ಜಿಲ್ಲಾಸ್ಪತ್ರೆಯಲ್ಲಿ ಶೀಘ್ರ ಹೈಟೆಕ್‌ ಸೇವೆ


Team Udayavani, Aug 16, 2017, 12:57 PM IST

hub1.jpg

ಧಾರವಾಡ: ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿದ್ದು, ಇನ್ನು ಮೂರು ತಿಂಗಳಲ್ಲಿ ಸಿಟಿ ಸ್ಕ್ಯಾನ್‌, ಎಂ.ಆರ್‌.ಐ. ಸ್ಕ್ಯಾನ್‌ ಸೇರಿದಂತೆ ಎಲ್ಲ ಹೈಟೆಕ್‌ ವೈದ್ಯಕೀಯ ಸೇವೆಗಳು ಇನ್ನು ಮೂರು ತಿಂಗಳಲ್ಲಿ ಜನರಿಗೆ ಲಭ್ಯವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ಇಲ್ಲಿನ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ 71ನೇ ಸ್ವಾತಂತ್ರೊತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಇಲ್ಲಿನ ಸಿವಿಲ್‌ ಆಸ್ಪತ್ರೆ ಬಡವರಿಗಾಗಿ ಇರುವಂತದ್ದಾಗಿದ್ದು, ಇದರಲ್ಲಿ ಅನೇಕ ಸೌಲಭ್ಯಗಳನ್ನು ಈಗಾಗಲೇ ನೀಡಲಾಗಿದೆ. ಇದರ ಜೊತೆಗೆ ನ್ಯೂವಾರ್ಡ ಬ್ಲಾಕ್‌, ಐಸೋಲೇಷನ್‌ ಜಿ.ಇ. ವಾರ್ಡ, ಕಿಚನ್‌ ಬ್ಲಾಕ್‌, ಸರ್ಜಿಕಲ್‌ ವಾರ್ಡ, ಮೆಡಿಕಲ್‌ ಮತ್ತು ಪೀಡಿಯಾಟ್ರಿಕ್‌ ವಾರ್ಡುಗಳ ನವೀಕರಣ ಕಾರ್ಯ ಪೂರ್ಣಗೊಂಡಿದೆ.

ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಆಸ್ಪತ್ರೆ ಆವರಣದಲ್ಲಿ ಸಿ.ಟಿ. ಸ್ಕ್ಯಾನ್‌ ಮತ್ತು ಎಂ.ಆರ್‌.ಐ. ಸ್ಕ್ಯಾನ್‌ ಸೆಂಟರ್‌ ಗಳನ್ನು ಹಾಗೂ ರಕ್ತಕೋಶ ವಿಂಗಡಣಾ ಘಟಕವನ್ನು ಸ್ಥಾಪಿಸಿದ್ದು, ಇನ್ನು ಮೂರು ತಿಂಗಳಲ್ಲಿ ಸಾರ್ವಜನಿಕರಿಗೆ ಎಲ್ಲ ಸೇವೆಗಳು ಲಭ್ಯವಾಗಲಿವೆ ಎಂದು ಹೇಳಿದರು. 

ಅಭಿವೃದ್ಧಿಯಲ್ಲೂ ಮುಂದೆ: ಜಿಲ್ಲೆಯಲ್ಲಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ  ಕಾರ್ಯಗಳನ್ನು ಅಂಕಿ-ಅಂಶಗಳ ಸಮೇತ ವಿವರಿಸಿದ ಸಚಿವ ವಿನಯ, ಧಾರವಾಡ ಜಿಲ್ಲೆಯಲ್ಲಿ 22,207 ರೈತರಿಗೆ 7996.87 ಲಕ್ಷ ರೂ.ಗಳ ಸಾಲಮನ್ನಾ ಸೌಲಭ್ಯ ಸಿಗಲಿದೆ. ಇದರ ಜೊತೆಗೆ ಕಳೆದ ಜೂನ್‌ 30ರ ವರೆಗೆ 1910 ರೈತರ 194.67 ಲಕ್ಷ ರೂಪಾಯಿ ಬಡ್ಡಿಯನ್ನೂ ಸಹ ಮನ್ನಾ ಮಾಡಲಾಗಿದೆ ಎಂದರು. 

ಜುಲೈ 2017ರವರೆಗೆ ಜಿಲ್ಲಾದ್ಯಂತ ಒಟ್ಟು 6797 ಕೃಷಿ ಹೊಂಡಗಳನ್ನು  ನಿರ್ಮಿಸಲಾಗಿದೆ. ಒಟ್ಟು 5710 ರೈತರಿಗೆ ಒಟ್ಟು 4373.4 ಲಕ್ಷ ರೂ.ಗಳ ಸಹಾಯಧನ ನೀಡಲಾಗಿದೆ. ಧಾರವಾಡ  ತಾಲೂಕಿನ ಐದು ಗ್ರಾಮಗಳಲ್ಲಿನ 9 ಕೆರೆಗಳಿಗೆ ತುಪ್ಪರಿಹಳ್ಳದ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 22.5 ಕೋಟಿ  ರೂ. ಮೀಸಲಿರಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಹಂಗರಕಿ, ದುಬ್ಬನಮರಡಿ ಗ್ರಾಮಗಳೂ ಸೇರಿದಂತೆ ಕೆರೆಗಳಿರುವ ಊರುಗಳಲ್ಲಿನ ಸುಮಾರು 10 ಸಾವಿರ ಎಕರೆ ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಇದೆ. ಅದೇ ರೀತಿ ಕಲಘಟಗಿ ತಾಲೂಕಿನ ರೈತರ ಬಹುದಿನಗಳ ಬೇಡಿಕೆಯಾದ ಬೇಡ್ತಿ ಹಳ್ಳದಿಂದ 35 ಕೆರೆಗಳಿಗೆ ನೀರು ತುಂಬಿಸುವ ಮೊದಲ ಹಂತದ 125 ಕೋಟಿ ರೂಪಾಯಿಗಳ ವೆಚ್ಚದ ಯೋಜನೆಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿರುವದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.  

ಸ್ವತ್ಛ ಭಾರತಕ್ಕೆ ಒತ್ತು: ಸ್ವತ್ಛ ಭಾರತ ಅಭಿಯಾನ ಕಾರ್ಯಕ್ರಮದಡಿ ಈ ವರ್ಷ 46,368 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 42 ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳಾಗಿವೆ. ಬರುವ ಅಕ್ಟೋಬರ್‌ ಎರಡರೊಳಗಾಗಿ ಜಿಲ್ಲಾದ್ಯಂತ ಪ್ರತಿ ಮನೆಗಳಿಗೂ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ವಿನಯ್‌ ಹೇಳಿದರು. 

ಸರ್ಕಾರವು ಗ್ರಾಮೀಣ ಕುಡಿವ ನೀರು ಪೂರೈಕೆಗೆ ಹೆಚ್ಚು ಆದ್ಯತೆ ನೀಡಿದೆ. ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಿಲ್ಲೆಗೆ 24.71 ಕೋಟಿ ರೂ.ಗಳ ಅನುದಾನ ದೊರೆತಿದೆ. ತುರ್ತು ಕುಡಿವ ನೀರು ಒದಗಿಸಲು ಸರ್ಕಾರವು ಟಾಸ್ಕ್ರ್ಸ್‌ ಅಡಿಯಲ್ಲಿ ಜಿಲ್ಲೆಗೆ  8.80 ಕೋಟಿ ರೂ. ಅನುದಾನ ನೀಡಿದೆ.

ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಎಲ್ಲ ಅರ್ಹ ಫಲಾನುಭವಿಗಳಿಗೆ ವರ ಬೇಡಿಕೆಗೆ ಅನುಸಾರ ಮನೆ ಮಂಜೂರು ಮಾಡಲಾಗುತ್ತಿದೆ. ಬಸವ ವಸತಿ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ.90ರಷ್ಟು ಹಾಗೂ ಅಲ್ಪಸಂಖ್ಯಾತರಿಗೆ ಶೇ.10ರಷ್ಟು ಮನೆಗಳನ್ನು ಒದಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.  

ಸ್ಮಾರ್ಟ್‌-ಸಿಟಿಗೂ ಒತ್ತು: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌-ಸಿಟಿ ಯೋಜನೆಯಲ್ಲಿ ಎಸ್‌.ಪಿ.ವ್ಹಿ. ಸಂಸ್ಥೆಯನ್ನು ಆನ್‌-ಲೈನ್‌ ಮೂಲಕ ನೋಂದಾಯಿಸಲಾಗುತ್ತದೆ. ಈಗಾಗಲೇ ಪಾಲಿಕೆಯಿಂದ ಯೋಜನೆಯ ಮಾರ್ಗಸೂಚಿಯಂತೆ ಪೊಜೆಕ್ಟ್ ಮ್ಯಾನೇಜಮೆಂಟ್‌ ಕನ್ಸಲಟೆಂಟ್‌ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ. 

ಸ್ಮಾರ್ಟ್‌-ಸಿಟಿ ಯೋಜನೆಯಲ್ಲಿ 1,667 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು 5 ವರ್ಷಗಳಲ್ಲಿ ಅನುಷ್ಠಾನಗೊಳ್ಳುವ ಪ್ರಮುಖ ನಗರಾಭಿವೃದ್ಧಿ ಯೋಜನೆ ಆಗಿರುತ್ತದೆ. ಈ ದಿಸೆಯಲ್ಲಿ ಕೇಂದ್ರ ಸರಕಾರದೊಂದಿಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ಒದಗಿಸಲಾಗುತ್ತದೆ.  

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.