ಪಂ| ರಘುನಾಥ ನಾಕೋಡಗೆ ಪುಟ್ಟರಾಜ ಸಮ್ಮಾನ

ತಬಲಾ ಕಲಾವಿದರಿಗೆ ಇಂತಹ ಪ್ರಶಸ್ತಿ ದೊರೆತಿರುವುದೇ ದೊಡ್ಡ ಸಂಗತಿ.

Team Udayavani, Mar 4, 2022, 5:54 PM IST

ಪಂ| ರಘುನಾಥ ನಾಕೋಡಗೆ ಪುಟ್ಟರಾಜ ಸಮ್ಮಾನ

ಧಾರವಾಡ: ಪದ್ಮಭೂಷಣ ಡಾ| ಪುಟ್ಟರಾಜ ಗವಾಯಿಗಳ 109ನೇ ಜನ್ಮದಿನ ಅಂಗವಾಗಿ ನಗರದ ಸೃಜನಾ ರಂಗಮಂದಿರದಲ್ಲಿ ಗುರುವಾರ ನಡೆದ ಸಂಗೀತೋತ್ಸವದಲ್ಲಿ ಪ್ರಸಿದ್ಧ ತಬಲಾ ವಾದಕ ಪಂ|ರಘುನಾಥ ನಾಕೋಡ ಅವರಿಗೆ ಡಾ|ಪುಟ್ಟರಾಜ ಗವಾಯಿ ಪ್ರತಿಷ್ಠಾನ ಕೊಡಮಾಡುವ 1ಲಕ್ಷ ನಗದು, ಫಲಕ ಒಳಗೊಂಡ 2022ರ ಪುಟ್ಟರಾಜ ಸಮ್ಮಾನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಬೆಂಗಳೂರಿನ ಹಿಂದೂಸ್ತಾನಿ ಗಾಯಕ ಪಂ|ವಿನಾಯಕ ತೊರವಿ ಮಾತನಾಡಿ, ಪುಣ್ಯಾಶ್ರಮದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿ ಅವರು ತಮ್ಮಲ್ಲಿ ಬಂದ ಪ್ರತಿ ವಿದ್ಯಾರ್ಥಿಗೂ ವಿದ್ಯೆ, ಅನ್ನ, ಆಶ್ರಯ ನೀಡಿ ಬೆಳೆಸಿದ್ದಾರೆ. ಇಂತಹ ಆಶ್ರಮ ಇರುವುದು ದೇಶದಲ್ಲೇ ಏಕೈಕ. ಹೀಗಾಗಿ ಗವಾಯಿಗಳು ನಿಜಕ್ಕೂ ಭಾರತರತ್ನರೇ. ಕಲೆ-ಆಧ್ಯಾತ್ಮ ಎರಡೂ ಇಂದಿಗೂ ಇರುವುದು ಅವರ ಆಶೀರ್ವಾದವೇ ಸರಿ ಎಂದರು.

ಪ್ರತಿ ಸಂಗೀತಗಾರನ ಯಶಸ್ಸಿನ ಅರ್ಧದಷ್ಟು ಶ್ರೇಯ ತಬಲಾ ಸಾಥ್‌ ನೀಡುವವರಿಗೆ ಸಲ್ಲಬೇಕು. ಪ್ರತಿ ಸಂಗೀತಗಾರರ ಕೂಸಿಗೆ ಕೂಸಾಗುವ ಗುಣ ರಘುನಾಥ ನಾಕೋಡ ಅವರಿಗೆ ಸಲ್ಲುತ್ತದೆ. ತಬಲಾವನ್ನು ನಿರ್ಲಕ್ಷಿಸಿದರೆ ಸಂಗೀತ ಪ್ರಿಯರ ಮನ ತಣಿಸಲು ಸಾಧ್ಯವಿಲ್ಲ ಎಂದರು.

ಸಂಗೀತ ಎಂಬುದು ಯಾರ ಮನೆ ಆಸ್ತಿಯೂ ಅಲ್ಲ. ಗುರುವನ್ನು ಅನು ಸರಿಸಿ, ಕಠಿಣ ಅಭ್ಯಾಸ ಮಾಡುವವರಿಗೆ ಸಂಗೀತ ಒಲಿಯುತ್ತದೆ. ಎಂಜಿನಿಯರ್‌, ವೈದ್ಯರು-ವಕೀಲರ ಮಕ್ಕಳು ಅದೇ ವೃತ್ತಿ ಅನುಸರಿಸಬಹುದು. ಆದರೆ ಸಂಗೀತವನ್ನು ಪಾಲಕರಿಂದ ಪಡೆಯಲು ಸಾಧ್ಯವಿಲ್ಲ. ಅದಕ್ಕೆ ಪೂರ್ವಜನ್ಮ ಸಂಸ್ಕಾರ ಅಗತ್ಯ. ಆದರೆ ತಂದೆಯನ್ನೇ ಗುರುವೆಂದು ಸ್ವೀಕರಿಸಿದ ನಾಕೋಡ ಕುಟುಂಬ ಸಂಗೀತದ ಎಲ್ಲಾ ಪ್ರಕಾರಗಳಲ್ಲೂ ಇದೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂ|ರಘುನಾಥ ನಾಕೋಡ, ತಬಲಾ ಕಲಾವಿದರಿಗೆ ಇಂತಹ ಪ್ರಶಸ್ತಿ ದೊರೆತಿರುವುದೇ ದೊಡ್ಡ ಸಂಗತಿ. ಅಜ್ಜಾರ ಆಶೀರ್ವಾದ ಹಾಗೂ ನಮ್ಮ ಕಾಯಕ ನಮ್ಮನ್ನು ಸದಾ ಕೈ ಹಿಡಿದಿದೆ. ಎಲ್ಲಾ ರೀತಿಯ ಸಂಗೀತಕ್ಕೂ ಅಗತ್ಯವಿರುವ ತಬಲ್‌ಜೀಗಳನ್ನು ಯಾರೂ ನಿರ್ಲಕ್ಷಿಸಬೇಡಿ ಎಂದು ಮನವಿ ಮಾಡಿದರು.

ಪ್ರತಿಷ್ಠಾನ ಉಪಾಧ್ಯಕ್ಷ ಶಂಕರ ಕುಂಬಿ ಮಾತನಾಡಿ, ಪಂಚಾಕ್ಷರಿ ಗವಾಯಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಬೇಕೆಂಬ ಹಲವು ವರ್ಷಗಳ ಬೇಡಿಕೆ ಇಂದಿಗೂ ಈಡೇರಿಲ್ಲ. ಈಗಲಾದರೂ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕೆಂದು ಒತ್ತಾಯಿಸಿದರು. ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಡಾ|ಪುಟ್ಟರಾಜ ಗವಾಯಿ ಪ್ರತಿಷ್ಠಾನ ಅಧ್ಯಕ್ಷ ಮಹಾಬಲೇಶ್ವರ ಹಾಸಿನಾಳ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ಪದ್ಮಶ್ರೀ ಡಾ|ಎಮ್‌. ವೆಂಕಟೇಶಕುಮಾರ ಸೇರಿದಂತೆ ಹಲವರು ಇದ್ದರು. ನಂತರ ಜರುಗಿದ ಸಂಗೀತೋ ತ್ಸವದಲ್ಲಿ ಜಮಖಂಡಿಯ ಮಾರುತಿ ನಾವಲಗಿ ಅವರ ಶಹನಾಯಿ ವಾದನಕ್ಕೆ ನಿಸಾರ್‌ ಅಹಮ್ಮದರ ತಬಲಾ ಸಾಥ್‌ ಸಂಗತ್‌, ಪಂ|ರಘುನಾಥ ನಾಕೋಡ ಅವರ ತಬಲಾ ಸೋಲೋ ವಾದನಕ್ಕೆ ಲೆಹೆರಾದಲ್ಲಿ ಪಂ|ಶಂಕರ ಕಬಾಡಿ
ಸಾಥ್‌ ಸಂಗತ್‌ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.