ನೆರೆ ಹಾನಿ ಪರಿಹಾರ ವಿತರಣೆಗೆ ಒತ್ತಾಯಿಸಿ ಪ್ರತಿಭಟನೆ
ಭಾರೀ ಮಳೆಯಿಂದ ಹಳೇಹುಬ್ಬಳ್ಳಿ ಮೇದಾರ ಓಣಿ ಜನರ ಬಾಳು ಗೋಳು ಸಂಕಷ್ಟ ಕೇಳಲು ಯಾರು ಬಂದೇ ಇಲ್ಲ ಎಂಬ ಅಳಲು
Team Udayavani, Aug 23, 2019, 10:00 AM IST
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿ ಮಳೆಯಿಂದ ಹಾನಿಯಾಗಿರುವ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಜಲಾವೃತಗೊಂಡಿದ್ದ ಪ್ರದೇಶದ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮೇದಾರ ಓಣಿ ನಾಗರಿಕರ ಹೋರಾಟ ಸಮಿತಿ ಹಾಗೂ ಎಸ್ಯುಸಿಐ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಮಳೆಗೆ ಹಳೇಹುಬ್ಬಳ್ಳಿ ಮೇದಾರ ಓಣಿಯ ಪಕ್ಕದಲ್ಲಿರುವ ದೊಡ್ಡ ನಾಲಾ ತುಂಬಿ ಹರಿದು ಅಕ್ಕಪಕ್ಕದಲ್ಲಿದ್ದ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ ಇದುವರೆಗೂ ಯಾರೊಬ್ಬರು ತಮ್ಮ ನೋವು ಕೇಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೇದಾರ ಓಣಿಯಲ್ಲಿ ಬಡಜನರು ವಾಸಿಸುತ್ತಿದ್ದು, ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಾ ತಮ್ಮ ಜೀವನ ನಡೆಸುತ್ತಿದ್ದಾರೆ. ಮಳೆಯಿಂದ ಅಪಾರ ಹಾನಿ ಸಂಭವಿಸಿದ್ದು, ಕೂಡಲೇ ನಾಲಾದ ತಡೆಗೋಡೆ ಎತ್ತರಿಸಿ ನೀರು ಬರದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಹಾನಿಯಾದ ಮನೆ-ಅಂಗಡಿಗಳಿಗೆ ಪರಿಹಾರ ಧನ ವಿತರಣೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಾಸಕ ಪ್ರಸಾದ ಅಬ್ಬಯ್ಯ, ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಹಾಗೂ ತಹಶೀಲ್ದಾರ್ ಶಶಿಧರ ಮಾಡ್ಯಾಳಗೆ ಮನವಿ ಸಲ್ಲಿಸಿದರು. ಗಂಗಾಧರ ಬಡಿಗೇರ, ನೂರಅಹ್ಮದ್, ಪಾರ್ವತಿ, ಹುಸೇನಬಿ, ಫೈರೋಜ ಮದ್ದೀನ್, ಹುಸೇನಸಾಬ್ ಮೊಮಿನ್, ಅಬ್ದುಲ್ರೆಹಮಾನ್ ಸೌದಾಗರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್