ಪಾರ್ಸಲ್ಗೆ ಅವಕಾಶ; ಸಮಯಮಿತಿ ವಿಪರ್ಯಾಸ
ಹೋಟೆಲ್ಗಳಿಗೆ ಇಬ್ಬಂದಿ, ಎರಡೇ ತಾಸಲ್ಲಿ ನಿರ್ವಹಣೆ ಸವಾಲು, ಸಡಿಲಿಕೆ ಯಾರಿಗೆ? ಯಾವುದಕ್ಕೆ?
Team Udayavani, Jun 2, 2021, 5:10 PM IST
ವರದಿ:ಬಸವರಾಜ ಹೂಗಾರ
ಹುಬ್ಬಳ್ಳಿ: ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿರುವ ಜಿಲ್ಲಾಧಿಕಾರಿಗಳ ಆದೇಶ ಹಲವರಲ್ಲಿ ಗೊಂದಲವನ್ನುಂಟು ಮಾಡಿಕೊಟ್ಟಿದೆ.
ಜಿಲ್ಲೆಯಲ್ಲಿ ಕಠಿಣ ಕರ್ಫ್ಯೂ ಜಾರಿ ಸಂದರ್ಭದಲ್ಲಿ ತರಕಾರಿ, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ-ಮಾರಾಟಕ್ಕೆ ಕೆಲಹೊತ್ತಿನ ಸಡಿಲಿಕೆ ಹೊರತುಪಡಿಸಿ ಇನ್ನೆಲ್ಲವಕ್ಕೂ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳ ನಂತರ ಜನಪ್ರತಿನಿಧಿ ಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಒತ್ತಡ ಹೆಚ್ಚಾದಂತೆ ಜೂ.1ರಿಂದ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಈ ಸಡಿಲಿಕೆ ಯಾರಿಗೆ? ಯಾವುದಕ್ಕೆ? ಎಂಬುದು ತಿಳಿಯದಂತಾಗಿದೆ.
ಜೂ. 1ರಿಂದ ಹೋಟೆಲ್ ಪಾರ್ಸಲ್ಗೆ ಅನುವು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬಹುತೇಕ ಹೋಟೆಲ್ಗಳು ಮಂಗಳವಾರ ಕಾರ್ಯನಿರ್ವಹಿಸದಿರುವುದು ಕಂಡುಬಂದಿತು. ಆದೇಶದ ಪ್ರಕಾರ ಬೆಳಗ್ಗೆ 6ರಿಂದ 8 ಗಂಟೆವರೆಗೆ ಹೋಟೆಲ್ಗಳು ಪಾರ್ಸಲ್ ನೀಡಬಹುದು. ನಂತರ ಸಂಜೆ 4 ಗಂಟೆವರೆಗೆ ಮನೆಗಳಿಗೆ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಎರಡು ತಾಸುಗಳಲ್ಲಿ ತಿಂಡಿ-ತಿನಿಸು ತಯಾರಿಸಿ ಪಾರ್ಸಲ್ ನೀಡುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಹಲವು ಹೋಟೆಲ್ ಮಾಲೀಕರದ್ದಾಗಿದೆ.
ಮನೆಗಳಿಗೆ ತಿಂಡಿ-ತಿನಿಸು ಪೂರೈಕೆ ಅವಕಾಶ ಎರಡು ಪ್ರತಿಷ್ಟಿತ ಸಂಸ್ಥೆಗಳಿಗೆ ನೀಡಲಾಗಿದೆ. ವಿಪರ್ಯಾಸವೆಂದರೆ ಈ ಎರಡು ಕಂಪನಿಗಳಿಗೆ ಹುಬ್ಬಳ್ಳಿಯಲ್ಲಿನ ಬೆರಳೆಣಿಕೆಯಷ್ಟು ಹೋಟೆಲ್ಗಳು ನೋಂದಾಯಿತಗೊಂಡಿವೆ. ಇನ್ನುಳಿದ ಯಾವುದೇ ಹೋಟೆಲ್ಗಳಿಗೆ ಇದರಿಂದ ಪ್ರಯೋಜನವಿಲ್ಲ. ಒಂದೆಡೆ ಜನಪ್ರತಿನಿ ಧಿಗಳು ಹಾಗೂ ಜಿಲ್ಲಾಡಳಿತ ಹೋಟೆಲ್ ಉದ್ಯಮಕ್ಕೆ ನೆರವಾಗಲು ಆದೇಶ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದರೆ, ಕೇವಲ ಎರಡು ಗಂಟೆಗಳ ಕಾಲ ಪಾರ್ಸಲ್ಗೆ ಅನುವು ಮಾಡಿ, ಸಂಜೆ 4 ಗಂಟೆ ನಂತರ ಮನೆಗಳಿಗೆ ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಹೋಟೆಲ್ ಉದ್ಯಮಿಗಳಿಗೆ ತಲೆಕೆಡಿಸಿಕೊಳ್ಳುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್