ಭೂ ಸುಧಾರಣೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ
Team Udayavani, Jun 14, 2020, 12:54 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ರಾಜ್ಯ ಸರಕಾರ ರಾಜ್ಯದ ಕೃಷಿ ಜಮೀನುಗಳನ್ನು ಯಾರು ಬೇಕಾದರೂ ಹೊಂದಲು ಅವಕಾಶ ನೀಡುವ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ಜೂ.16ರಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐಎಂ ಧಾರವಾಡ ಜಿಲ್ಲಾ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದು ರಾಜ್ಯವನ್ನು ಅಧೋಗತಿ ತಳ್ಳುವ ಮತ್ತು ಕಾರ್ಪೊರೇಟ್ ಕಂಪನಿಗಳ ವಶ ಮಾಡುವ ಗುಲಾಮಿತನದ ಹಾಗೂ ಶತಮೂರ್ಖತನದ ಪ್ರತೀಕವಾಗಿದೆ. ಇದು ವ್ಯವಸಾಯದಲ್ಲಿ ತೊಡಗಿರುವ ಎಲ್ಲ ರೈತರು ಹಾಗೂ ಗೇಣಿದಾರರು, ಕೃಷಿ ಕೂಲಿಕಾರರು, ಕಾರ್ಮಿಕರು, ಕಸುಬುದಾರರು, ಅವರನ್ನು ಆಧರಿಸಿದ ಸಣ್ಣ ವ್ಯಾಪಾರಿಗಳು, ಕೃಷಿ ವ್ಯಾಪಾರಿಗಳು, ಒಟ್ಟಾರೇ ಗ್ರಾಮೀಣ ಪ್ರದೇಶವನ್ನೇ ಮಸಣ ಮಾಡುವ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡುವ, ಕಾರ್ಪೊರೇಟ್ ಕಂಪನಿಗಳಿಗೆ ಜಮೀನುಗಳನ್ನು ನೇರವಾಗಿ ಒದಗಿಸುವ ಹಾಗೂ ಆ ಮೂಲಕ ರಾಜ್ಯವನ್ನು ತೀವ್ರ ಸಂಕಟಕ್ಕೀಡು ಮಾಡುವ ದುಷ್ಕೃತ್ಯವಾಗಿದೆ. ಇದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊàರೇಟ್ ಕಂಪನಿಗಳ ಸೇವೆಯನ್ನು ಪೈಪೋಟಿಯಲ್ಲಿ ಕೈಗೊಳ್ಳುತ್ತಿರುವುದನ್ನು ಬಹಿರಂಗ ಪಡಿಸುತ್ತಿದೆ. ಇದನ್ನು ಖಂಡಿಸಿ ಸಿಪಿಐಎಂ ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?