ನೇರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ
• ಹೊರಗುತ್ತಿಗೆ ಪೌರಕಾರ್ಮಿಕರಿಂದ ತಹಶೀಲ್ದಾರ್-ಪಾಲಿಕೆ ಆಯುಕ್ತರಿಗೆ ಮನವಿ
Team Udayavani, Jul 23, 2019, 2:57 PM IST
ಹುಬ್ಬಳ್ಳಿ: ನೇರ ನೇಮಕಕ್ಕೆ ಆಗ್ರಹಿಸಿ ಪೌರಕಾರ್ಮಿಕರು ಪಾಲಿಕೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಸುಮಾರು 1800 ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಅರ್ಹತೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರ ಸಂಘದವರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರಧಾನ ಅಂಚೆ ಕಚೇರಿ ಎದುರಿನ ಡಾ| ಅಂಬೇಡ್ಕರ ಪ್ರತಿಮೆ ಆವರಣದಿಂದ ಪೌರಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ಗೆ, ನಂತರ ಪಾಲಿಕೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಪಾಲಿಕೆಯಲ್ಲಿ 15-20 ವರ್ಷಗಳಿಂದ ಹೊರಗುತ್ತಿಗೆ ಪೌರಕಾರ್ಮಿಕರಾಗಿ ಸುಮಾರು 1800 ಜನರು ಕೆಲಸ ಮಾಡುತ್ತ ಬಂದಿದ್ದಾರೆ. ಪಾಲಿಕೆ ಈಗ ನೇರ ವೇತನಕ್ಕೆ ಅಳವಡಿಸಿದ್ದು, ಅವರಲ್ಲಿ ಕೇವಲ 762 ಜನರನ್ನು ನೇರ ನೇಮಕಕ್ಕೆ ಅರ್ಹರೆಂದು ಅಳವಡಿಸಲಾಗಿದೆ. ಇದರಿಂದ ಇನ್ನುಳಿದ 1038 ಪೌರಕಾರ್ಮಿಕರಿಗೆ ಅನ್ಯಾಯವಾಗಿದ್ದು, ಪರಸ್ಪರರು ಕಿತ್ತಾಡಿಕೊಳ್ಳುವಂತಾಗಿದೆ. ಆಯ್ಕೆ ಪ್ರಕ್ರಿಯೆ ದೋಷಪೂರಿತವಾಗಿದೆ. ಎಲ್ಲ ಪೌರಕಾರ್ಮಿಕರು ಅರ್ಹತೆ ಹೊಂದಿದ್ದರೂ ಅವರನ್ನು ಕೈಬಿಡಲಾಗಿದೆ. ಕೂಡಲೇ ಸರಕಾರ ಹಾಗೂ ಸಂಬಂಧಿಸಿದ ಸಚಿವರು, ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಿ ಎಲ್ಲ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. 15 ದಿನದೊಳಗೆ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಹೇಳಿದರು.
ಮುಖಂಡರಾದ ನಿಂಗಪ್ಪ ಮೊರಬದ, ಬಸಪ್ಪ ಮಾದರ, ಗಂಗಾಧರ ಟಗರಗುಂಟಿ, ಭೀಮಪ್ಪ ಕೆಂಪಣ್ಣವರ, ವೆಂಕಟೇಶ ಟಗರಗುಂಟಿ, ದುರ್ಗಪ್ಪ ವೀರಾಪುರ, ಹೊನ್ನಪ್ಪ ದೇವಗಿರಿ, ರಮೇಶ ರಾಮಯ್ಯನವರ, ಮುತ್ತರಾಜ ಕೆಲೂರ, ಸೋಮು ಮೊರಬದ, ಪರಶುರಾಮ ಕಿನಕೇರಿ, ಚಂದ್ರು ಖಾನಾಪುರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ
ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು
ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ