ಶುದ್ಧ-ಸ್ಪಷ್ಟ ಕನ್ನಡ ಉಳಿಸಿ-ಬೆಳೆಸಬೇಕಿದೆ; ಮಹೇಶ ಜೋಶಿ
ಕನ್ನಡ ಭಾಷೆಗಳು ಮಾತ್ರ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ.
Team Udayavani, Dec 9, 2021, 5:48 PM IST
ಧಾರವಾಡ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುದ್ಧ ಕನ್ನಡ ಭಾಷೆ ಮಾಡುವವರ ಸಂಖ್ಯೆ ಶೇ.26 ಮಾತ್ರ ಇದ್ದು, ಅದರಲ್ಲೂ ಅ ಕಾರ ಮತ್ತು ಹ ಕಾರ ವ್ಯತ್ಯಾಸ ತಿಳಿದ ಕನ್ನಡಿಗರು ತುಂಬಾ ಕಡಿಮೆಯೇ ಇದ್ದಾರೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅಭಿಪ್ರಾಯ ಪಟ್ಟರು.
ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಡಾ|ಲಿಂಗರಾಜ ಅಂಗಡಿ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕವಾರು ಭಾಷೆಯ ಉಚ್ಛಾರ ಬದಲಾಗುತ್ತದೆ. ಆದರೆ ಶುದ್ಧ-ಸ್ಪಷ್ಟ ಕನ್ನಡವನ್ನು ನಾವು ಉಳಿಸಿ-ಬೆಳೆಸಬೇಕಿದೆ. ಇಡೀ ಜಗತ್ತಿನಲ್ಲಿ ಸಂಸ್ಕೃತ ಮತ್ತು ಕನ್ನಡ ಭಾಷೆಗಳು ಮಾತ್ರ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ. ಇದನ್ನು ಉಳಿಸಿಕೊಂಡು ಹೋಗುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದರು.
ಬರುವ ವರ್ಷದೊಳಗೆ 3ಲಕ್ಷ ಹೊಸ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ರಾಜ್ಯದ ಪ್ರತಿ ಗ್ರಾಮಗಳಲ್ಲಿ ಕೂಡ ನಾನು ಪಾದಯಾತ್ರೆ ಮಾಡುತ್ತೇನೆ. ಮುಂದಿನ ಬಾರಿ ಮೊಬೈಲ್ ಆ್ಯಪ್ ಬಳಸಿ ಸುರಕ್ಷಿತವಾಗಿ ಮತ ಚಲಾಯಿಸುವಂತೆ ಮಾಡುತ್ತೇನೆ ಎಂದರು. ದೂರದರ್ಶನದಲ್ಲಿ ಚಂದನ ವಾಹಿನಿಯನ್ನು ಟಿವಿ 9 ಎಂದು ಕರೆಯುತ್ತಿದ್ದರು. ಆದರೆ ಅತ್ತರ್ (ಸುಗಂಧದ್ರವ್ಯ)ದಂತೆ ತಲೆ ನೋವು ಬರಿಸದೇ ಎಲ್ಲರಿಗೂ ಹಿತವಾದ ಕಂಪನ್ನೇ ಇದು ನೀಡುತ್ತಿತ್ತು. ಚಂದನ ಎಂದು
ಹೆಸರಿಟ್ಟು ಅದನ್ನು ಎಲ್ಲೆಡೆ ಪಸರಿಸುವಂತೆ ಮಾಡಿದೆ. ಅದೇ ಮಾದರಿಯಲ್ಲೇ ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋಧ್ಯೇಶಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದರು.
ಕಸಾಪ ಚುನಾವಣೆಯಲ್ಲಿ ನಾನು ಒಂದು ಪಕ್ಷದ ಬೆಂಬಲ ಪಡೆದುಕೊಂಡೆ ಎನ್ನುವ ಆರೋಪವಿದೆ. ಆದರೆ ನಾನು ಯಾವುದೇ ಪಕ್ಷದ ಬೆಂಬಲ ಪಡೆಯದೇ ಎಲ್ಲ ಸಿದ್ಧಾಂತಗಳನ್ನು ಒಪ್ಪಿಕೊಂಡು ಕೆಲಸ ಮಾಡುತ್ತೇನೆ.
ಮಹೇಶ ಜೋಶಿ,
ಕಸಾಪ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ