ಸ್ಮಾರ್ಟ್ ರಸ್ತೆಗಳಿಗೆ ಡಿಸೆಂಬರ್ ಗಡುವು
ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್
Team Udayavani, Nov 21, 2020, 4:37 PM IST
ಹುಬ್ಬಳ್ಳಿ: ಪ್ರತಿಷ್ಠಿತ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಕುರಿತು ಸಾರ್ವಜನಿಕರಿಗೆಹೆಚ್ಚಿನ ಮಾಹಿತಿ ನೀಡಬೇಕು. ಅವರಲ್ಲಿರುವ ತಪ್ಪು ಅಭಿಪ್ರಾಯಗಳನ್ನು ದೂರ ಮಾಡುವನಿಟ್ಟಿನಲ್ಲಿ ಯೋಜನೆಯಡಿ ಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಧ್ಯಮಗಳ ಮುಖಾಂತರ ಪ್ರಚಾರ ಕೈಗೊಳ್ಳಿಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರವಿಕುಮಾರ ಸುರಪುರ ಹೇಳಿದರು.
ಐಟಿ ಪಾರ್ಕ್ನಕೆಯುಐಡಿಎಫ್ಸಿ ಬೋರ್ಡ್ ರೂಮ್ನಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಟೆಂಡರ್ ಕರೆದು ಕಾರ್ಯಾದೇಶ ನೀಡಿದ ಕಾಮಗಾರಿಗಳನ್ನು ನಿಗದಿತಅವಧಿಯೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ ಉದ್ಘಾಟನೆಯಾಗಿ ಸಾರ್ವಜನಿಕರಿಗೆ ಬಳಕೆಯಾಗುತ್ತಿರುವ ಯೋಜನೆಗಳ ಸ್ಥಳದಲ್ಲಿ ಸ್ಮಾರ್ಟ್ ಸಿಟಿ ಲಾಂಛನ ಹಾಗೂ ಕಾಮಗಾರಿ ವೆಚ್ಚದ ಬಗ್ಗೆ ಮಾಹಿತಿ ಫಲಕ ಅಳವಡಿಸಿ ಎಲ್ಲಾ ವಿವರಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿ ಒದಗಿಸಬೇಕು. ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಯೋಜನೆಯಡಿ ಅಭಿವೃದ್ಧಿ ಪಡಿಸುತ್ತಿರುವ ಎಲ್ಲಾ ರಸ್ತೆಗಳನ್ನು ಡಿಸೆಂಬರ್ ಅಂತ್ಯದ ವೇಳೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಘನತ್ಯಾಜ್ಯ ವಿಲೇವಾರಿ ಕಾರ್ಯ ಸಮರ್ಪಕವಾಗಿನಿರ್ವಹಿಸಬೇಕು. ಮನೆಗಳಲ್ಲಿ, ಅಪಾರ್ಟ್ಮೆಂಟ್ ಗಳಲ್ಲಿ ಕಸ ವಿಂಗಡಣೆ ಮಾಡದವರಿಗೆ ದಂಡ ವಿಧಿಸಬೇಕು. ಇಂಟಿಗ್ರೇಟೆಡ್ ಕಮಾಂಡಿಂಗ್ ಸೆಂಟರ್ಹೆಚ್ಚು ಕ್ರಿಯಾಶೀಲವಾಗಬೇಕು. ಇದಕ್ಕೆ ತಗುಲಿರುವ45 ಕೋಟಿ ರೂ. ವೆಚ್ಚ ಸಾರ್ಥಕವಾಗಬೇಕು. ಆದಷ್ಟು ಬೇಗ ಮಹಾನಗರ ಪಾಲಿಕೆ, ಹೆಸ್ಕಾಂ, ಅಗ್ನಿಶಾಮಕ,
ಆಂಬ್ಯುಲೆನ್ಸ್, ಬಿಆರ್ಟಿಎಸ್ ಹೀಗೆ ಎಲ್ಲಾ ವಿಭಾಗಗಳಕಮಾಂಡಿಂಗ್ ಅಲ್ಲಿ ನೆರವೇರಬೇಕು. ಸ್ಮಾರ್ಟ್ ಸಿಟಿ ಯೋಜನೆ ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು, ಇಂಜಿನಿಯರ್ಗಳು ಕಾಮಗಾರಿಯ ಸ್ಥಳಗಳಿಗೆ ತೆರಳಿ ಗುಣಮಟ್ಟ ಪರಿಶೀಲಿಸಬೇಕು ಎಂದರು.
ಮಾಸ್ಕ್ ಧರಿಸದವರಿಗೆ ದಂಡ: ಅವಳಿನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ಬಹಳಷ್ಟು ಜನ ಮಾಸ್ಕ್ ಧರಿಸದೇ ಓಡಾಡುತ್ತಿರುವುದು ಕಂಡು ಬಂದಿದೆ. ಪಾಲಿಕೆ, ಪೊಲೀಸ್ ಇಲಾಖೆಯವರು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಬೇಕು. ಪಾಲಿಕೆ ವತಿಯಿಂದ ಮಾರ್ಷಲ್ಗಳನ್ನು ನೇಮಕ ಮಾಡಿ ಎಂದು ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿದರು. ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ ಅಹ್ಮದ್ ಸೇರಿದಂತೆ ಹೆಸ್ಕಾಂ, ಸಂಚಾರಿ ಪೊಲೀಸರು, ಕುಡಿಯುವ ನೀರು ಹಾಗೂ ನೈರ್ಮಲ್ಯ ಮಂಡಳಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಅವಳಿನಗರ ರಾಜ್ಯಕ್ಕೆ ಪ್ರಥಮ : ರಾಜ್ಯದ ಏಳು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನವಾಗುತ್ತಿದೆ. ಈ ನಗರಗಳ ಪೈಕಿ ಹುಬ್ಬಳ್ಳಿ-ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯ ದೇಶದಲ್ಲಿ ಐದನೇ ಸ್ಥಾನದಲ್ಲಿದೆ. ಅವಳಿನಗರದಲ್ಲಿ ಒಟ್ಟು 80 ಕೋಟಿ ರೂ. ವೆಚ್ಚದ ಹೊಸ ಯೋಜನೆಗಳು, ವಿಸ್ತೃತ ಯೋಜನಾ ವರದಿ ಹಂತದಿಂದ ಟೆಂಡರ್ ಹಂತಕ್ಕೆ ಬಂದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ| ರವಿಕುಮಾರ ಸುರಪುರ ಹೇಳಿದರು.
ಸುಗಮ ಸಂಚಾರಕ್ಕೆ ಯೋಜನೆ : ಅವಳಿನಗರದ ರಸ್ತೆಗಳಲ್ಲಿ ಮಾರ್ಗದರ್ಶನ ನೀಡುವ ಸೈನ್ಬೋರ್ಡ್ಗಳಿಲ್ಲ. ಟ್ರಾಫಿಕ್ ಸಿಗ್ನಲ್ಗಳ ಕಾರ್ಯಕ್ಷಮತೆ ಹೆಚ್ಚಬೇಕು. ಸಂಚಾರಿವೃತ್ತಗಳಲ್ಲಿ ಜಿಬ್ರಾ ಕ್ರಾಸಿಂಗ್ ಪಟ್ಟಿಗಳಿರಬೇಕು. ಮುಂದಿನ ಹಲವು ವರ್ಷಗಳನ್ನು ಯೋಚಿಸಿ ರಸ್ತೆಗಳ ಅಗಲೀಕರಣ ಕೈಗೊಳ್ಳಿ. ಮುಂದಿನಸಭೆಯ ವೇಳೆ ಅವಳಿನಗರದ ಸಂಚಾರ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. – ಡಾ| ರವಿಕುಮಾರ ಸುರಪುರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್