮೈದಾನದಲ್ಲಿ ನಿರ್ಮಿಸಿದ ಹತ್ತಾರು ಸೌಂಡ್‌ ಸ್ಪೀಕರಗಳನ್ನು ಜೋಡಿಸಿದ್ದ ಬೃಹತ್‌ ಕಟೌಟ್‌ ಗಾಳಿಗೆ ಧರೆಗೆ ಉರುಳಿತು. ಇಲ್ಲಿ ಯಾವುದೆ ಅನಾಹುತ ಸಂಭವಿಸಿಲ್ಲ.

ನೀರಿಗೆ ಹಾಹಾಕಾರ: ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮನದ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ಕಾರ್ಯಕರ್ತರ ಆಗಮನ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಪ್ಯಾಕೆಟ್‌ ಮೂಲಕ ವಿತರಿಸಿದ ನೀರು ಸರಿಯಾಗಿ ತಲುಪದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಎದುರಾಯಿತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.