ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟರಿಗೆ ಉತ್ತೇಜನ


Team Udayavani, Oct 14, 2019, 10:57 AM IST

huballi-tdy-2

ಧಾರವಾಡ: ನೂತನ ಕೈಗಾರಿಕಾ ನೀತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಕವಿಸಂನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಕೈಗಾರಿಕಾ ನೀತಿ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಪ್ರಕಟವಾಗಲಿದೆ. ಅದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಲಾಗುವುದು ಎಂದರು. ಬಸವಣ್ಣ, ಡಾ| ಬಿ.ಆರ್‌. ಅಂಬೇಡ್ಕರ್‌, ಮಹರ್ಷಿ ವಾಲ್ಮೀಕಿ ಸೇರಿದಂತೆ ಎಲ್ಲಾ ಮಹನೀಯರು ಯಾವುದೇ ಜಾತಿ, ಮತಗಳಿಗೆ ಸೀಮಿತವಲ್ಲ. ಮಹರ್ಷಿ ವಾಲ್ಮೀಕಿ ಹೆಸರು ತೆಗೆದುಕೊಂಡ ಕೂಡಲೇ ಶ್ರೇಷ್ಠ ಮಹಾಕಾವ್ಯ ರಾಮಾಯಣ ಎಲ್ಲರಿಗೂ ನೆನಪಾಗುತ್ತದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಭಾರತ ಸರ್ಕಾರ ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ವಿಶೇಷವಾಗಿ ಎಸ್‌ಟಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಾರಂಭಿಸಿದೆ. ದೇಶದಲ್ಲಿ ಈಗಾಗಲೇ 284 ಶಾಲೆಗಳಿವೆ. ರಾಜ್ಯದಲ್ಲಿಯೂ ವಿಶೇಷ ಕೌಶಲಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದರು.

ರಾಜಪ್ರಭುತ್ವ, ಆಡಳಿತ, ಕಲ್ಯಾಣ ರಾಜ್ಯ ಕಲ್ಪನೆಗಳು ನಮಗೆ ಸಿಕ್ಕಿರುವುದೇ ರಾಮಾಯಣದ ಮೂಲಕ. ತ್ರೇತಾಯುಗದಿಂದ ಇಲ್ಲಿಯವರೆಗೆ ನಾವೆಲ್ಲ ರಾಮಾಯಣ ಹಾಗೂ ವಾಲ್ಮೀಕಿಯನ್ನು ಸ್ಮರಿಸುತ್ತಿರುವುದು ಅದರ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ವಿಪ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಲ್ಲ, ಎಲ್ಲರಿಗೂ ಅವರು ಪೂಜ್ಯರು. ಅಂದಿನ ಕಾಲದಲ್ಲಿ 24 ಸಾವಿರ ಶ್ಲೋಕಗಳನ್ನು ನವಿಲುಗರಿಯಿಂದ ಬರೆದಿದ್ದು ಸಾಮಾನ್ಯ ಸಂಗತಿಯಲ್ಲ. ರಾಮಾಯಣದ ಮೂಲಕ ಪ್ರೀತಿ, ವಿಶ್ವಾಸ, ಪರಸ್ಪರ ನಂಬಿಕೆ, ಸದ್ಗುಣಗಳನ್ನು ಕಲಿಯಲು ಸಾಧ್ಯವಾಗಿದೆ ಎಂದರು. ವಾಲ್ಮೀಕಿ ಜನಾಂಗದ ಸಾಧಕರಾದ ಬಿ. ಮಾರುತಿ, ತಿಮ್ಮಣ್ಣ ಎಸ್‌. ಕ್ವಾಟಿಹಳ್ಳಿ, ಸುರೇಶಬಾಬು ತಳವಾರ, ಹನುಮಂತಪ್ಪ ಫ. ದೊಡ್ಡಮನಿ ಹಾಗೂ ಅರವಿಂದ ದೊಡ್ಡಮನಿ ಅವರನ್ನು ಸನ್ಮಾನಿಸಲಾಯಿತು. ಕುಷ್ಟಗಿಯ ಭಾರತಿ ನೀರಗೇರಿ ಉಪನ್ಯಾಸ ನೀಡಿದರು. ಡಿಸಿ ದೀಪಾ ಚೋಳನ್‌, ಎಸ್‌ಪಿ ಕಿಶೋರಬಾಬು, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಎಸಿ ಮಹ್ಮದ್‌ ಜುಬೇರ್‌, ಜಿಪಂ ಉಪಕಾರ್ಯದರ್ಶಿ ಎಸ್‌.ಜಿ. ಕೊರವರ, ಅಬಕಾರಿ ಉಪ ಆಯುಕ್ತ ಶಿವನಗೌಡ ಪಾಟೀಲ, ಪ್ರೊಬೆಷನರಿ ಐಎಎಸ್‌ ಅ ಧಿಕಾರಿ ಆಕೃತಿ ಬನ್ಸಾಲ್‌, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.