ಚಹಾ ವಿತರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ


Team Udayavani, Jan 6, 2020, 11:43 AM IST

huballi-tdy-03

ಹುಬ್ಬಳ್ಳಿ: ಕೇಂದ್ರ ಸರಕಾರ ಅಡುಗೆ ಅನಿಲ ದರ ಏರಿಕೆ ಸೇರಿದಂತೆ ವಿವಿಧ ಜನವಿರೋಧಿ ನೀತಿಗಳನ್ನು ವಿರೋಧಿಸಿ ಎಐಸಿಸಿ ಸದಸ್ಯ ಶಾಕೀರ ಸನದಿ ನೇತೃತ್ವದಲ್ಲಿ ಸೆಗಣಿಯ ಬೆರಣಿ (ಕುಳ್ಳು) ಉರಿಸಿ ಚಹಾ ತಯಾರಿಸಿ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ವಿತರಿಸಿ ಪ್ರತಿಭಟನೆ ಮಾಡಲಾಯಿತು.

ರಾಯಣ್ಣ ವೃತ್ತದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹಲವು ವೈಫ‌ಲ್ಯಗಳು ಹಾಗೂ ದರ ಏರಿಕೆ ಬಗೆಗಿನ ಜನರ ಆಕ್ರೋಶವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರಕಾರ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಜಾರಿಗೆ ಮುಂದಾಗಿದೆ. ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಹಣ ಲೂಟಿ ಮಾಡುತ್ತಿದೆ. ಜೊತೆಗೆ ಉಳ್ಳಾಗಡ್ಡಿ ಇನ್ನಿತರ ಆಹಾರಧಾನ್ಯಗಳ ಬೆಲೆ ಏರಿಕೆಯಾಗಿದೆ ಎಂದು ದೂರಿದರು.

ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಕೇಂದ್ರ ಸರಕಾರ 3.5 ಕೋಟಿ ಬಡವರಿಗೆ ಅಡುಗೆ ಅನಿಲ ನೀಡಿದ್ದೇವೆ ಎಂದು ಹೇಳುತ್ತಿದೆ. ಆದರೆ ಅಡುಗೆ ಅನಿಲ ಸಿಲಿಂಡರ್‌ ಬೆಲೆ 350ರಿಂದ 735 ರೂ.ಗೆ ಹೆಚ್ಚಿಸಲಾಗಿದೆ. ಬಿಜೆಪಿ ಅಚ್ಛೇ ದಿನ್‌ ಆಯೇಗಾ ಎಂದು ಸುಳ್ಳು ಹೇಳುತ್ತಲೇ ದಿನಬಳಕೆ ವಸ್ತುಗಳ ಬೆಲೆ ಏರಿಸುತ್ತಿದೆ. ಇದರಿಂದ ಸಣ್ಣ ವ್ಯಾಪಾರಿಗಳು, ಬಡವರಿಗೆ ತುಂಬಾ ತೊಂದರೆ ಆಗುತ್ತಿದೆ. ಕೇಂದ್ರ ಸರಕಾರ ಕೂಡಲೇ ಅಡುಗೆ ಅನಿಲ ದರ ಕಡಿತಗೊಳಿಸಬೇಕೆಂದು ಆಗ್ರಹಿಸಿದರು. ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಕೇಂದ್ರ ಸರಕಾರ ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುತ್ತಲೇ ಅಡುಗೆ ಅನಿಲ ದರ ಏರಿಸುವ ಮೂಲಕ ಮತ್ತೆ ಬಡ ಮಹಿಳೆಯರು ಹಳೆಯ ಪದ್ಧತಿಯಂತೆ ಕಟ್ಟಿಗೆ, ಸೆಗಣಿ ಬೆರಣಿಯಿಂದ ಅಡುಗೆ ಮಾಡುವಂತಹ ಪರಿಸ್ಥಿತಿ ತಂದಿದ್ದಾರೆ. ಕೇಂದ್ರದ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಪಕ್ಷವು ಪ್ರತಿ ವಾರ್ಡ್‌, ಓಣಿಗೆ ತೆರಳಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.

ಅನ್ವರ ಮುಧೋಳ, ಶಫಿ ಮುದ್ದೇಬಿಹಾಳ, ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ, ಸಿದ್ದು ತೇಜಿ, ಇಲಿಯಾಸ್‌ ಮನಿಯಾರ, ಅಷ್ಪಾಕ ಗುಳೇದಗುಡ್ಡ, ನಜೀರ ಹೊನ್ನಿಹಾಳ, ದಾದಾಪೀರ ಕಾಲ್ಗೆ, ಅನ್ವರ ಧಾರವಾಡ, ಮೈನು ನಾಲಬಂದ, ಶರೀಫ ನದಾಫ ಇನ್ನಿತರರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.