117 ವರ್ಷಗಳಲ್ಲೇ ಮೊದಲ ಬಾರಿ ಮಹಿಳೆಯರ ಬಹಿರಂಗ ನಮಾಜು


Team Udayavani, Jan 26, 2020, 12:02 PM IST

HUBALLI-TDY-3

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಮುಸ್ಲಿಂ ಮಹಿಳೆಯರು ಶನಿವಾರ ಸಂಜೆ ಹಳೇ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಜ್‌) ಮಾಡಿದರು. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ ಪಿಆರ್‌ ವಿರೋಧಿ ಅಂಜುಮನ್‌ ಇಸ್ಲಾಂ ಸಂಸ್ಥೆ ಹಮ್ಮಿಕೊಂಡಿರುವ ನಿರಂತರ ಧರಣಿ ಭಾಗವಾಗಿ ಮಹಿಳೆಯರು ನಮಾಜ್‌ ಸಲ್ಲಿಸಿದರು. ಇದಕ್ಕೂ ಮೊದಲು ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಸಿಎಎ, ಎನ್‌ಆರ್‌ಸಿ ವಿರೋಧಿಸಿ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿದರು.

ರಾಷ್ಟ್ರಧ್ವಜ ಹಾಗೂ ಕಪ್ಪು ಬಲೂನ್‌ಗಳನ್ನು ಹಾರಿಬಿಟ್ಟು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಎ, ಎನ್‌ಆರ್‌ಸಿಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ. ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಈ ಕಾಯ್ದೆಗಳು ದೇಶದ ಜನರಿಗೆ ಬೇಕಾಗಿಲ್ಲ. ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ಕೇಂದ್ರ ಸರಕಾರ ತಾರತಮ್ಯ ಮಾಡುತ್ತಿದೆ. ಧರ್ಮಗಳನ್ನು ಒಡೆದು ಆಳುವ ಕುತಂತ್ರ ಮಾಡುತ್ತಿದೆ. ದಿನ ಬೆಳಗಾದರೆ ರಾಜಕಾರಣಿಗಳು ವಿಷ ಕಾರುವ ಹೇಳಿಕೆ ನೀಡುತ್ತಿದ್ದಾರೆ. ಧರ್ಮಗಳ ನಡುವೆ ಕಂದಕ ನಿರ್ಮಿಸಿ ರಾಜಕಾರಣ ಮಾಡುವುದು ಸರಿಯಲ್ಲ. ಭಾರತದ ಮಣ್ಣಲ್ಲಿ ಹುಟ್ಟಿದ್ದೇವೆ, ಇದೇ ಮಣ್ಣಿನಲ್ಲಿ ಸಾಯುತ್ತೇವೆ ಎಂದು ಘೊಷಣೆ ಕೂಗಿದರು. ಅಂಜುಮನ್‌ ಇಸ್ಲಾಂ ಸಂಸ್ಥೆ ಹಮ್ಮಿಕೊಳ್ಳುವ ಹೋರಾಟದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು, ಯುವತಿಯರು ಪಾಲ್ಗೊಳ್ಳುವ ಕುರಿತು ನಿರ್ಧರಿಸಲಾಯಿತು.

ಮುಂಬೈನಿಂದ ಆಗಮಿಸಿದ್ದ ಫಾತೀಮಾ ಆಶ್ರಫ್ ಶೇಖ್‌ ಮಾತನಾಡಿ, ಕೇವಲ ಒಂದೇ ಒಂದು ಧರ್ಮವನ್ನು ಹೊರಗಿಟ್ಟು ಕಾಯ್ದೆ ಮಾಡಿರುವುದು ಮುಸ್ಲಿಂ ವಿರೋಧಿಯಲ್ಲವೇ? ದೇಶದ ಎರಡು ಕಣ್ಣುಗಳಂತೆ ಇರುವ ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಬಾರದು. ನಿಮ್ಮ ಬಣ್ಣದ ರಾಜಕಾರಣಕ್ಕೆ ಬಲಿಯಾಗುವಷ್ಟು ದಡ್ಡರು ದೇಶದಲ್ಲಿ ಯಾರಿಲ್ಲ. ಧರ್ಮದ ಆಧಾರದ ಮೇಲೆ ಹಿಂದೆಂದೂ ಪೌರತ್ವ ನೀಡಿದ ಉದಾಹರಣೆಗಳಿಲ್ಲ. ಮಹಿಳೆಯರು ಹೋರಾಟದ ಮುಂಚೂಣಿಗೆ ಬರಬೇಕು ಎಂದು ಹೇಳಿದರು.

ಅಂಜುಮನ್‌ ಇಸ್ಲಾಂ ಸಂಸ್ಥೆ ಅಧ್ಯಕ್ಷ ಮಹ್ಮದ್‌ ಯೂಸೂಫ್‌ ಸವಣೂರು,ಅಲ್ತಾಫ್‌ ಕಿತ್ತೂರ, ಬಶೀರ್‌ ಅಹ್ಮದ, ದಾದಾಹಯತ್‌ ಖೈರಾತಿ, ಮುನಾಫ್‌ ದೇವಗಿರಿ ಇನ್ನಿತರರಿದ್ದರು.

ಮಹಿಳಾ ಪ್ರಮುಖರಾದ ಹಾಫಿಜಾ ಆಲಿಮಾ, ಸಫಿನಾ ಒಡ್ಡೋ, ಅಮ್ರಿನ್‌ ಬಾನು ಕಿಲ್ಲೇದಾರ, ಮಹಜಬೀನ್‌ ಕಮಾನಗರ್‌, ದಿಲಶಾದ್‌ ಖಾಜಿ ಆಲೀಮಾ, ಸಬೀಹಾ ಅಶ್ರಫೀ, ಆರೀಫತುನ್ನಿಸಾ ಆಸ್ಮಾ ನದಾಫ, ಸಲ್ಮಾ ಬೆಳವಣಕಿ, ತಬಸ್ಸುಮ್‌ ಸವಣೂರ, ಆರೀಫಾ ಪರವೀನ, ಫಸೀಯಾ ಜುನೂದಿ, ನಸ್ರಿನ್‌ ಕಾಲವಾಡ, ಸಲ್ಮಾ ಮಕಾನದಾರ ಇನ್ನಿತರರಿದ್ದರು.

ಇದೇ ಮೊದಲು! :  ಅಂಜುಮನ್‌ ಇಸ್ಲಾಂ ಸಂಸ್ಥೆಯ 117 ವರ್ಷದ ಇತಿಹಾಸದಲ್ಲಿ ಮಹಿಳೆಯರು ಇಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದು ಇದೇ ಮೊದಲ ಬಾರಿಯಾಗಿದೆ. ಅಸರ್‌ ಹಾಗೂ ಮಗರೀಬ್‌ ನಮಾಜ್‌ ಮಾಡಿದ್ದು, ವಿವಿಧೆಡೆಯಿಂದ ಆಗಮಿಸಿದ್ದ ಮಹಿಳಾ ಸಂಪನ್ಮೂಲ ವ್ಯಕ್ತಿಗಳು ಸಿಎಎ, ಎನ್‌ಆರ್‌ಸಿಹಾಗೂ ಎನ್‌ಪಿಆರ್‌ನಿಂದ ಆಗುವ ಸಮಸ್ಯೆಗಳ ಕುರಿತು ಭಾಷಣ ಮಾಡಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.