ಕಾಳಿನದಿ ಯೋಜನೆ ಶೀಘ್ರ ಆರಂಭ
Team Udayavani, Aug 7, 2017, 11:25 AM IST
ಅಳ್ನಾವರ: ಪಟ್ಟಣದ ಜನರಿಗೆ ಕುಡಿವ ನೀರು ಪೂರೈಸುವ ಶಾಶ್ವತ ಯೋಜನೆಯಾದ ಕಾಳಿ ನದಿಯಿಂದ ನೀರು ತರುವ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದೆಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಪಟ್ಟಣದಲ್ಲಿ ರವಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕಾಳಿ ನದಿ ಯೋಜನೆಗೆ ಸರ್ಕಾರ 72 ಕೋಟಿ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬೇಕು. ಅನಧಿಕೃತ ನಿರ್ಮಾಣಗೊಂಡಿರುವ ಬಡಾವಣೆಗಳನ್ನು ಸಕ್ರಮಗೊಳಿಸಲು ಅಡಚಣೆಯಾಗಿರುವ ಕಾನೂನು ತೊಡಕುಗಳ ಬಗ್ಗೆ ಚರ್ಚಿಸಿದರು.
ಆಶ್ರಯ ಯೋಜನೆಯಡಿ ನಿವೇಶನ ಒದಗಿಸಲು ಅಗತ್ಯ ಜಮೀನು ಖರೀದಿಸಲು ಸೂಕ್ತ ಭೂಮಿ ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಕಳುಹಿಸಬೇಕು. ಭೂಮಿ ನೀಡಲು ಮುಂದಾಗುವ ಮಾಲಕರಿಗೆ ಮಾರುಕಟ್ಟೆ ದರದ ಜೊತೆಗೆ ಹೆಚ್ಚುವರಿ ಹಣವನ್ನು ಪಪಂದಿಂದ ಭರಿಸುವಂತೆ ಸೂಚಿಸಿದರು.
ಕಾಳಿ ನೀರು ತರುವ ಯೋಜನೆಗೆ ಈಗಾಗಲೇ ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಜಾಕ್ವೆàಲ್ ನಿರ್ಮಾಣಕ್ಕೆ ಅವಶ್ಯವಿರುವ ಭೂಮಿಯ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅರಣ್ಯ ಇಲಾಖೆಯ ಪೂರ್ವಾನುಮತಿಗಾಗಿ ಇಲಾಖೆಯೊಂದಿಗೆ ಪತ್ರ ವ್ಯವಹಾರ ಮಾಡಲಾಗಿದೆ ಎಂದು ಜಲ ಮಂಡಳಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕಳೆದ ಬೇಸಿಗೆಯಲ್ಲಿ ಪಟ್ಟಣದ ಜನರಿಗೆ ಟ್ಯಾಂಕರ್ ಮೂಲಕ ಸುಮಾರು 94 ದಶ ಲಕ್ಷ ಲೀಟರ್ ನೀರು ಪೂರೈಸಲಾಗಿದೆ. ಸಮೀಕ್ಷೆಯಂತೆ ಪಟ್ಟಣದಲ್ಲಿ ಒಂದು ಸಾವಿರಕ್ಕೂ ಅ ಧಿಕ ಕುಟುಂಬಕ್ಕೆ ಶೌಚಾಲಯವಿಲ್ಲ. ಇವರ ಪೈಕಿ ಈಗಾಗಲೇ ನಾಲ್ಕು ನೂರು ಶೌಚಾಲಯಗಳ ನಿರ್ಮಾಣಗೊಳ್ಳುತ್ತಿವೆ. ನಿಗದಿತ ಗುರಿಯನ್ನು ಇನ್ನೊಂದು ತಿಂಗಳಲ್ಲಿ ತಲುಪಲಾಗುವುದೆಂದು ಎಂದು ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ಸಭೆಗೆ ತಿಳಿಸಿದರು.
ಯೋಜನಾ ನಿರ್ದೇಶಕ ರಮೇಶ ಕೋನರೆಡ್ಡಿ, ಧಾರವಾಡ ತಹಶೀಲ್ದಾರ ಪ್ರಕಾಶ ಕುದರಿ, ಪಪಂ ಪ್ರಭಾರಿ ಅಧ್ಯಕ್ಷ ಉಸ್ಮಾನ ಬಾತಖಂಡೆ, ಅಭಿಯಂತರ ಪಾಟೀಲ, ಉಪ ತಹಶೀಲ್ದಾರ ಟಿ.ಬಿ. ಬಡಿಗೇರ, ಕಂದಾಯ ನಿರೀಕ್ಷಕ ರಮೇಶ ಬಂಡಿ, ಶ್ರೀಕಾಂತ ಗಾಯಕವಾಡ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ ಬೈಕೇರಿಕರ, ಮಧು ಬಡಸ್ಕರ, ಛಗನ ಪಟೇಲ, ಪರಮೇಶ್ವರ ತೇಗೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್