ನೀರೂರಿಸುತ್ತಿದೆ ನವಣೆಯ ಅವಲಕ್ಕಿ


Team Udayavani, Sep 24, 2018, 4:30 PM IST

24-sepctember-20.jpg

ಹುಬ್ಬಳ್ಳಿ: ಸಿರಿಧಾನ್ಯಗಳಲ್ಲಿನ ಪೋಷಕಾಂಶ, ದೇಹಾರೋಗ್ಯದ ಮೇಲೆ ಇದರಿಂದಾಗುವ ಪರಿಣಾಮಗಳ ಜತೆಗೆ, ಸಿರಿಧಾನ್ಯ ಬಳಸಿ ವಿವಿಧ ಪದಾರ್ಥಗಳ ಸವಿ ಉಣಬಡಿಸುತ್ತಿರುವ ಕೃಷಿ ವಿವಿಯ ಗೃಹ ಮತ್ತು ಆಹಾರ ವಿಜ್ಞಾನ ವಿಭಾಗ, ಸಿರಿಧಾನ್ಯ ಬಳಸಿ ಉತ್ಪನ್ನಗಳ ತಯಾರಿಕೆ ತಂತ್ರಜ್ಞಾನ ಹಾಗೂ ತರಬೇತಿಯ ಜಾಗೃತಿ ಮೂಡಿಸತೊಡಗಿದೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿನ ಮಳಿಗೆಗಳಲ್ಲಿ ಸಿರಿಧಾನ್ಯಗಳಿಂದ ತಯಾರಿಸ್ಪಟ್ಟ ಬೇಕರಿ ಉತ್ಪನ್ನಗಳು, ಉಂಡೆ, ಚಕಲಿ, ಅವಲಕ್ಕಿ, ಕೋಡಬಳೆ ಹೀಗೆ ತರಾವಧಿ ಪದಾರ್ಥಗಳು ತಿಂಡಿಪ್ರಿಯರ ಬಾಯಲ್ಲಿ ನೀರೂರಿಸುತ್ತಿದ್ದು, ಅನೇಕರನ್ನು ತನ್ನತ್ತ ಆಕರ್ಷಿಸುತ್ತಿವೆ.

ಧಾರವಾಡ ಕೃವಿವಿಯ ಗೃಹ ಮತ್ತು ಆಹಾರ ವಿಜ್ಞಾನ ವಿಭಾಗ, ಫ‌ುಡ್‌ ಟೆಕ್‌ ವಿಭಾಗದದವರು ಜನರಲ್ಲಿ ಸಿರಿಧಾನ್ಯಗಳ ಬಳಕೆ ಹೆಚ್ಚಳ ನಿಟ್ಟಿನಲ್ಲಿ ಪ್ರದರ್ಶನ, ಮಾಹಿತಿ ಹಾಗೂ ಮಾರಾಟ ವ್ಯವಸ್ಥೆ ಕೈಗೊಂಡಿದ್ದಾರೆ. ನವಣೆ ಅವಲಕ್ಕಿ, ಕೊರ್ಲೆ ಕುಕ್ಕೀಸ್‌: ಸಿರಿಧಾನ್ಯಗಳಾದ ನವಣೆ, ಸಜ್ಜೆ, ಹಾರಕ, ಕೊರ್ಲೆ, ಊದಲು, ಬರುಗು, ಜೋಳ, ರಾಗಿಯಂತಹ ಸಿರಿಧಾನ್ಯಗಳನ್ನು ಬಳಸಿಕೊಂಡು ಏನೆಲ್ಲಾ ಆಹಾರ ಪದಾರ್ಥ, ತಿನಿಸುಗಳನ್ನು ತಯಾರಿಸಬಹುದು ಎಂಬುದರ ಅಧ್ಯಯನ, ಸಂಶೋಧನೆ ಕೈಗೊಳ್ಳುವ ಮೂಲಕ ಹೊಸ ಹೊಸ ಪದಾರ್ಥಗಳನ್ನು ತಯಾರಿಸಲಾಗುತ್ತದೆ.

ಸಿರಿಧಾನ್ಯಗಳನ್ನು ಬಳಸಿ ಉಂಡೆ, ಚಕಲಿ, ಕೋಡಬಳೆ, ಸೇವ್‌, ಶಂಕರಪೊಳೆ, ಬರ್ಫಿ, ಬ್ರೆಡ್‌, ಬನ್‌, ಬಿಸ್ಕಿಟ್‌ ಇನ್ನಿತರ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಈ ವರ್ಷ ಹೊಸ ಪದಾರ್ಥವಾಗಿ ನವಣೆ ಅವಲಕ್ಕಿ, ಹಾರಕ ಮತ್ತು ಕೊರ್ಲೆಗಳನ್ನು ಬಳಸಿಕೊಂಡು ಕುಕ್ಕೀಸ್‌ ತಯಾರಿಸಲಾಗಿದೆ. ನವಣೆಯಿಂದ ಅನೇಕ ಉತ್ಪನ್ನಗಳನ್ನು ತಯಾರಿಸಬಹುದಾಗಿದ್ದರೂ ಅವಲಕ್ಕಿ ತಯಾರಿಸುವುದರ ಕುರಿತಾಗಿ ನಡೆದ ಅಧ್ಯಯನ ಇದೀಗ ಉತ್ಪನ್ನ ರೂಪದಲ್ಲಿ ಹೊರಬಂದಿದೆ.

ನವಣೆಯನ್ನು ಅಕ್ಕಿಯಾಗಿಸಿ ರೋಟರ್‌ ಫ್ಲೆಕರ್‌ ಯಂತ್ರದಲ್ಲಿ ಅದನ್ನು ಹಾಕುವ ಮೂಲಕ ನವಣೆ ಅಕ್ಕಿಯನ್ನು ಅವಲಕ್ಕಿ ರೂಪಕ್ಕೆ ತರಲಾಗುತ್ತದೆ. ಒಂದು ರೀತಿಯಲ್ಲಿ ರವಾದಂತೆ ಕಾಣುವ ನವಣೆ ಅವಲಕ್ಕಿಗೆ ಶೇಂಗಾ, ಪುಟಾಣಿ, ಒಣಕೊಬ್ಬರಿ, ಅರಿಶಿಣದೊಂದಿಗೆ ಒಗ್ಗರಣೆ ಕೊಡುವ ಮೂಲಕ ಅವಲಕ್ಕಿ ತಯಾರಿಸಲಾಗುತ್ತದೆ. ಒಂದು ಕೆಜಿ ಅವಲಕ್ಕಿ 300ರೂ.ಗೆ ದೊರೆಯಲಿದ್ದು, ಸುಮಾರು ಎರಡು ತಿಂಗಳವರೆಗೆ ಇದನ್ನು ಇರಿಸಿದರೂ ಏನು ಆಗುವುದಿಲ್ಲ ಎಂಬುದು ಗೃಹ ಮತ್ತು ಆಹಾರ ವಿಜ್ಞಾನ ವಿಭಾಗದ ಅಧಿಕಾರಿಗಳ ಅನಿಸಿಕೆ. 

ಗೃಹ ಮತ್ತು ಆಹಾರ ವಿಜ್ಞಾನ ವಿಭಾಗದಿಂದ ಸಿರಿಧಾನ್ಯಗಳನ್ನೇ ಬಳಸಿಕೊಂಡು ಇದುವರೆಗೆ ಸುಮಾರು 75 ಆಹಾರ ಪದಾರ್ಥ ಹಾಗೂ ತಿನಿಸುಗಳನ್ನು ಹೊರತಲಾಗಿದೆ. ಮಧುಮೇಹಿಗಳಿಗೆ ಉತ್ಪನ್ನ: ಸಿರಿಧಾನ್ಯ ಮಧುಮೇಹಿಗಳಿಗೆ ಅತ್ಯಂತ ಸ್ನೇಹಿಯಾಗಿವೆ. ಈ ಹಿನ್ನೆಲೆಯಲ್ಲಿ ಮಧುಮೇಹಿಗಳಿಗೆ ಪೂರಕವಾಗಿ ನವಣೆ ಸೇರಿದಂತೆ ವಿವಿಧ ಸಿರಿಧಾನ್ಯ ಬಳಸಿಕೊಂಡು ಅನ್ನ, ಉಪ್ಪಿಟ್ಟು ಇನ್ನಿತರ ಆಹಾರ ಪದಾರ್ಥ ತಯಾರಿಸಲಾಗಿದೆ. ಸಿರಿಧಾನ್ಯಗಳನ್ನೇ ಬಳಸಿಕೊಂಡು ಮಕ್ಕಳಿಗೆ ಪೂರಕ ಆಹಾರ ಪೌಡರ್‌ ತಯಾರಿಸಲಾಗಿದ್ದು, ನೈಸರ್ಗಿಕ ಪೋಷಕಾಂಶಗಳನ್ನು ಒಳಗೊಂಡಿದೆ.

ಅದೇ ರೀತಿ ಕ್ರೀಡಾಪಟುಗಳ ದೇಹಾರೋಗ್ಯಕ್ಕೆ ಶಕ್ತಿದಾಯಕ ಮಿಕ್ಸ್‌ ನ್ನು ಹೊರತರಲಾಗಿದೆ. ಬಾಸ್ಕೆಟ್‌ಬಾಲ್‌ ಕ್ರೀಡಾಪಟುಗಳ ಮೇಲೆ ಪ್ರಯೋಗ ಮಾಡಿ, ಅದರ ಪರಿಣಾಮದ ಆಧಾರದಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಮಾರುಕಟ್ಟೆಯಲ್ಲಿ ಕ್ರೀಡಾಪಟುಗಳಿಗೆ ಶಕ್ತಿದಾಯಕ ಮಿಕ್ಸ್‌ಗಳು ದುಬಾರಿಯಾಗಿದ್ದು, ಕೃವಿವಿಯಲ್ಲಿ ತಯಾರಿಸಿದ ಶಕ್ತಿವರ್ಧಕ ಮಿಕ್ಸ್‌ ಒಂದು ಕೆಜಿಗೆ ಕೇವಲ 120ರೂ.ನಲ್ಲಿ ದೊರೆಯುತ್ತದೆ. ಸಿರಿಧಾನ್ಯಗಳಿಂದ ತಯಾರಿಸಿದ ತಿನಿಸುಗಳಿಂದ ದೇಹಾರೋಗ್ಯಕ್ಕೆ ಪೂರಕ ಕಾರ್ಯ, ಅದರೊಳಗಿನ ಪೋಷಕಾಂಶ ಇನ್ನಿತರ ಮಾಹಿತಿ ನೀಡಲಾಗುತ್ತಿದ್ದು, ಪ್ರದರ್ಶನ ಮಳಿಗೆಗೆ ಹೊಂದಿಕೊಂಡ ಇನ್ನೊಂದು ಮಳಿಗೆಯಲ್ಲಿ ಉತ್ಪನ್ನಗಳ ಮಾರಾಟ ವ್ಯವಸ್ಥೆ ಕೈಗೊಳ್ಳಲಾಗಿದೆ. 

ಸಿರಿಧಾನ್ಯಗಳ ಮಹತ್ವವನ್ನು ಇಂದಿನ ಯುವ ಜನಾಂಗಕ್ಕೆ ತಿಳಿಪಡಿಸಬೇಕಾಗಿದೆ. ಸಂಪ್ರದಾಯ ರೀತಿಯಲ್ಲಿ ಬಳಕೆಗೆ ಹೇಳಿದರೆ ಬಳಸುವವರ ಸಂಖ್ಯೆ ಹೆಚ್ಚದು ಎಂಬುದನ್ನು ಅರಿತು, ಇಂದಿನ ಯುವ ಸಮೂಹ ಇಷ್ಟಗಳಿಗೆ ಪೂರಕವಾಗಿ ಬೇಕರಿ ಇನ್ನಿತರ ಉತ್ಪನ್ನಗಳನ್ನು ತಯಾರಿಸಲಾಗಿದೆ. ಸಹಜವಾಗಿಯೇ ಇವು ಆಕರ್ಷಿಸುತ್ತಿವೆ. ಸಿರಿಧಾನ್ಯ ಮೌಲ್ಯವರ್ಧನೆ ಉತ್ಪನ್ನಗಳ ಮಹತ್ವದ ಜತೆಗೆ, ನಾವು ಅಭಿವೃದ್ಧಿ ಪಡಿಸಿದ ತಂತ್ರಜ್ಞಾನವನ್ನು ಉದ್ಯಮಾಸಕ್ತರಿಗೆ ಅಗತ್ಯ ತರಬೇತಿಯೊಂದಿಗೆ ನೀಡಲು ಸಿದ್ಧರಿದ್ದೇವೆ.
. ಡಾ| ಕಸ್ತೂರಿಬಾ,
  ಮುಖ್ಯಸ್ಥರು, ಗೃಹ-ಆಹಾರ ವಿಜ್ಞಾನ ವಿಭಾಗ, ಕೃವಿವಿ.

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.