ಗುಣಮಟ್ಟದ ಶಿಕ್ಷಣ ಬೋಧಿಸುವ ಗುರುಗಳು ಅಗತ್ಯ


Team Udayavani, Sep 3, 2018, 5:23 PM IST

3-september-23.jpg

ಕಲಘಟಗಿ: ತನ್ನನ್ನು ತಾನು ಸುಟ್ಟು ಬೆಳಕನ್ನು ಯಾವುದೇ ಭೇದ ಭಾವವಿಲ್ಲದೇ ನೀಡುವ ಜ್ಯೋತಿ ಸ್ವರೂಪದಂತೆ ಗುಣಮಟ್ಟದ ಶಿಕ್ಷಣ ಬೋಧಿಸುವ ಗುರುಗಳು ಇಂದು ವಿಶ್ವದಾದ್ಯಂತ ಅತೀ ಅವಶ್ಯವಾಗಿದ್ದಾರೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು. ಪಟ್ಟಣದ ಜನತಾ ಇಂಗ್ಲಿಷ್‌ ಮತ್ತು ಗರ್ಲ್ಸ್‌ ಇಂಗ್ಲಿಷ್‌ ಸ್ಕೂಲ್‌ನ 1997-98ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ 1999-2000ನೇ ಸಾಲಿನ ಜಿ.ಇ. ಕಾಲೇಜಿನ ಪಿಯು ವಿದ್ಯಾರ್ಥಿಗಳು ತಾವು ಕಲಿತ ಶಾಲೆಯಲ್ಲಿಯೇ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಬೆಲೆ ಕಟ್ಟಲಾಗದ ಯಾವುದಾದರೊಂದು ಸ್ಥಾನವಿದ್ದರೆ ಅದು ಗುರುವಿನ ಸ್ಥಾನ. ಕಳೆದ 20 ವರ್ಷಗಳಿಂದ ಸಮಾಜದ ನಾನಾ ರಂಗಗಳಲ್ಲಿ ತಮ್ಮದೇ ಆದ ವೈಶಿಷ್ಟಪೂರ್ಣ ಜೀವನ ನಡೆಸುತ್ತಿದ್ದು, ಇಂದು ಎಲ್ಲರೂ ಒಂದೆಡೆ ಸೇರಿ ತಮ್ಮ ಬಾಲ್ಯದ ಗುರುಗಳನ್ನು ನೆನೆಯುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಲ್ಲಿನ ಶಿಕ್ಷಣ ಸಂಸ್ಥೆಯಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನೂ ಅಭಿನಂದಿಸಿದರು.

ಕಲಘಟಗಿ ಶಿಕ್ಷಣ ಸಮಿತಿಯ ಜನತಾ ಇಂಗ್ಲಿಷ್‌ ಸ್ಕೂಲ್‌, ಪ್ರೊಗ್ರೆಸ್ಸಿವ್‌ ಎಜುಕೇಶನಲ್‌ ಸೊಸೈಟಿಯ ಗರ್ಲ್ಸ್‌ ಇಂಗ್ಲಿಷ್‌ ಸ್ಕೂಲ್‌ ಹಾಗೂ ಜಿ.ಇ. ಸಂಯುಕ್ತ ಪಿಯು ಮಹಾವಿದ್ಯಾಲಯದ ಆಡಳಿತ ಮಂಡಳಿಯವರನ್ನು, ನಿವೃತ್ತ ಮತ್ತು ಹಾಲಿ ಗುರುವೃಂದದವರನ್ನು ಹಾಗೂ ಬೋಧಕೇತರ ಸಿಬ್ಬಂದಿಯನ್ನೂ ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿದರು.

ಹನ್ನೆರಡುಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಂಸ್ಥೆಯ ಚೇರ್‌ಮನ್‌ ಡಾ| ಎಚ್‌.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಬಿ. ಪಾಟೀಲಕುಲಕರ್ಣಿ, ನಿರ್ದೇಶಕರಾದ ಎಸ್‌.ಎಸ್‌. ಸಾವುಕಾರ, ವಾಮನ ನಾಡಗೇರ, ಎಮ್‌.ಎ. ವರದಾನಿ, ಪ್ರಾಚಾರ್ಯ ಎಸ್‌.ಎಸ್‌. ಹಾವೇರಿ, ಮುಖ್ಯೋಪಾಧ್ಯಾಯರಾದ ಕೆ.ಐ. ಕೊಂಗಿ, ಶ್ರೀಧರ ಪಾಟೀಲಕುಲಕರ್ಣಿ, ಸೈನಿಕ ಸೇವೆಯಲ್ಲಿರುವ ಹಳೆಯ ವಿದ್ಯಾರ್ಥಿ ಎನ್‌.ಸಿ. ಪಾಟೀಲ ಮಾತನಾಡಿದರು. ನಿವೃತ್ತ ಶಿಕ್ಷಕರಾದ ಎಲ್‌.ಆರ್‌. ಯಾದಪ್ಪನವರ, ಎ.ಜಿ. ಅಸೂಟಿ, ಯು.ಜಿ. ಅಸೂಟಿ, ಆರ್‌.ಎಲ್‌. ಕುಲಕರ್ಣಿ, ಆರ್‌.ಸಿ. ಕರಗುದರಿ, ಎಸ್‌.ಡಿ. ಪೂಜಾರ ಸನ್ಮಾನ ಸ್ವೀಕರಿಸಿದರು. ಹಳೆಯ ವಿದ್ಯಾರ್ಥಿಗಳಾದ ದೀಪಕ ಶೆಟ್ಟಿ, ಸಂತೋಷ ವಾಲಿಶೆಟ್ಟರ, ಮುಕುಂದ ಢವಳೆ, ರಾಘವೇಂದ್ರ ಅಳ್ನಾವರ, ರಾಜಶೇಖರ ದಾಗಿನದಾರ, ಪ್ರಕಾಶ ಬೆಟದೂರ, ಮೃತ್ಯುಂಜಯ ಬಾಳಿಕಾಯಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಅಕ್ಷತಾ ಕರಡೆಣ್ಣವರ ಮತ್ತು ಮಂಜುಳಾ ಜಾವೂರ ನಿರೂಪಿಸಿದರು. ಪರಿಮಳಾ ದೇಶಪಾಂಡೆ ಸ್ವಾಗತಿಸಿದರು. ಡಾ| ತ್ರಿವೇಣಿ ಸಾವಂತ ಪ್ರಾಸ್ತಾವಿಕ ಮಾತನಾಡಿದರು. ಮಹೇಶ ಪತ್ತಾರ ವಂದಿಸಿದರು.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.