ಜನರಿಗೆ ನೀರು ನೀಡುವುದು ಆದ್ಯ ಕರ್ತವ್ಯ
ಹಳಿಯಾಳದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಭೇಟಿಯಾದ ಅಳ್ನಾವರ ಪಪಂ ಸದಸ್ಯರ ನಿಯೋಗ
Team Udayavani, Apr 8, 2022, 11:22 AM IST
ಅಳ್ನಾವರ: ಪಟ್ಟಣದ ಜನತೆ ಪ್ರತಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿತ್ತು. ಅದನ್ನು ಮನಗಂಡು ಶಾಶ್ವತ ಪರಿಹಾರಕ್ಕಾಗಿ ಕಾಳಿ ನದಿಯಿಂದ ನೀರು ಒದಗಿಸಲಾಗಿದೆ ಎಂದು ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಇಲ್ಲಿನ ಪಪಂ ಸದಸ್ಯರ ನಿಯೋಗ ಗುರುವಾರ ಹಳಿಯಾಳಕ್ಕೆ ಹೋಗಿ ಶಾಸಕ ದೇಶಪಾಂಡೆ ಅವರನ್ನು ಭೇಟಿ ಮಾಡಿ ಕಾಳಿ ನದಿ ನೀರು ಯೋಜನೆ ಅನುಷಾನಗೊಳ್ಳಲು ಕೈಜೋಡಿಸಿದ್ದಕ್ಕೆ ಸತ್ಕರಿಸದ ನಂತರ ಅವರು ಮಾತನಾಡಿ, ಜನರಿಗೆ ನೀರು ನೀಡುವುದು ನಮ್ಮ ಆದ್ಯ ಕರ್ತವ್ಯ ಎಂದರು.
ಅಳ್ನಾವರ ಮತ್ತು ಹಳಿಯಾಳ ಅಕ್ಕಪಕ್ಕದ ಪಟ್ಟಣಗಳು. ಹಿಂದಿನ ಕಾಲದಿಂದ ಪರಸ್ಪರ ಸಹೋದರತ್ವ ಭಾವನೆಯಿಂದ ನಡೆದುಕೊಂಡು ಬಂದಿವೆ. ಎರಡು ಪಟ್ಟಣದ ಮಧ್ಯ ಭಾವನಾತ್ಮಕ ಸಂಬಂಧ ಇದೆ. ಪಕ್ಕದ ಊರಿನ ಜನರಿಗೆ ಕುಡಿಯುವ ನೀರು ನೀಡಿದ ತೃಪ್ತಿ ನನಗಿದೆ. ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಸೇರಿ ಕೆಲಸ ಮಾಡೋಣ. ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಪಪಂ ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಹಳಿಯಾಳ ಪುರಸಭೆ ಅಧ್ಯಕ್ಷ ಅಜರ್ ಬಸರಿಕಟ್ಟಿ, ಪಪಂ ಸದಸ್ಯರಾದ ಛಗನಲಾಲ ಪಟೇಲ, ಮಧು ಬಡಸ್ಕರ್, ಅಮೂಲ ಗುಂಜೀಕರ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಯಲಕಪಾಟಿ, ರಮೇಶ ಕುನ್ನೂರಕರ, ಯಲ್ಲಪ್ಪ ಹೂಲಿ, ಶಾಲೆಟ್ ಬರೆಟ್ಟೊ, ಮಂಗಳಾ ರವಳಪ್ಪನವರ, ಭಾಗ್ಯವತಿ ಕುರುಬರ, ನೇತ್ರಾವತಿ ಕಡಕೋಳ, ಅನ್ನಪೂರ್ಣಾ ಕೌಜಲಗಿ, ತಮೀಮ ತೇರಗಾಂವ, ಸುನಂದಾ ಕಲ್ಲು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್