ಆಸ್ತಿ ವಿವಾದ: ಸಂಬಂಧಿಯ ಗುಂಡಿನ ದಾಳಿಗೆ ಓರ್ವ ಸಾವು, ಇಬ್ಬರು ಗಂಭೀರ
Team Udayavani, Jul 5, 2020, 11:33 AM IST
ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಮೂರು ಸುತ್ತು ಗುಂಡು ಹಾರಿಸಿದ್ದು, ಓರ್ವ ಮೃತ ಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.
ಮೃತನನ್ನ ಶಿವಯೋಗಿ ಭಾವಿಕಟ್ಟಿ (43) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಈರಣ್ಣ ಇಂಗಳ್ಳಿ ಹಾಗೂ ಸುನೀಲ ಕೋಣನ್ನವರ ಎನ್ನಲಾಗಿದೆ.
ಇಲ್ಲಿನ ಮದಿಹಾಳದಲ್ಲಿ ರಾತ್ರಿ ವೇಳೆ ಮಾತಿಗೆ ಮಾತು ಬೆಳೆದು ತನ್ನ ಅಳಿಯ ಶಿವಯೋಗಿ ಮೇಲೆ ಮಾವ ಶ್ರೀಶೈಲ ಎಂ.ಜಿ. ಅಲಿಯಾಸ್ ಡಬಲ್ ಗೋಡಾ ತನ್ನ ಪರವಾನಗಿ ಇದ್ದ ರಿವಾಲ್ವರ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.
ಶ್ರೀಶೈಲ ಮೇಲೆ ಈಗಾಗಲೇ ಕೊಲೆ ಆರೋಪ ಪ್ರಕರಣಗಳು ಇದ್ದು ರೌಡಿ ಶೀಟರ್ ತೆರೆಯಲಾಗಿದೆ. ಅತ್ಯಂತ ಜನನಿಬಿಢ ಪ್ರದೇಶವಾದ ಮದಿಹಾಳದಲ್ಲಿ ಗುಂಡಿನ ಕಾಳಗ ನಡೆದಿದ್ದರಿಂದ ಉದ್ವಿಗ್ನ ವಾತಾವರಣ ಉಂಟಾಗಿ ಜನರು ಆತಂಕದಲ್ಲಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್