ಕಾಂಕ್ರೀಟ್ ರಸ್ತೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
•ತ್ವರಿತವಾಗಿ ರಸ್ತೆ ಕಾಮಗಾರಿ ಮುಗಿಸಲು ಆಗ್ರಹ•ಹೆದ್ದಾರಿ ಪ್ರಾಧಿಕಾರದ ಅಭಿಯಂತಗೆ ಘೇರಾವ್
Team Udayavani, Aug 28, 2019, 9:32 AM IST
ಧಾರವಾಡ: ನಗರದ ಗಾಂಧೀಚೌಕ ಬಳಿ ರಸ್ತೆ ತಡೆದು ನಿವಾಸಿಗಳು ಪ್ರತಿಭಟನೆ ನಡೆಸಿದರು.
ಧಾರವಾಡ: ಕಾಂಕ್ರೀಟ್ ರಸ್ತೆಗಳಿಗೆ ಪುಟ್ಪಾತ್ ನಿರ್ಮಾಣ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗಾಂಧೀಚೌಕ ನಿವಾಸಿಗಳು ಮಂಗಳವಾರ ರಸ್ತೆ ತಡೆ ಕೈಗೊಂಡು ಪ್ರತಿಭಟನೆ ನಡೆಸಿದರು.
ಗಾಂಧಿಚೌಕ್, ಕೆಸಿಸಿ ಬ್ಯಾಂಕ್ ವೃತ್ತ, ಬಾಗಲಕೋಟ ಪೆಟ್ರೋಲ್ ಪಂಪ್ ಮಾರ್ಗಗಳು ಇಂದಿಗೂ ಸುಧಾರಣೆಯಾಗಿಲ್ಲ. ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡುತ್ತಿದ್ದರೂ ಈವರೆಗೆ ಅದು ಪೂರ್ಣಗೊಂಡಿಲ್ಲ. ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಯವರಿಗೆ ರಸ್ತೆ ಪೂರ್ಣಗೊಳಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶೀಘ್ರದಲ್ಲಿಯೇ ರಸ್ತೆಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸರಿಪಡಿಸುವವರೆಗೆ ಪ್ರತಿಭಟನೆ ನಿಲ್ಲದು ಎಂದು ಪಟ್ಟು ಹಿಡಿದು ರಸ್ತೆಯಲ್ಲಿ ಕುಳಿತರು.
ರಸ್ತೆ ಒಂದು ಅಡಿಗಿಂತ ಎತ್ತರದಲ್ಲಿದ್ದು, ರಸ್ತೆಯ ಅಕ್ಕಪಕ್ಕದಲ್ಲಿ ಫುಟ್ಪಾತ್ ನಿರ್ಮಾಣ ಮಾಡಿಲ್ಲ. ವಾಹನ ಸವಾರರಿಗೆ ಮಾತ್ರವಲ್ಲದೇ ಪಾದಚಾರಿಗಳಿಗೂ ಇದರಿಂದ ಸಾಕಷ್ಟು ತೊಂದರೆಯಾಗಿದೆ. ಮೊದಲು ಫುಟ್ಪಾತ್ ನಿರ್ಮಾಣ ಮಾಡಬೇಕು. ನಂತರ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಸಂಚಾರಿ ಠಾಣೆ ಪೊಲೀಸರ ಮಾತಿಗೂ ಪ್ರತಿಭಟನಾಕಾರರು ಮಣಿಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರೇ ಆಗಮಿಸಿದರು. ಈ ವೇಳೆ ಅವರಿಗೆ ಘೇರಾವ್ ಹಾಕಿದ ಪ್ರತಿಭಟನಾಕಾರರಿಗೆ ಒಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಬಸವರಾಜ ಜಾಧವ ಸೇರಿದಂತೆ ನೂರಾರು ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!