ಹೊಲದ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Sep 14, 2019, 10:26 AM IST
ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಧಾರವಾಡ: ಮಳೆಯಿಂದ ಹಾಳಾಗಿರುವ ಹೊಲಕ್ಕೆ ಹೋಗುವ ರಸ್ತೆ ನಿರ್ಮಾಣ, ಹೊಲ ಹಾಗೂ ಬೆಳೆಗಳ ಬಗ್ಗೆ ತುರ್ತಾಗಿ ಸಮೀಕ್ಷೆ ಕೈಗೊಂಡು ಪರಿಹಾರ ನೀಡುವಂತೆ ಆಗ್ರಹಿಸಿ ತಾಲೂಕಿನ ಯಾದವಾಡ, ಲಕಮಾಪುರ, ಪುಡಕಲಕಟ್ಟಿ ಗ್ರಾಮಸ್ಥರು ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಪ್ರವಾಹ ಉಂಟಾಗಿ ಹಳ್ಳಗಳು ತುಂಬಿ ಹರಿದ ಪರಿಣಾಮ ಹಳ್ಳದ ಎರಡು ಬದಿಯ ಜಮೀನುಗಳು, ಬೆಳೆಗಳು ಹಾಗೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಆದರೆ, ಅಧಿಕಾರಿಗಳು ಮಾತ್ರ ಇದುವರೆಗೂ ಸರಿಯಾದ ಪರಿಹಾರ ನೀಡುವುದಾಗಲಿ, ಹಾನಿಯ ಸಮೀಕ್ಷೆಯನ್ನಾಗಲಿ ಮಾಡಿಲ್ಲ. ಹಾನಿಯಾದ ಹೊಲಗಳು, ರಸ್ತೆಗಳು ಹಾಗೂ ಬೆಳೆಗಳ ಸಮೀಕ್ಷೆ ಮಾಡುವ ಮೂಲಕ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈಗ ಅಲ್ಪಸ್ವಲ್ಪ ಇರುವ ಭೂಮಿಯಲ್ಲಿಯೇ ಕೃಷಿ ಮಾಡಿಕೊಂಡು ಜೀವನ ನಡೆಸುವ ರೈತರ ಹೊಲಗಳಲ್ಲಿ ಕಲ್ಲು, ಮರಳು, ಕಂದಕಗಳು ನಿರ್ಮಾಣವಾಗುವುದರ ಜೊತೆಗೆ ಜಲಾವೃತವಾಗಿವೆ. ಆದರೆ ಜಿಲ್ಲಾಡಳಿತ ಯಾವುದೇ ಸಮೀಕ್ಷೆ, ಸ್ಥಳಪರಿಶೀಲನೆ ಹಾಗೂ ಪರಿಹಾರ ಕಾರ್ಯ ಕೈಗೊಂಡಿಲ್ಲ. ಜಿಲ್ಲಾಡಳಿತ ಕೂಡಲೇ ಗ್ರಾಮದ ಜಮೀನುಗಳ ಸಮೀಕ್ಷೆ ನಡೆಸಿ, ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿದರು.
ನಾಗಪ್ಪ ಬೆಳ್ಳಿಗಟ್ಟಿ, ಮಡಿವಾಳಪ್ಪಾ ದಿಂಡಲಕೊಪ್ಪ ಸೇರಿದಂತೆ ಯಾದವಾಡ, ಲಕಮಾಪುರ, ಪುಡಕಲಕಟ್ಟಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!