ಕಾರಾಗೃಹದಲ್ಲಿ ಮರದ ಮೇಲಿಂದ ಬಿದ್ದ ಅತ್ಯಾಚಾರ ಆರೋಪಿ ಕೈದಿ ಸಾವು
Team Udayavani, Jan 26, 2020, 1:41 PM IST
ಧಾರವಾಡ : ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮರವೇರಿದ್ದ ಕೈದಿಯೊಬ್ಬ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ.
ಚೇತನ್ ಕುಮಾರ್ ಅಲಿಯಾಸ್ ಮೇಕೆ (28) ಮರದಿಂದ ಬಿದ್ದು ಕೆಳಗೆ ಬಿದ್ದು ಸಾವನ್ನಪ್ಪಿದ ಕೈದಿ.
ಬಳ್ಳಾರಿ ಜೈಲಿನಲ್ಲಿದ್ದ ಈತ ಇತ್ತೀಚೆಗಷ್ಟೇ ಧಾರವಾಡ ಜೈಲಿಗೆ ವರ್ಗವಾಗಿದ್ದ. ಆದರೆ ಆತ ಯಾವುದೋ ಕಾರಣಕ್ಕೆ ಕಾರಾಗೃಹದೊಳಗಿದ್ದ ಮರವೇರಿ ಪ್ರತಿಭಟನೆ ಮಾಡಿದ್ದ ಎಂದು ವರದಿಯಾಗಿದೆ. ಈತ ಈ ಹಿಂದೆಯೂ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ಎನ್ನಲಾಗಿದೆ. ಆದರೆ ಇಂದು ಮರವೇರಿದ್ದ ಆತ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಅತ್ಯಾಚಾರದ ಆರೋಪ ಎದುರಿಸುತ್ತಿದ್ದ ಚೇತನ್ ಕುಮಾರ್ ಅಲಿಯಾಸ್ ಮೇಕೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದ ನಿವಾಸಿಯಾಗಿದ್ದಾನೆ. ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ 2015ರಲ್ಲಿ ಬಂಧಿತನಾಗಿದ್ದ.
ಜಿಲ್ಲಾ ನ್ಯಾಯಾಲಯದಲ್ಲಿ ಚೇತನ್ ಕುಮಾರ್ ಗೆ 10 ವರ್ಷ ಶಿಕ್ಷೆಯಾಗಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ