ವಾಯುವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ:ಹುಬ್ಬಳ್ಳಿ ಕಚೇರಿಯೆದುರು ಪ್ರತಿಭಟನೆ
Team Udayavani, Jun 7, 2021, 12:54 PM IST
ಹುಬ್ಬಳ್ಳಿ: ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಜಾ, ಅಮಾನತ್ತು ಹಾಗೂ ವರ್ಗಾವಣೆ ಮಾಡಿದ ಆದೇಶಗಳನ್ನು ರದ್ದುಗೊಳಿಸಲು ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಸ್.ಆರ್.ಟಿ.ಸಿ ನೌಕರರ ಕೂಟದಿಂದ ಇಲ್ಲಿನ ಕೇಂದ್ರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ:ಶೀಘ್ರದಲ್ಲೇ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ: ಕೇಂದ್ರ ಸರ್ಕಾರ
ಮುಷ್ಕರ ಸಮಯದಲ್ಲಿ ಕೈಗೊಂಡಿದ್ದ ಶಿಸ್ತು ಕ್ರಮಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆ. ಈಗಾಗಲೇ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿಯಲ್ಲಿ ಆದೇಶ ಸಂಪೂರ್ಣ ಪಾಲನೆ ಮಾಡಿದ್ದಾರೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಕಾರ್ಮಿಕರಿಗೆ ಕಿರುಕುಳ ನೀಡುವ ಉದ್ದೇಶದಿಂದ ಆದೇಶ ಪಾಲನೆ ಮಾಡುತ್ತಿಲ್ಲ. ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡುವಂತೆ ಅನುದಾನ ನೀಡಿದರೂ ಇಲ್ಲಿನ ಅಧಿಕಾರಿಗಳು ವೇತನ ಪಾವತಿ ಮಾಡುತ್ತಿಲ್ಲ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ