ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
Team Udayavani, Oct 15, 2019, 9:59 AM IST
ಧಾರವಾಡ: ನ್ಯಾಯವಾದಿ ಯಲ್ಲಪ್ಪ ಬೆಳ್ಳಕ್ಕಿ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಹಾಗೂ ಅನುಚಿತವಾಗಿ ವರ್ತಿಸಿದ ಉಪನಗರ ಠಾಣೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಇದಕ್ಕೂ ಮುನ್ನ ಸಂಘದಲ್ಲಿ ಚರ್ಚಿಸಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಕೋರ್ಟ್ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ಕೈಗೊಂಡ ನ್ಯಾಯವಾದಿಗಳು, ಬಳಿಕ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದೂರು ದಾಖಲಿಸಲು ಹೋದಾಗ ಉಪನಗರ ಠಾಣೆ ಅಧಿಕಾರಿಗಳು ಹಲ್ಲೆ ಮಾಡಿದವರೊಂದಿಗೆ ಶಾಮೀಲಾಗಿ ರಾಜಿ ಮಾಡಿಕೊಳ್ಳಲು ಸೂಚಿಸಿದ್ದರು. ಅಲ್ಲದೆ ಪಿಎಸ್ಐ ಶರಣಬಸವ ನಾಡಗೌಡ ಎಂಬುವರು ವಕೀಲರೊಂದಿಗೆ ಅನುಚಿತವಾಗಿ ವರ್ತಿಸಿ ಅವಮಾನಿಸಿದ್ದಾರೆ. ಇಂತಹ ಪೊಲೀಸ್ ಅಧಿಕಾರಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಡಿಸಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಬಿ.ಎಸ್. ಗೋಡಸೆ, ಉಪಾಧ್ಯಕ್ಷ ರಾಜು ಕೋಟಿ, ಎನ್.ಆರ್. ಮಟ್ಟಿ, ಆಶೀಷ ಮಗದುಮ್ಮ, ಆರ್.ಯು. ಬೆಳ್ಳಕ್ಕಿ, ಪ್ರಕಾಶ ಭಾವಿಕಟ್ಟಿ, ರೂಪಾ ಕೆಂಗಾನೂರ, ಪ್ರಕಾಶ ಉಡಿಕೇರಿ, ಕೆ.ಎಚ್. ಪಾಟೀಲ, ಗಾಯಾಳು ಯಲ್ಲಪ್ಪ ಬೆಳಕ್ಕಿ ಹಾಗೂ ಸಂಘದ ಸದಸ್ಯ ವಕೀಲರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು