ಆರ್‌ಎಸ್‌ಎಸ್‌-ಜೋಶಿ ವಿರುದ್ಧ ಪ್ರತಿಭಟನೆ


Team Udayavani, Apr 30, 2019, 11:48 AM IST

hub-5

ಧಾರವಾಡ: ಸಂಸದ ಪ್ರಹ್ಲಾದ ಜೋಶಿ ಅವರು ವೀರಶೈವ ಮತ್ತು ಲಿಂಗಾಯತ ಧರ್ಮದಲ್ಲಿ ಬಿರುಕು ಮೂಡಿಸಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸೋಮವಾರ ಬೃಹತ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ನಗರದ ಕಡಪಾ ಮೈದಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಬಸವೇಶ್ವರ ವೃತ್ತ, ಅಂಜುಮನ್‌ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು.

ರ್ಯಾಲಿಯುದ್ದಕ್ಕೂ ಪ್ರತಿಭಟನಾಕಾರರು ವೀರಶೈವ ಲಿಂಗಾಯತ ಧರ್ಮದಲ್ಲಿ ಒಡಕು ಮೂಡಿಸುತ್ತಿರುವ ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಹಾಗೂ ಆರ್‌ಎಸ್‌ಎಸ್‌ ಸಂಘಟನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಗರಗ ಗ್ರಾಮದ ಸಾಮಾನ್ಯ ಮಹಿಳೆಯೊಬ್ಬಳನ್ನು ಬಳಸಿಕೊಂಡು ಆ ಮೂಲಕ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಕುರಿತು ಇಲ್ಲಸಲ್ಲದ ಆಧಾರ ರಹಿತ ಆರೋಪ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮಾತುಗಳನ್ನು ಹರಿಬಿಟ್ಟಿದ್ದಾರೆ. ಅಲ್ಲದೆ ಹೋರಾಟದ ಮುಂದಾಳತ್ವ ವಹಿಸಿದ್ದ ಪ್ರಮುಖ ನಾಯಕರಾದ ಗೃಹ ಸಚಿವ ಎಂ.ಬಿ. ಪಾಟೀಲ, ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇನ್ನಿತರ ವೀರಶೈವ-ಲಿಂಗಾಯತ ಮುಖಂಡರಿಗೆ ಅವಮಾನಕಾರಿ ಮಾತುಗಳನ್ನಾಡಿ ಅವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ ಎಂದರು.

ಶೃತಿ ಅವರು ತಮ್ಮ ಮಾತಿನಲ್ಲಿ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಇಸ್ಲಾಮಿಕ್‌ ಹಾಗೂ ಕ್ರಿಶ್ಚಿಯನ್‌ ಸಂಘಟನೆಗಳಿಂದ ಹಣ ಪಡೆದಿದ್ದಾರೆ ಎಂದು, ಗಂಭೀರ ಆಧಾರ ರಹಿತ ಆರೋಪ ಮಾಡಿದ್ದಾರೆ. ಈ ಕುರಿತು ಈಗಾಗಲೇ ಗರಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ಶೃತಿ ಬೆಳ್ಳಕ್ಕಿ ಮಾಡಿದ ಎಲ್ಲ ಆರೋಪಗಳ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಂಘಟನೆ ಹಾಗೂ ಪ್ರಹ್ಲಾದ ಜೋಶಿ ಅವರ ಪ್ರಚೋದನೆ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಬೆಳ್ಳಕ್ಕಿ ಅವರ ಮಾತುಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಕುರಿತು ಪದೇ ಪದೇ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಶಿವಶಂಕರ ಹಂಪಣ್ಣವರ, ರಮೇಶ ತಳಗೇರಿ, ಅಜ್ಜಪ್ಪ ಗುಲಾಲದವರ, ಬಸವರಾಜ ಲೋಕೂರ, ಪ್ರದೀಪ ಪಾಟೀಲ, ನಿಂಗಣ್ಣ ಕರಿಕಟ್ಟಿ, ಸುರೇಶ ಯಲಿಗಾರ, ಮಲ್ಲನಗೌಡ ಪಾಟೀಲ, ಸಿದ್ದಪ್ಪ ಸಪೂರಿ, ಶ್ರೀಶೈಲ ಭಾವಿಕಟ್ಟಿ, ಶಂಭು ಸಾಲಿಮನಿ, ಪ್ರಕಾಶ ಬಾವಿಕಟ್ಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.