ಹುಬ್ಬಳ್ಳಿ – ಲಕ್ಷ್ಮೇಶ್ವರ ಹೆದ್ದಾರಿ ತಡೆದು ಪ್ರತಿಭಟನೆ


Team Udayavani, Dec 29, 2019, 10:36 AM IST

huballi-tdy-3

ಕುಂದಗೋಳ: ಜನರ ತೆರಿಗೆ ಹಣದಲ್ಲಿ ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆಯನ್ನು 10 ವರ್ಷಗಳ ಹಿಂದೆಯೇ ನಿರ್ಮಿಸಲಾಗಿದ್ದು, ಇದೀಗ ಟೋಲ್‌ ನಿರ್ಮಿಸುವ ಮೂಲಕ ಜನರ ಕಿಸೆಗೆ ಕತ್ತರಿ ಹಾಕಲು ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಕಿವಿ ಹಿಂಡಿ ಬುದ್ಧಿ ಕಲಿಸಬೇಕೆಂದು ಕಾಂಗ್ರೆಸ್‌ ಮುಖಂಡ ಮುತ್ತಣ್ಣ ಶಿವಳ್ಳಿ ಹೇಳಿದರು.

ಹುಬ್ಬಳ್ಳಿ-ಲಕ್ಷ್ಮೇಶ್ವರ ಹೆದ್ದಾರಿಗೆ ಶರೇವಾಡ ಬಳಿ ಟೋಲ್‌ಗೇಟ್‌ ನಿರ್ಮಿಸಿದ್ದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷದಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಸರ್ಕಾರವಿರುವ ಬಿಜೆಪಿಯವರಿಗೆ ಮದ ಏರಿದ್ದು, ಪದೇ ಪದೇ ಜನಸಾಮಾನ್ಯರ ದುಡಿದ ಹಣವನ್ನು ಲೂಟಿ ಹೊಡೆಯಲು ಮುಂದಾಗುತ್ತಿದ್ದಾರೆ. ಈ ಮೊದಲು ಜಿಎಸ್‌ಟಿ ಜಾರಿಗೆಗೊಳಿಸಿ ಜನಸಾಮಾನ್ಯರಿಗೆ ಬದುಕಲು ಆಗದಂತೆ ಮಾಡಿದ್ದಾರೆ. 10 ವರ್ಷದ ಹಿಂದೆ ನಮ್ಮ ತೆರಿಗೆ ಹಣದಿಂದ ನಿರ್ಮಿಸಿದ ರಸ್ತೆಗೆ ಇದೀಗ ಟೋಲ್‌ ನಿರ್ಮಿಸುವ ಮೂಲಕ ರೈತರು ಹಾಗೂ ಜನಸಾಮಾನ್ಯರ ಹಣವನ್ನು ಲೂಟಿ ಹೊಡೆಯಲು ನಾವು ಬಿಡುವುದಿಲ್ಲ. ಇದು ಪ್ರಜಾಭುತ್ವವೋ ಅಥವಾ ಬ್ರಿಟಿಷರ ಆಡಳಿತವೋ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

ಮುಖಂಡರಾದ ಅಡಿವೆಪ್ಪ ಶಿವಳ್ಳಿ, ದಯಾನಂದ ಕುಂದೂರ, ವಿಜಯಕುಮಾರ ಹಾಲಿ, ರಾಜು ದೊಡ್ಡಶಂಕರ ಮಾತನಾಡಿ, ಗಬ್ಬೂರ ಬಳಿಯಲ್ಲೊಂದು ಟೋಲ್‌ ನಿರ್ಮಿಸಲಾಗಿದೆ. 15 ಕಿಮೀ ಅಂತರದಲ್ಲಿಯೇ ಮತ್ತೂಂದು ಟೋಲ್‌ ನಿರ್ಮಿಸುತ್ತಿರುವುದು ಸರ್ಕಾರದ ನಿಯಮಾವಳಿಯನ್ನೇ ಗಾಳಿಗೆ ತೂರಿದಂತಾಗಿದೆ. ಜನರ ದುಡ್ಡು ಹೊಡೆಯಲು ದೊಡ್ಡ ಸಂಚನ್ನೇ ರೂಪಿಸಿದ್ದಾರೆ. ಈ ಕೂಡಲೇ ಬಂದ್‌ ಮಾಡದಿದ್ದರೆ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೆಳಗ್ಗೆ 11 ಗಂಟೆಯಿಂದ ಸುಮಾರು 4 ತಾಸು ಕಾಲ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಲಾಯಿತು. ಟೋಲ್‌ಗೇಟ್‌ ನಿರ್ಮಾಣ ಕಾರ್ಯ ನಿಲ್ಲಿಸುವುದಾಗಿ ಲಿಖೀತ ಪತ್ರ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ಅಧಿಕಾರಿ ವರ್ಗದವರು ಮನವಿ ಮಾಡಿಕೊಂಡರು ಸಹ ಜಿಲ್ಲಾಧಿಕಾರಿ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಹಠ ಹಿಡಿದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಹಾಗೂ ತಹಶೀಲ್ದಾರ್‌ ಬಸವರಾಜ ಮೇಳವಂಕಿ, ಹುಬ್ಬಳ್ಳಿ ತಹಶೀಲ್ದಾರ್‌ ಪ್ರಕಾಶ ನಾಸಿ, ಡಿವೈಎಸ್‌ಪಿ ರವಿ ನಾಯಕ ಪ್ರತಿಭಟನಾಕಾರರೊಂದಿಗೆ ಸಮಾಲೋಚಿಸಿ, ಕುಂದಗೋಳದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು. ಸಭೆ ಆಗುವವರೆಗೆ ಇಲ್ಲಿ ಯಾವುದೇ ಕಾಮಗಾರಿ ಆಗಬಾರದು, ಅಲ್ಲಿವರೆಗೆ ಸ್ಥಗಿತಗೊಳಿಸಬೇಕೆಂದು ಎಚ್ಚರಿಸಿದರು.

ವಿ.ಡಿ. ಹಿರೇಗೌಡ್ರ, ಜಿ.ಡಿ. ಘೋರ್ಪಡೆ, ರಾಮಣ್ಣ ಪೂಜಾರ, ಸಕ್ರು ಲಮಾಣಿ, ಅಪ್ಪಣ್ಣ ಹಿರೇಗೌಡ್ರ, ಎಂ.ಎಂ. ಕಿಲ್ಲೇದಾರ, ಕಲ್ಲಪ್ಪ ಹರಕುಣಿ, ಗಿರೀಶ ಮುದಿಗೌಡ್ರ, ಬಾಬಾಜಾನ ಮುಲ್ಲಾ, ಸಲೀಂ ಕ್ಯಾಲಕೊಂಡ, ಶಂಕರಗೌಡ ದೊಡಮನಿ, ಗುರು ಚಲವಾದಿ, ಹನಮಂತಪ್ಪ ಕಂಬಳಿ ಬಸವರಾಜ ತಳವಾರ, ಸಲೀಂ ಕಡ್ಲಿ, ಮೊದಲಾದವರಿದ್ದರು.

ಪ್ರತಿಭಟನೆಯಿಂದಾಗಿ ಸುಮಾರು 4 ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಲಕ್ಷ್ಮೇಶ್ವರ ಕಡೆಗೆ ತೆರಳುವ ವಾಹನಗಳು ಶರೇವಾಡ ಬೆಟದೂರ ಕುಂದಗೋಳ ಮಾರ್ಗವಾಗಿ ಚಲಿಸಿದವು ಹಾಗೂ ಗುಡೇನಕಟ್ಟಿ ಮಾರ್ಗವಾಗಿ ಯರಗುಪ್ಪಿ, ಚಿಕ್ಕನರ್ತಿ, ಹಿರೇನರ್ತಿ ಕಡೆಗೆ ಬಸ್ಸುಗಳು ಸುತ್ತುವರೆದು ಚಲಿಸುವಂತಾಗಿತ್ತು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.